Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಹಬ್ಬ ಕಾರಹುಣ್ಣಿಮೆಗೆ ಭರದ ಸಿದ್ಧತೆ
(ರಾಜ್ಯ ) ಜಿಲ್ಲೆ

ರೈತರ ಹಬ್ಬ ಕಾರಹುಣ್ಣಿಮೆಗೆ ಭರದ ಸಿದ್ಧತೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ತಾಲೂಕಿನಲ್ಲಿ ಶುಕ್ರವಾರ ಕಾರಹುಣ್ಣಿಮೆಯ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಬಸವೇಶ್ವರ ದೇವಸ್ಥಾನ ಮುಂಭಾಗ ಕಾರಹುಣ್ಣಿಮೆಯಂಗವಾಗಿ ತಾತ್ಕಾಲಿಕವಾಗಿ ಹಾಕಲಾಗಿರುವ ಅಂಗಡಿಗಳಲ್ಲಿ ಜಾನುವಾರುಗಳಿಗೆ ಬೇಕಾದ ಸಾಮಗ್ರಿಗಳ ಮಾರಾಟ ಕಳೆದ ಕೆಲ ದಿನಗಳಿಂದ ನಡೆಯುತ್ತಿದೆ.
ಈ ಸಲ ಮಳೆ ಕೃಪೆಯಾಗಿರುವದರಿಂದ ರೈತ ಬಾಂಧವರು ಇದೀಗ ಮಳೆ ವಿರಾಮ ನೀಡಿದ್ದರಿಂದ ಹೆಚ್ಚಾಗಿ ಬಿತ್ತನೆ ಕಾರ್ಯದಲ್ಲಿ ತೊಡಗಿರುವದರಿಂದಾಗಿ ಜಾನುವಾರುಗಳಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಗೆ ಬರುವವರ ಸಂಖ್ಯೆ ವಿರಳವಾಗಿದೆ. ಗುರುವಾರ ಹೊನ್ನುಗ್ಗಿ ಇರುವದರಿಂದಾಗಿ ಹೆಚ್ಚು ರೈತ ಬಾಂಧವರು ಸಾಮಗ್ರಿಗಳನ್ನು ಖರೀದಿಸಲು ಬರುತ್ತಾರೆ ಎಂದು ಅಂಗಡಿಕಾರರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕೆಲ ರೈತ ಬಾಂಧವರು ತಮ್ಮ ಜೀವನಾಡಿ ಜಾನುವಾರುಗಳ ಹಬ್ಬ ಕಾರಹುಣ್ಣಿಮೆಯನ್ನು ಆಚರಿಸಲು ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾರಹುಣ್ಣಿಮೆಯಂದು ಕರಿ ಹರಿಯುವ ಕಾರ್ಯಕ್ರಮದಲ್ಲಿ ಬಿಳಿ ಎತ್ತು ಮುಂದೆ ಬಂದರೆ ಹಿಂಗಾರಿ ಜೋಳ ಫಲವತ್ತಾಗಿ ಬರುವುದು. ಕರಿ ಎತ್ತು ಬಂದರೆ ಮುಂಗಾರಿ ಜೋಳ ಫಲವತ್ತಾಗಿ ಬರುವುದು ಎಂಬ ನಂಬಿಕೆ ರೈತ ಬಾಂಧವರಲ್ಲಿದೆ.
ಈಚೆಗೆ ಬಹುತೇಕರು ತಮ್ಮ ಹೊಲಗಳನ್ನು ಟ್ಯಾಕ್ಟರ್ ಮೂಲಕ ಬಿತ್ತನೆ ಮಾಡಿಸುವದರಿಂದ ಜಾನುವಾರುಗಳ ಸಂಖ್ಯೆ ಇಳಿಮುಖವಾಗಿದೆ. ಜಾನುವಾರುಗಳನ್ನು ಹೊಂದಿದ ರೈತ ಬಾಂಧವರು ಸಂಪ್ರದಾಯದಂತೆ ಕಾರಹುಣ್ಣಿಮೆಯಂದು ತಮ್ಮ ಎತ್ತುಗಳನ್ನು ಶೃಂಗಾರ ಮಾಡಿ ಪೂಜೆ ಮಾಡುತ್ತಾರೆ. ರೈತರು ತಮ್ಮ ಜಾನುವಾರುಗಳಿಗೆ ಬೇಕಾದ ವಸ್ತುಗಳನ್ನು ಬುಧವಾರ ಖರೀದಿಸುವ ದೃಶ್ಯ ಕಂಡುಬಂದಿತ್ತು.
ವಿವಿಧ ಹಗ್ಗಗಳಾದ ರೇಶ್ಮಿ ಹಗ್ಗ, ನೂಲು ಹಗ್ಗ , ಗರವರಿ ಹಗ್ಗ ರೂ.೨೦೦ ರಿಂದ ಹಿಡಿದು ೨೫೦ ರವರೆಗೆ ತಲಾ ಒಂದು ಕೆಜಿಗೆ ದರದಂತೆ, ಹಣೆಕಟ್ಟು ಒಂದು ಜೋಡಿಗೆ ೨೦೦ ರಿಂದ ೪೦೦ ರೂ., ಲಡ್ಡ್ ೬೦ ರಿಂದ ೧೦೦ ರೂ, ಡಿಸೈನ್ ಬಾರಕೋಲ ೨೦೦ ರೂ., ಗೊಂಡೆ ದೊಡ್ಡದ್ದು ರೂ.೫೦೦, ಸಣ್ಣದು ರೂ.೩೦೦, ಮೂಗುದಾನಿ ರೂ. ೧೦ ರಿಂದ ೫೦ ರೂ.ವರೆಗೆ,ಜತ್ತಗಿ ೧೫೦ ರಿಂದ ೨೦೦ ರೂ., ಕೊಡುಗಳ ಹಿತ್ತಾಳೆಯ ಕೊಂಬಣಸು ರೂ.೧೦೦೦,ಸ್ಟೀಲ್ ಕೊಂಬಣಸು ರೂ.೫೦೦, ಸಾದಾ ಕೊಂಬಣಸು ರೂ.೧೫೦ ಸೇರಿದಂತೆ ವಿವಿಧ ಸಾಮಗ್ರಿಗಳ ಬೇರೆ ಬೇರೆ ದರ ಇದೆ. ರೈತ ಬಾಂಧವರು ತಮಗೆ ಬೇಕಾದ ಸಾಮಗ್ರಿಗಳನ್ನು ಚೌಕಾಸಿ ಮಾಡಿ ಖರೀದಿಸುತ್ತಿದ್ದಾರೆ.
ಖರೀದಿಗೆ ಆಗಮಿಸಿದ್ದ ತಾಲೂಕಿನ ಸೋಲವಾಡಗಿ ಗ್ರಾಮದ ರೈತ ಶಿವನಗೌಡ ಬಿದರಕುಂದಿ ಅವರನ್ನು ಮಾತನಾಡಿಸಿದಾಗ, ಕಾರಹುಣ್ಣಿಮೆಯ ಇರುವದರಿಂದ ನಮ್ಮ ಕರುಗಳಿಗೆ ಹಿಡಿಹಗ್ಗವನ್ನು ಖರೀದಿಸಲು ಬಂದಿದ್ದೇನೆ. ನಮಗೆ ಎತ್ತುಗಳನ್ನು ಮೇಯಿಸಲು ತೊಂದರೆಯಾಗಿರುವದರಿಂದಾಗಿ ಈಚೆಗೆ ಎತ್ತುಗಳನ್ನು ಮಾರಾಟ ಮಾಡಲಾಗಿದೆ. ಇಂದು ಜಾನುವಾರುಗಳ ಸಂಖ್ಯೆ ಇಳಿಮುಖವಾಗಿದೆ. ಇರುವ ಜಾನುವಾರುಗಳಿಗೆ ಅಲಂಕಾರ ಮಾಡಿ ಕರಿ ಹರಿಯುವ ಸಂಪ್ರದಾಯ ಮಾಡಲಾಗುತ್ತಿದೆ. ಈ ವರ್ಷ ಕಳೆದ ಸಲಕ್ಕಿಂತಲೂ ಉತ್ತಮ ಮಳೆಯಾಗಿರುವದರಿಂದಾಗಿ ಈಗಾಗಲೇ ಬಿತ್ತನೆ ಕಾರ್ಯ ಎಲ್ಲೆಡೆ ನಡೆಯುತ್ತಿದೆ. ನಮ್ಮ ೧೬ ಎಕರೆ ಜಮೀನಿನ ಪೈಕಿ ೬ ಎಕರೆಯಲ್ಲಿ ಸಜ್ಜೆ, ೩ ಎಕರೆಯಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಲಾಗಿದೆ. ಉಳಿದ ಜಮೀನಿನಲ್ಲಿ ಸಹ ಬಿತ್ತನೆ ಮಾಡಲಾಗುತ್ತಿದೆ. ಮಳೆ ಉತ್ತಮವಾಗಿರುವದರಿಂದಾಗಿ ರೈತ ಬಾಂಧವರು ಹರ್ಷದಿಂದ ಇದ್ದಾರೆ. ಈಗ ಮಳೆ ವಿರಾಮ ಕೊಟ್ಟಿರುವದರಿಂದಾಗಿ ಬಿತ್ತನೆ ಕಾರ್ಯ ಭರದಿಂದ ನಡೆಯುತ್ತಿದೆ. ಬಿತ್ತನೆಯಾದ ನಂತರ ಮತ್ತೆ ಮಳೆಯಾಗಬಹುದು ಎಂದು ನಿರೀಕ್ಷೆಯಿದೆ. ಈ ಸಲ ಉತ್ತಮ ಮಳೆಯಾಗಿ ಬೆಳೆ ಉತ್ತಮವಾಗಿ ಬರಲೆಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.
ಜಾನುವಾರುಗಳ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ಕೊಲ್ಹಾರದ ದಾವಲಸಾಬ ಅತ್ತಾರ ಅವರು, ಕಳೆದ ವರ್ಷಕ್ಕಿಂತ ಈ ಸಲ ಸಾಮಗ್ರಿಗಳ ಬೆಲೆ ಹೆಚ್ಚಳವಾಗಿಲ್ಲ. ಈ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿರುವದರಿಂದಾಗಿ ಎಲ್ಲ ರೈತ ಬಾಂಧವರು ಹೆಚ್ಚಾಗಿ ಹೊಲದಲ್ಲಿ ಬಿತ್ತನೆಯಲ್ಲಿ ತೊಡಗಿರುವದರಿಂದಾಗಿ ವ್ಯಾಪಾರ ಅಷ್ಟಾಗಿ ಆಗುತ್ತಿಲ್ಲ. ಗುರುವಾರ, ಶುಕ್ರವಾರ ಹೆಚ್ಚು ವ್ಯಾಪಾರವಾಗುವ ನಿರೀಕ್ಷೆಯಿದೆ. ಈ ವರ್ಷ ಹೊಸದಾಗಿ ಡಿಸೈನ್ ಬಾರಕೋಲ ಮಾರಾಟಕ್ಕೆ ಬಂದಿದೆ. ಇದರ ಬಗ್ಗೆ ರೈತರಿಗೆ ಹೇಳಿ ಮಾರಾಟ ಮಾಡಲಾಗುವುದು. ಉಳಿದ ದಿನಗಳಲ್ಲಿಯೂ ನಾವು ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ಪ್ರಮುಖ ಸಂತೆ ಮಾರುಕಟ್ಟೆ ಪ್ರದೇಶದಲ್ಲಿ ನಾವು ನಮ್ಮ ಅಂಗಡಿಗಳನ್ನು ಹಾಕಿ ರೈತ ಬಾಂಧವರ ಜಾನುವಾರುಗಳಿಗೆ ಬೇಕಾದ ಸಾಮಗ್ರಿಗಳನ್ನು ವರ್ಷಪೂರ್ತಿ ಮಾರಾಟ ಮಾಡುತ್ತಿರುವುದಾಗಿ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.