ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಪ್ರೌಢ ಶಾಲೆಯ ಮುಂಭಾಗದಿಂದ ವಿದ್ಯಾನಗರಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಪುರಸಭೆ ಪೈಪ್ಲೈನ್ ದುರಸ್ತಿ ಕಾಮಗಾರಿಗಾಗಿ ಗುಂಡಿ ತೋಡಿದ್ದು ಹಲವು ದಿನಗಳು ಕಳೆದರೂ ಯಾವುದೇ ದುರಸ್ತಿ ಕೈಗೊಳ್ಳದ ಹಿನ್ನೆಲೆ ಇಲ್ಲಿನ ಸಾರ್ವಜನಿಕರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಷ ಹೊರಹಾಕಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ದುರಸ್ತಿ ಕಾಮಗಾರಿಗಾಗಿ ಭೂಮಿಯನ್ನು ಅಗೆದು ಅರ್ಧಂಬರ್ಧ ಕಾಮಗಾರಿ ಮಾಡಿ ಹಾಗೆಯೇ ಬಿಟ್ಟಿದ್ದಾರೆ. ಅಲ್ಲದೇ ಇಲ್ಲಿ ಅಗೆದ ಮಣ್ಣನ್ನೆಲ್ಲ ರಸ್ತೆಯ ಮೇಲೆ ಹಾಕಿದ್ದು ಪ್ರತಿ ದಿನ ಈ ರಸ್ತೆ ಮಾರ್ಗವಾಗಿ ಓಡಾಡುವ ಸಾಕಷ್ಟು ವಾಹನಗಳಿಗೆ ತೊಂದರೆಯಾಗಿದೆ. ಕೂಡಲೇ ಈ ದುರಸ್ತಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

