ಸಿಂದಗಿ: ರಾಜ್ಯ ಸರ್ಕಾರ ಪೇಟ್ರೋಲ್-ಡಿಸೇಲ್ ಬೆಲೆ ಏರಿಕೆ ಮಾಡುವುದರೊಂದಿಗೆ ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ ನೀಡಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.
ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸುವುದಕ್ಕಾಗಿ ತೈಲ ಬೆಲೆಯನ್ನು ರಾಜ್ಯ ಸರಕಾರ ಏರಿಕೆ ಮಾಡಿದೆ. ಲೋಕಸಭೆಯ ಚುಣಾವಣೆಯಲ್ಲಿ ಸೋಲಿನ ಹತಾಶೆ, ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯಿಂದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಡವಾಗಿದೆ ಎಂದು ಕೇವಲ ಭಂಡತನದಿಂದ ಮಾತನಾಡುವ ಸರ್ಕಾರ ಅಭಿವೃದ್ದಿ ಯೋಜನೆಗಳಿಗೆ ಹಣ ಬಿಡುಗಡೆಗೊಳಿಸದಂತಹ ಕಠಿಣ ಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ ಎಂದು ಆರೋಪಿಸಿದ ಅವರು, ನೀಡಿರುವ ಐದು ಗ್ಯಾರೆಂಟಿಗಳ ಕಾರಣದಿಂದ ರಾಜ್ಯದಲ್ಲಿ ಲೋಕಸಭೆಯ ಚುನಾವಣೆಯಲ್ಲಿ ಸುಮಾರು ೨೦ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿತ್ತು, ಆದರೆ ರಾಜ್ಯದ ಮತದಾರರು ರಾಜ್ಯ ಸರ್ಕಾರದ ದುರಾಡಳಿತಕ್ಕೆ ಜನತೆ ತಕ್ಕ ಉತ್ತರ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
Subscribe to Updates
Get the latest creative news from FooBar about art, design and business.
ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಬೆಲೆ ಏರಿಕೆ ಬರೆ :ಪಾಟೀಲ
Related Posts
Add A Comment

