ವಿಜಯಪುರ: ರಾಜ್ಯ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ, ಬಬಲೇಶ್ವರ ಮಂಡಲದ ವತಿಯಿಂದ ತಿಕೋಟ ಪಟ್ಟಣದಲ್ಲಿ ಎತ್ತಿನ ಗಾಡಿಯಲ್ಲಿ ಬೈಕ ಮೆರವಣಿಗೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ ಮುಖಂಡ ವಿಜುಗೌಡ ಎಸ್. ಪಾಟೀಲ ಹಾಗೂ ಮುಖಂಡರು ಮಾತನಾಡಿ ಬೆಲೆಯೇರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವಂತಹ ಸಮಸ್ಯೆಗಳನ್ನು ಹಾಗೂ ರಾಜ್ಯ ಸರ್ಕಾರ ಹೇಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ ಎನ್ನುವದನ್ನ ಸವಿಸ್ತಾರವಾಗಿ ವಿವರಿಸಿದರು. ವಾಲ್ಮೀಕಿ ಹಗರಣ ಆಗಿರಬಹುದು, ಕೊಲೆ ಸುಲಿಗೆಗಳು ಆಗಿರಬಹುದು ಹಾಗೂ ಮತಕ್ಷೇತ್ರದಲ್ಲಿ ಯಾವುದೇ ಹೊಸ ಕಾಮಗಾರಿಗಳು ಜರುಗದೆ ಇರುವ ಬಗ್ಗೆ ಬೆಳಕು ಚಲ್ಲಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ವಿಜುಗೌಡ ಎಸ್. ಪಾಟೀಲ, ಮಂಡಲ ಅಧ್ಯಕ್ಷರಾದ ಸಂತೋಷ ಶಿ. ಕುರದಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ನಿಕಟ ಪೂರ್ವ ಕಾರ್ಯದರ್ಶಿ ಬಸವರಾಜ ಬಿರಾದಾರ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಾಯಕ ಗು. ಮಮದಾಪುರ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರ.ಕಾರ್ಯದರ್ಶಿ ಮಹಾವೀರ ಮಾಯಪ್ಪಗೊಳ, ಮುಖಂಡರಾದ ರಾಮು ಜಾಧವ, ರಾಜೇಂದ್ರ ಕುಲಕರ್ಣಿ, ಮಹಾನಿಂಗ ಮಂಟೂರ, ರಾವತ ಕಂಬಾರ, ಗಿರೀಶ್ ಕುಲಕರ್ಣಿ, ಯುವ ಮೋರ್ಚಾ ಅಧ್ಯಕ್ಷರಾದ ಸಚಿನ ಗದ್ಯಾಳ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದಎಚ್.ಎಮ್. ಅತ್ತಾರ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ; ಎತ್ತಿನಗಾಡಿಯಲ್ಲಿ ಬೈಕ್ ಮೆರವಣಿಗೆ!
Related Posts
Add A Comment

