Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ಭರವಸೆ; ಧರಣಿ ಕೈಬಿಟ್ಟ ಅಂಬೇಡ್ಕರ್ ಅಭಿಮಾನಿಗಳು
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ಭರವಸೆ; ಧರಣಿ ಕೈಬಿಟ್ಟ ಅಂಬೇಡ್ಕರ್ ಅಭಿಮಾನಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಕಳೆದ ೨೯ ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ಭೇಟಿ ನೀಡಿದ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನೀಡಿರುವ ಭರವಸೆಗೆ ಸ್ಪಂಧಿಸಿ, ಧರಣಿ ಕೈಬಿಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಉದ್ದೇಶಿತ ಜಾಗ ಸರ್ಕಾರದ್ದಾಗಿದೆ. ಆ ಜಾಗವನ್ನು ವಕ್ಪ ಆಸ್ತಿಯನ್ನಾಗಿ ಮಾಡಿಕೊಂಡಿದ್ದು, ಮರಳಿ ಸರ್ಕಾರಿ ಆಸ್ತಿಯನ್ನಾಗಿ ಮಾಡಲು ಎಲ್ಲಾ ರೀತಿಯ ಹೋರಾಟ ಮಾಡಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳು ಸಹ ನಮ್ಮಲ್ಲಿವೆ. ಸರ್ಕಾರಿ ಜಾಗ ಆದ ಬಳಿಕ, ಅದೇ ಜಾಗದಲ್ಲಿ ದಲಿತ ಸಮುದಾಯದವರಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
೨೯ ದಿನಗಳ ಅಂಬೇಡ್ಕರ ಸಮುದಾಯ ಭವನದ ಹೋರಾಟ ಯಾವುದೇ ರೀತಿಯಿಂದ ವಿಫಲವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಇಡೀ ದೇಶದಲ್ಲೇ ವಕ್ಪ ಆಸ್ತಿಯನ್ನು ಮರಳಿ ತೆಗೆದುಕೊಳ್ಳುವ ದೊಡ್ಡ ಹೋರಾಟಕ್ಕೆ ಮುನ್ನುಡಿ ಬರೆಯಲಿದೆ. ಇಡೀ ದೇಶದಲ್ಲಿರುವ ವಕ್ಪ ಆಸ್ತಿಯನ್ನು ಮರಳಿ ಸರ್ಕಾರಕ್ಕೆ ಪಡೆದುಕೊಂಡು, ಅದರಲ್ಲಿ ದಲಿತರು, ಹಿಂದುಳಿದವರು, ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಪ್ರಧಾನಮಂತ್ರಿಗಳಿಗೂ ಪತ್ರ ಬರೆಯುವೆ ಎಂದು ಹೇಳಿದರು.
ನೆಹರು ಜಾರಿಗೆ ತಂದಿರುವ ಈ ಕೆಟ್ಟ ವಕ್ಪ ಬೋರ್ಡ ಕಾನೂನನ್ನು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಕೂಡ ವಿರೋಧಿಸಿದ್ದರು. ಈ ವಕ್ಪ ಆಸ್ತಿ ಬಗ್ಗೆ ವಿಜಯಪುರ ಮಾತ್ರವಲ್ಲ, ಇಡೀ ದೇಶದಲ್ಲೇ ಬಹುದೊಡ್ಡ ಚರ್ಚೆ ನಡೆದಿದೆ ಎಂದು ತಿಳಿಸಿದರು.
ವಿಜಯಪುರ ನಗರದ ಮನಗೂಳಿ ರಸ್ತೆಯಲ್ಲಿರುವ ಸರ್ಕಾರಿ ಎರಡು ಎಕರೆ ಜಾಗದ ಪೈಕಿ ಒಂದು ಎಕರೆಯಲ್ಲಿ ಬಾಬು ಜಗಜೀವನ ರಾಮ ಹೆಸರಿನಲ್ಲಿ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದ್ದು, ಅದರ ಸುತ್ತಲೂ ಕಾಂಪ್ಲೆಕ್ಸ್ ಸಹ ನಿರ್ಮಾಣ ಮಾಡಲಾಗುವುದು. ಆ ಅಂಗಡಿಗಳನ್ನು ಎಸ್.ಸಿ, ಎಸ್.ಟಿ ಸಮುದಾಯವದರಿಗೆ ನೀಡಲಾಗುವುದು. ಅಲ್ಲದೆ, ಇದರ ಪಕ್ಕದಲ್ಲೇ ೧೦೦*೧೦೦ ಅಳತೆಯ ಜಾಗದಲ್ಲಿ ಅಂಬೇಡ್ಕರ್ ಸಮುದಾಯ ಭವನ ಸಹ ನಿರ್ಮಿಸಲಾಗುವುದು. ದಲಿತ ಸಮುದಾಯದವರಿಗೆ ಏನೇ ಅನ್ಯಾಯವಾದರೂ ನ್ಯಾಯ ಕೊಡಿಸಲು ಸದಾ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದರು.
ಬಬಲೇಶ್ವರ ನಾಕಾ ಬಳಿ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಅನುದಾನದಲ್ಲಿ ನಿರ್ಮಾಣ ಮಾಡಲಾದ ಸರ್ದಾರ ವಲ್ಲಭಬಾಯಿ ಪಟೇಲ್ ವಾಣಿಜ್ಯ ಸಂಕೀರಣದಲ್ಲಿ ಮುಸ್ಲಿಂ ಸಮುದಾಯದವರಿಗೆ ಅಂಗಡಿಗಳನ್ನು ಹಂಚಿಕೆ ಮಾಡಲು ಮೇಯರ್ ಹೇಳುತ್ತಿದ್ದಾರಂತೆ, ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಬೇರೆಯವರಿಗೆ ನೀಡಿದರೆ, ಹೋರಾಟ ಮಾಡುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.
ಧರಣಿ ಸ್ಥಳಕ್ಕೆ ತೆರಳುವ ಮೊದಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಜೊತೆಗೆ ಸಭೆ ನಡೆಸಿದ ಶಾಸಕರು, ಸರ್ಕಾರಿ ಆಸ್ತಿಯನ್ನು ವಕ್ಪ ಬೋರ್ಡಗೆ ಮಾಡಿಕೊಂಡಿರುವುದನ್ನು ಮರಳಿ ಸರ್ಕಾರಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ, ಬಿಜೆಪಿ ನಗರ ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ, ಮಹಾನಗರ ಪಾಲಿಕೆ ಸದಸ್ಯರಾದ ವಿಠ್ಠಲ ಹೊಸಪೇಟ, ಜವಾಹಾರ ಗೋಸಾವಿ, ಪ್ರೇಮಾನಂದ ಬಿರಾದಾರ, ಮುಖಂಡರಾದ ಮಡಿವಾಳ ಯಾಳವಾರ, ರಾಜಶೇಖರ ಭಜಂತ್ರಿ, ದಾದಾಸಾಹೇಬ ಬಾಗಾಯತ, ನಾಗಪ್ಪ ಗುಗ್ಗರಿ, ರವಿ ಗರಸಂಗಿ, ತಮ್ಮಣ್ಣ ಗಂಜನ್ನವರ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.