Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘ ಅನಿರ್ಧಿಷ್ಟ ಧರಣಿ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆದಾರರ ಸಂಘ ಅನಿರ್ಧಿಷ್ಟ ಧರಣಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ವಲಯದ ಎಲ್ಲ ಕಾಲುವೆಗಳು, ವಿದ್ಯುತ್ ಕಾಮಗಾರಿಗಳ ಹಾಗೂ ಇತರೆ ಕೆಲಸಗಳ ದುರಸ್ತಿ ಮತ್ತು ನಿರ್ವಹಣೆಗೆ ಹಣಕಾಸಿನ ಮಂಜೂರಾತಿ ನೀಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ಕೆಬಿಜೆನ್ನೆಲ್ ಮುಖ್ಯ ಅಭಿಯಂತರರ ಕಚೇರಿ ಆವರಣದಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದರು.
ಸಂಘದ ಅಧ್ಯಕ್ಷ ಎಂ.ಎ.ಮೇಟಿ, ಗೌರವಾಧ್ಯಕ್ಷ ಜಿ.ಸಿ.ಮುತ್ತಲದಿನ್ನಿ, ಉಪಾಧ್ಯಕ್ಷ ಶಿವಗೊಂಡಪ್ಪ ಗದಿಗೆಪ್ಪಗೌಡರ, ಸಿ.ಜಿ.ವಿಜಯಕರ, ಬಸವರಾಜ ಬಾಗೇವಾಡಿ ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಕರೆಯಲಾದ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ಕ್ರಮಕೈಗೊಂಡು ಕಾಮಗಾರಿಗಳ ಬಿಡ್‌ನಲ್ಲಿ ಭಾಗವಹಿಸಿದ ಗುತ್ತಿಗೆದಾರರ ಮಂಗಡ ಹಣ ಆಯಾ ಗುತ್ತಿಗೆದಾರರಿಗೆ ಮರಳಿಸಬೇಕು. ಆಲಮಟ್ಟಿ ವಲಯದ ೨೦೨೪-೨೫ನೇ ಆರ್ಥಿಕ ವರ್ಷದ ಕಾಮಗಾರಿಗಳ ಕ್ರಿಯಾಯೋಜನೆಗೆ ತಕ್ಷಣ ಮಂಜೂರಾತಿ ನೀಡಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಕಾಲುವೆಗಳ ದುರಸ್ತಿ ಮತ್ತು ನೂತನ ಮುಖ್ಯ ಕಾಲುವೆ, ವಿತರಣಾ ಕಾಲುವೆ, ಸೀಳು ಕಾಲುವೆ,
ಉಪಕಾಲುವೆಗಳ ನಿರ್ಮಾಣ ಕಾಮಗಾರಿಗಳನ್ನು ಪ್ಯಾಕೇಜ್ ಪದ್ಧತಿಗೆ ಒಳಪಡಿಸದೆ ವಿಂಗಡಣೆ
ಮಾಡಿ ಟೆಂಡರ್ ಕರೆಯಬೇಕು. ಒಂದು ಕೋಟಿ ರೂ.ಮೊತ್ತದ ಕಾಮಗಾರಿಗಳ ಟೆಂಡರ್‌ಗಳಲ್ಲಿ
ಭಾಗವಹಿಸುವ ಗುತ್ತಿಗೆದಾರರಿಗೆ ಅನವಶ್ಯಕ ಷರತ್ತುಗಳನ್ನು ಹಾಕುವುದನ್ನು ಹಾಗು ಕಾಮಗಾರಿಗಳನ್ನು ನಿರ್ವಹಿಸಿದ ಪ್ರಮಾಣ ಪತ್ರ ಕೇಳುವುದನ್ನು ನಿರ್ಭಂಸಬೇಕು ಎಂದರು.
ಕ್ಲೋಸರ್, ವಿಶೇಷ ದುರಸ್ತಿ ಹಾಗೂ ೧೦ ಲಕ್ಷ ರೂ.ಗಳ ಒಳಗಿನ ಕಾಮಗಾರಿಗಳನ್ನು ೪ಜಿ
ವಿನಾಯತಿ ಪಡೆದು ನೇರವಾಗಿ ಗುತ್ತಿಗೆದಾರರಿಗೆ ನೀಡಬೇಕು. ಬಜೆಟ್‌ನಲ್ಲಿ ಘೋಷಿಸಿದ್ದಂತೆ ಇತರೆ ಹಿಂದುಳಿದ ವರ್ಗಗಳಿಗೆ ಕಾಮಗಾರಿಗಳ ಟೆಂಡರನಲ್ಲಿ ಶೇ.೨೦ರಷ್ಟು ಮೀಸಲಾತಿ ನೀಡಬೇಕು. ಕಾಮಗಾರಿಗಳ ಟೆಂಡರ್ ಪ್ರಕ್ರಿಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ನಿರ್ಬಂಧ ಹಾಕಬೇಕು. ಪೂರ್ಣಗೊಂಡ ಕಾಮಗಾರಿಗಳ ಬಿಲ್ ವ್ಯವಸ್ಥಾಪಕ ನಿರ್ಧೇಶಕರ ಕಚೇರಿಗೆ ಸಲ್ಲಿಸಲಾಗಿದ್ದು ಈ ಬಿಲ್‌ಗಳಿಗೆ ಹಣ ಬಿಡುಗಡೆ ಮಾಡಬೇಕು. ಗುತ್ತಿಗೆದಾರರು ಪೂರ್ಣಗೊಳಿಸಿದ ಕಾಮಗಾರಿಗಳ ಹಣ ಮಂಜೂರಾತಿ ಪಡೆಯಲು ಬೆಂಗಳೂರಿಗೆ ಹೋಗುವ ಪರಿಪಾಠ ತಪ್ಪಿಸಬೇಕು. ಕೆಬಿಜೆನ್ನೆಲ್ ಕರೆಯಲಾಗುವ ಹಾಗೂ ಇತರ ಇಲಾಖೆಗಳಲ್ಲಿ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸುವ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಸಂತ್ರಸ್ತರ ಗುತ್ತಿಗೆದಾರರಿಗೆ ಆದ್ಯತೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ವೆಂಕಟೇಶ ನಾಯಕ, ಟಿ.ಎಸ್.ಅಫಜಲಪೂರ, ಯಲ್ಲಪ್ಪ ನಾಗರಾಳ, ಜಿ.ಸಿ.ರಾಠೋಡ, ಗೋಪಾಲ ಬಂಡಿವಡ್ಡರ, ವೈ.ವೈ.ಬಿರಾದಾರ,. ಎಚ್.ಎಲ್.ಲಮಾಣಿ, ಹನುಮಂತ ಪೂಜಾರಿ, ಬಸವರಾಜ
ಬಾದರದಿನ್ನಿ, ನಾಮದೇವ ರಾಠೋಡ, ಮಹಾಂತೇಶ ಡೆಂಗಿ, ಚನ್ನಪ್ಪ ಅಂಗಡಿ, ವಿಜಯ ಕಿರಸೂರ,
ಎಂ.ಆರ್.ಕಮತಗಿ, ಪ್ರದೀಪ ಪವಾರ, ಕೆ.ವಿ.ಶಿವಕುಮಾರ, ವೈ.ಕೆ.ಹಳೆಮನಿ, ವಿ.ಎಂ.ಹಿರೇಮಠ,
ಪರಶುರಾಮ ಬಯ್ಯಾಪೂರ, ಎಂ.ಡಿ.ಶೇಖ ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.