Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೌಶಲ್ಯತೆಯಿಂದ ಮಾಡುವ ಕೆಲಸವೇ ಯೋಗ :ಬಿಇಓ ರಾಠೋಡ
(ರಾಜ್ಯ ) ಜಿಲ್ಲೆ

ಕೌಶಲ್ಯತೆಯಿಂದ ಮಾಡುವ ಕೆಲಸವೇ ಯೋಗ :ಬಿಇಓ ರಾಠೋಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಯೋಗವೆಂದರೆ ಅದೊಂದು ಬದುಕಿನ ಕಲೆಯಾಗಿದೆ. ಕೌಶಲ್ಯತೆಯಿಂದ ಮಾಡುವ ಕೆಲಸವೇ ಯೋಗ. ಯಾವುದೇ ಕೆಲಸವನ್ನು ಮಾಡಿ ತಮ್ಮ ಪಾಲಿಗೆ ಬಂದ ಕೆಲಸವನ್ನು ಅತ್ಯಂತ ಕೌಶಲ್ಯಪೂರ್ಣವಾಗಿ ಯಶಸ್ವಿಯಾಗಿ ಮಾಡುವುದು ಸಹ ಯೋಗವಾಗಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.
ತಾಲೂಕಿನ ಟಕ್ಕಳಕಿ ಗ್ರಾಮದ ಸಮೀಪವಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ ಸೇವಾದಳದ ಜಿಲ್ಲಾ ಹಾಗೂ ತಾಲೂಕು ಸಮಿತಿ, ಜಿಲ್ಲಾ ಆಯುಷ್ಯ ಇಲಾಖೆ, ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಆದರ್ಶ ಶಿಕ್ಷಕರ ವೇದಿಕೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಹಯೋಗದಲ್ಲಿ ಕಳೆದ ನಾಲ್ಕು ದಿನಗಳಿಂದ ಹಮ್ಮಿಕೊಂಡಿದ್ದ ಯೋಗ ಶಿಬಿರದ ಸಮಾರೋಪ ಹಾಗೂ ೧೦ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶುಕ್ರವಾರ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಾಚೀನರು ನೀಡಿದ ಯೋಗ ಕಲೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಆರೋಗ್ಯ, ಜೀವನವನ್ನು ಸುಂದರವಾಗಿಟ್ಟುಕೊಳ್ಳಬೇಕೆಂದರು.
ಸೇವಾದಳದ ಕೇಂದ್ರ ಸಮಿತಿ ಸದಸ್ಯ ಶಿವನಗೌಡ ಬಿರಾದಾರ ಮಾತನಾಡಿ, ಯೋಗಾಸನಗಳು ಕೇವಲ ಋಷಿಮುನಿಗಳಿಗೆ ಮಾತ್ರ ಸಂಬಂಧಿಸಿವೆ. ಸಾಮಾನ್ಯರಿಗೆ ಅಲ್ಲ ಎಂಬುವದು ಸರಿಯಲ್ಲ. ಯೋಗಾಸನಗಳು ಎಲ್ಲರ ಸ್ವತ್ತು. ಎಲ್ಲರೂ ಯೋಗದ ಮಹತ್ವ ಅರಿತು ನಿತ್ಯ ಜೀವನದಲ್ಲಿ ಯೋಗಾಸನಗಳನ್ನು ಮಾಡುವ ಮೂಲಕ ಆರೋಗ್ಯವಂತ ಜೀವನ ಸಾಗಿಸಬೇಕೆಂದರು.
ಸೇವಾದಳದ ಗೌರವಾಧ್ಯಕ್ಷ ಎಫ್.ಡಿ.ಮೇಟಿ ಮಾತನಾಡಿ, ಯೋಗವೆಂದರೆ ಕೇವಲ ಆಸನಗಳು ಎಂಬ ಕಲ್ಪನೆ ದೂರವಾಗಿ ಯೋಗ ಒಂದು ಬದುಕಿನ ಕಲೆ ಎಂಬ ಭಾವ ಎಲ್ಲರಲ್ಲಿ ಬರಬೇಕಿದೆ. ನಮ್ಮ ನಿತ್ಯ ಜೀವನದಲ್ಲಿ ಯೋಗವನ್ನು ಅನ್ವಯಿಸಿದಾಗ ಎಲ್ಲ ಕಾರ್ಯದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಅಧ್ಯಕ್ಷತೆಯನ್ನು ಭಾರತ ಸೇವಾದಳದ ತಾಲೂಕಾಧ್ಯಕ್ಷ ಎಸ್.ಐ.ಗಚ್ಚಿನವರ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ಅಶೋಕ ಗುಡದಿನ್ನಿ, ತಾಲೂಕು ಕಾರ್ಯದರ್ಶಿ ಆರ್.ಜಿ.ಅಳ್ಳಗಿ, ಕೋಶಾಧ್ಯಕ್ಷ ವೀರಣ್ಣ ಮರ್ತುರ, ವಲಯ ಸಂಘಟಕ ನಾಗೇಶ ಡೋಣೂರ, ತಾಲೂಕು ಸಮಿತಿ ಸದಸ್ಯರಾದ ಜಿ.ವೈ.ನಾಗರಾಳ, ಎಂ.ಎಸ್.ಅವಟಿ, ಅಜೀವ ಸದಸ್ಯ ವಿವೇಕಾನಂದ ಕಲ್ಯಾಣಶೆಟ್ಟಿ, ಆದರ್ಶ ಶಿಕ್ಷಕರ ವೇದಿಕೆಯ ಅಧ್ಯಕ್ಷ ಉಮೇಶ ಕವಲಗಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ವಸತಿ ಶಾಲೆಯ ಪ್ರಾಚಾರ್ಯ ಡಿ.ಎಂ.ಚಲವಾದಿ ಇತರರು ಇದ್ದರು.
ಬಿ.ವ್ಹಿ.ಚಕ್ರಮನಿ ಸ್ವಾಗತಿಸಿದರು. ಶಿವು ಮಡಿಕೇಶ್ವರ ನಿರೂಪಿಸಿದರು. ಕೊಟ್ರೇಶ ಹೆಗಡ್ಯಾಳ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ

ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.