ಚಡಚಣ: ನಾನು ಶಾಸಕನಿದ್ದಾಗ ಮತಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯ ಪರಿಗಣಿಸಿ ಹಾಗೂ ಕಾಂಗ್ರೆಸ್ ಪಕ್ಷದ ಜನಪರ ಆಡಳಿತಕ್ಕೆ ಬೆಂಬಲಿಸಿ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಮನವಿ ಮಾಡಿದರು.
ತಾಲೂಕಿನ ಶಿಗಣಾಪುರ ಗ್ರಾಮದಲ್ಲಿ ಮತಯಾಚಿಸಿ ಅವರು ಮಾತನಾಡಿದರು.
ಮುಖಂಡ ಎಂ ಆರ್ ಪಾಟೀಲ ಮಾತನಾಡಿ, ಪ್ರಾಮಾಣಿಕ ಹಾಗೂ ಸೌಮ್ಯ ಸ್ವಭಾವದ ಕಟಕದೊಂಡ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತಮ್ಮ ಸೌಮ್ಯ ಸ್ವಭಾವದಿಂದ ಮತಕ್ಷೇತ್ರದ ಪ್ರತಿಯೊಬ್ಬ ಮತದಾರರ ಮನದಲ್ಲಿದ್ದಾರೆ. ಒಬ್ಬರು ಅಭಿವೃದ್ಧಿ ಮಾಡುವವರಲ್ಲ, ಇನ್ನೊಬ್ಬರು ಅಭಿವೃದ್ಧಿ ಮಾಡೋದಕ್ಕೆ ಬಿಡುವವರಲ್ಲ. ಹೀಗಾಗಿ ಮತಕ್ಷೇತ್ರ ಅಭಿವೃದ್ಧಿ ಕಾಣದೆ ಕಂಗಾಲಾಗಿದೆ. ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಈ ಬಾರಿ ಯಾವುದೇ ಕಾರಣಕ್ಕೂ ಬೇರೆಯವರನ್ನು ಬೆಂಬಲಿಸದೇ ಕಾಂಗ್ರೆಸ್ ಅಭ್ಯರ್ಥಿ ಕಟಕದೊಂಡ ಅವರನ್ನು ಬೆಂಬಲಿಸಿ ಎಂದರು.
ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಗೌಡ ಪಾಟೀಲ ಹಾಗೂ ಅನೇಕರಿದ್ದರು
Subscribe to Updates
Get the latest creative news from FooBar about art, design and business.
Related Posts
Add A Comment