Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಇಂಡಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಮೈತ್ರಿ ಪಕ್ಷದ ಕಾರ್ಯಕರ್ತರು ನಗರದ ಹೃದಯ ಭಾಗದ ಬಸವೇಶ್ವರ ವೃತ್ತದಲ್ಲಿ ಸುಮಾರು 10 ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಗುರುವಾರ ಪಟ್ಟಣದ ಡಾ.ಆರ್ ಅಂಬೇಡ್ಕರ್ ವೃತ್ ದಿಂದ ಬಸವೇಶ್ವರ ವೃತ್ತದ ವರಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾನಾ ಘೋಷಣೆಗಳ ದಿಕ್ಕಾರ ಕೂಗಿ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ಪರಾಜಿತ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ‌‌ ಹಾಗೂ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಡಿ ಪಾಟೀಲ‌ ಅವರು ಮಾತನಾಡಿ, ಕಾಂಗ್ರೆಸ್ ದುರಾಡಳಿತ ನೀತಿ, ವಾಲ್ಮೀಕಿ ನಿಗಮದ ಹಗರಣ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ರೈತರ ಬಿತ್ತನೆ ಬೀಜಕ್ಕೆ ಬೆಲೆ ಏರಿಕೆ, ರಾಜ್ಯದಲ್ಲಿ ಸಂಪೂರ್ಣ ಭದ್ರತಾ ವೈಫಲ್ಯ, ಹದಗೆಟ್ಟ ರಸ್ತೆಗಳ ವ್ಯವಸ್ಥೆ ಹೀಗೆ ಸಂಪೂರ್ಣ ನಿಷ್ಕ್ರಿಯ ಕಾಂಗ್ರೆಸ್ ಸರಕಾರದ ನೀತಿಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಬಡವರ ನೆಮ್ಮದಿ ಜೀವನವನ್ನೇ ಹಾಳು ಮಾಡಿದೆ, ಕಳೆದ ವರ್ಷ ಸಮರ್ಪಕ ಮಳೆಯಾಗದ ಹಿನ್ನೆಲೆ ಬರದ ಬವಣೆಗೆ ಸಿಲುಕಿದ್ದ ಬಡಜನರಿಗೆ ಸರ್ಕಾರ ಬೆಲೆ ಹೆಚ್ಚಳ ಮಾಡುವ ಮೂಲಕ ಮತ್ತೆ ಗಾಯದ ಮೇಲೆ ಬರೆ ಎಳೆದಿದೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು, ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅನೀಲ‌ ಜಮಾದಾರ, ಡಾ.‌ರಮೇಶ್ ರಾಠೋಡ, ಶ್ರೀಕಾಂತ ದೇವರ, ನಾಗೇಶ ಹೆಗಡ್ಯಾಳ‌ ಅವರು ಮಾತನಾಡಿ, ಪೆಟ್ರೋಲ್, ಡೀಸೆಲ್, ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು, ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರದಲ್ಲಿ ಅಕ್ರಮ‌ ತಾಂಡವಾಡುತ್ತಿದೆ. 20 ರೂ. ಬಾಂಡ್ ಪೇಪರ್ 100 ರೂಪಾಯಿ, 10 ರೂ. ಪಹಣಿ ಉತಾರಿ ಇಂದು 25 ರೂಪಾಯಿ ಹೆಚ್ಚಿಸಿ, ಇನ್ನೂ ರೈತ ಕೃಷಿ ಚಟುವಟಿಕೆಗಳು ಟ್ಯಾಕ್ಟರ್ ಮೂಲಕ ನಿರ್ವಹಿಸುತ್ತಾನೆ. ಆದರೆ ಆ ಟ್ಯಾಕ್ಟರ್ ಅವಶ್ಯವಿರುವ ಡಿಜೈಲ್ ಬೆಲೆ ಗಗನಕ್ಕೇರಿದೆ. ಆದ್ದರಿಂದ ‌ಎಲ್ಲಾ ವಸ್ತುಗಳ ಬೆಲೆ ಹೆಚ್ಚಿಸಿ‌ ರೈತರ ಮತ್ತು ಜನಸಾಮಾನ್ಯರನ್ನ ಸಂಕಷ್ಟಕ್ಕೆ ಕಾಂಗ್ರೆಸ್ ಸರಕಾರ ದೂಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ‌ಕಿವಡೆ, ಹಣಮಂತರಾಯಗೌಡ ಪಾಟೀಲ, ವಿಜಯಲಕ್ಷ್ಮೀ ರೂಗಿಮಠ, ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ವೆಂಕಟೇಶ ಕುಲಕರ್ಣಿ, ಮಲ್ಲಿಕಾರ್ಜುನ ವಾಲಕಾರ, ರಾಮಸಿಂಗ್ ಕನ್ನೊಳ್ಳಿ, ಅಶೋಕಗೌಡ ಬಿರಾದಾರ, ಸಂಜು ದಶವಂತ, ಶರಣಗೌಡ ಬಂಡಿ, ಶಿವು ಬಗಲಿ, ಅಣ್ಣಾರಾಯ ಮದರಿ, ಮಹಿಬೂಬ್ ಬೇವನೂರ, ಶಾಂತು ಕಂಬಾರ, ಎಸ್ಟಿ‌ ಮೂರ್ಚಾ ಅಧ್ಯಕ್ಷ ಆರ್ ಆರ್ ಕೋಳಿ, ಅನುಸೂಯೆ ಮದರಿ, ಭೌರಮ್ಮ ನಾವಿ, ಸುನಂದ ಗಿರಣಿವಡ್ಡರ್, ಶ್ಯಾಮಲಾ‌ ಬಗಲಿ ಇತರರು ಇದ್ದರು.

“ಟಕಾ ಟಕ್ ಟಕಾ ಟಕ್ ಅಂತಾ ಸುಳ್ಳು ಭರವಸೆ, ಆಶ್ವಾಸನೆ ನೀಡುತ್ತಿರುವ ನಿಷ್ಕ್ರಿಯ ಕಾಂಗ್ರೆಸ್ ಸರಕಾರ. ಸುಮಾರು ಒಂದು ವರ್ಷದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ನಮ್ಮ ತಾಲೂಕಿನಲ್ಲಿ ಗಮನಿಸಬೇಕು. ಬಹುತೇಕ ತಾಲ್ಲೂಕಿನ ಎಲ್ಲಾ ರಸ್ತೆಗಳು ಹದಗೆಟ್ಟು ಹಾಳಾಗಿ ಹೋಗಿವೆ. ಪ್ರತಿನಿತ್ಯ ಪ್ರಯಾಣಿಕರು, ರೈತರು ಸರಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಅದರಲ್ಲೂ ಪೆಟ್ರೋಲ್ ಡಿಜೈಲ್ ಮತ್ತು ದಿನ ನಿತ್ಯದ ಬಳಕೆ ವಸ್ತುಗಳ ಬೆಲೆ ಗಗನಕ್ಕೆ ಎತ್ತರಕ್ಕೆ ತಂದು ನಿಲ್ಲಿಸಿದ್ದಾರೆ. ಒಂದು ವೇಳೆ ವಸ್ತುಗಳ ಬೆಲೆ ತಗ್ಗಿಸದಿದ್ದರೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ಮಾಡಲಾಗುತ್ತದೆ.”
– ಕಾಸುಗೌಡ ಬಿರಾದಾರ
ಬಿಜೆಪಿ ಜಿಲ್ಲಾ ಮುಖಂಡರು, ಇಂಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.