Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಗೋಳ ವಿಸ್ಮಯ: ಆಗಸದಲ್ಲಿ ಕಾಣಿಸಿದ ಪ್ರಕೃತಿ ಅಚ್ಚರಿ
(ರಾಜ್ಯ ) ಜಿಲ್ಲೆ

ಖಗೋಳ ವಿಸ್ಮಯ: ಆಗಸದಲ್ಲಿ ಕಾಣಿಸಿದ ಪ್ರಕೃತಿ ಅಚ್ಚರಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಾಣಿಸಿದ ಪ್ರಕೃತಿಯ ವಿಸ್ಮಯ ಎಲ್ಲರನ್ನು ಕೌತುಕಗೊಳಿಸಿದೆ.
ನಭೋ ಮಂಡಲದಲ್ಲಿ ಕಂಡು ಬಂದ ಈ ಖಗೋಳ ವಿಸ್ಮಯ ಜನರ ಅಚ್ಚರಿಗೆ ಕಾರಣವಾಗಿದೆ. ಸೂರ್ಯನ ಸುತ್ತ ಕಂಡು ಬಂದ ಕಾಮನಬಿಲ್ಲು ಆಕಾರದ ಉಂಗುರ ಸೂರ್ಯನಿಗೆ ವರ್ತುಲ ಹಾಕಿದಂತಿತ್ತು. ಪ್ರಕಾಶಮಾನವಾದ ಈ ವಿಸ್ಮಯ ಕಂಡು ಜನ ಬೆರಗಾಗಿದ್ದಾರೆ.
ಘೊಣಸಗಿ ಲಂಬಾಣಿ ತಾಂಡಾ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಪರಮೇಶ್ವರ ಗದ್ಯಾಳ ಮಕ್ಕಳಿಗೆ ಈ ಕೌತುಕ ತೋರಿಸಿ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೃಷಿ ಮತ್ತು ಹವಾಮಾನ ತಜ್ಞ ಡಾ. ಎಚ್. ವೆಂಕಟೇಶ್, ಇದೊಂದು ನೈಸರ್ಗಿಕ ಪ್ರಕ್ರಿಯೆಯಾಗಿದೆ. ಸೂರ್ಯನಿಂದ ಬರುವ ಪ್ರಕಾಶಮಾನ ಕಿರಣಗಳಿಂದ ಇದು ಉಂಟಾಗುತ್ತದೆ. ಭೂಮಂಡಲದಿಂದ ಎತ್ತರದಲ್ಲಿರುವ ತೆಳುವಾದ ಮೋಡಗಳಲ್ಲಿ ಸೂರ್ಯನ ಕಿರಣಗಳು ಬಿದ್ದಾಗ ಈ ವೃತ್ತ ಕಾಣಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. ಇದಕ್ಕೆ ತೆಳು ಮೋಡಗಳು (Cirrus Clouds) ಎಂದು ಕರೆಯಲಾಗುತ್ತದೆ. ವಾತಾವರಣದಲ್ಲಿ ತೆಳುವಾದ ಮೋಡ ಎತ್ತರದಲ್ಲಿರುತ್ತದೆ. ಸುಮಾರು 12 ರಿಂದ 15 ಕಿ. ಮೀ. ಎತ್ತರದಲ್ಲಿ ವಕ್ರೀಭವನ (ರಿಪ್ರ್ಯಾಕ್ಷನ್) ಉಂಟಾಗಿ‌ ಸೂರ್ಯನ ಸುತ್ತಲೂ ಈ ರೀತಿಯ ಉಂಗುರ ಕಾಣಿಸುತ್ತದೆ. ಕೆಲ ಸಮಯದ ನಂತರ ಇದು ಮಾಯವಾಗುತ್ತದೆ. ಇದರಿಂದ ಯಾವುದೇ ಸಮಸ್ಯೆಯಿಲ್ಲ. ಇದೊಂದು ನೈಸರ್ಗಿಕ ಪ್ರಕ್ರಿಯೆ. ಇದನ್ನು ಇಂಗ್ಲೀಷ್ ನಲ್ಲಿ Halo(ಪ್ರಭಾವಲ) ಎಂದು ಕರೆಯುತ್ತಾರೆ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ವಿಜಯಪುರದಲ್ಲಿ ಇಂಥ ಕೌತುಕ ಕಂಡು ಬಂದಿತ್ತು. ಸುಮಾರು ಎರಡು ವರ್ಷಗಳ ಹಿಂದೆ ನಿಡಗುಂದಿ ಪೊಲೀಸ್ ಠಾಣೆಯ ಬಳಿ‌ ಕಂಡು ಬಂದಿದ್ದ ಇಂಥ ದೃಶ್ಯವನ್ನು ಪೊಲೀಸರೊಬ್ಬರು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದರು.
ಈ ಕುರಿತು ವಿಜ್ಞಾನಿಗಳು ಇನ್ನೂ ಹೆಚ್ಚಿನ ಅಧ್ಯಯನ ನಡೆಸಬೇಕಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.