ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶುಕ್ರವಾರ ಜೂನ್.೨೧ರ ಬೆಳಿಗ್ಗೆ ೬ ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಆರ್. ಗುಂಡೂರಾವ್, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ,ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸಂಸದರಾದ ಶ್ರೀಮತಿ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ. ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಮಹೇಜಬಿನ ಅಬ್ದುಲರಜಾಕ ಹೊರ್ತಿ,ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ ಮುಶ್ರೀಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಅನೀಲ್ ಟಿ.ಕೆ, ಆಯುಷ್ ಇಲಾಖೆಯ ಆಯುಕ್ತರಾದ ಶ್ರೀನಿವಾಸಲು ಅವರು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
