Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದ ಮೃಗಶಿರಾ ಮಳೆ
(ರಾಜ್ಯ ) ಜಿಲ್ಲೆ

ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿಸಿದ ಮೃಗಶಿರಾ ಮಳೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಮರ್ಪಕ ಮಳೆ | ಬಿತ್ತನೆ ಪೂರ್ಣ | ಗುರಿ ಮೀರಿದ ಬಿತ್ತನೆ | ಬಂಪರ್ ಬೆಳೆ ನಿರೀಕ್ಷೆ |

– ಇಲಾಹಿ ಇ. ಜಮಖಂಡಿ
ಚಿಮ್ಮಡ: ಬೇಸಿಗೆಯ ಬೀರು ಬಿಸಿಲಿನ ತಾಪದಿಂದ ಬಸವಳಿದ ಜನತೆಗೆ ಸಮರ್ಪಕವಾಗಿ ಸುರಿದ ಮುಂಗಾರು ಪೂರ್ವ, ಮುಂಗಾರು ಮಳೆಯಿಂದ ಈ ಭಾಗದ ಇಡೀ ವಾತಾವರಣವೇ ತಂಪೆರೆದಂತಾಗಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಸುರಿದ ಅಶ್ವಿನಿ, ಭರಣಿ, ರೋಹಿಣಿ ಮಳೆಗಳು ರೈತರಲ್ಲಿ ಆಶಾಭಾವಣೆ ಮೂಡಿಸಿದ್ದವು, ಮಳೆಯನ್ನೆ ನಂಬಿ ಹಲವು ರೈತರು ಬಿತ್ತನೆ ಕಾರ್ಯ ಶುರು ಮಾಡಿದ್ದರು. ಜೂನ್ ಏಳರಿಂದ ಪ್ರಾರಂಭಗೊಳ್ಳಬೇಕಿದ್ದ ಮೃಗಶಿರಾ ಮಳೆ ಒಂದು ವಾರ ಕಳೆದರೂ ಬಾರದಿದ್ದಾಗ ಆತಂಕ ಎದುರಾಗಿತ್ತು. ತಡವಾಗಿಯಾದರೂ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯನ್ನೆ ನಂಬಿ ಬಿತ್ತನೆ ಮಾಡಿದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಬೆಳಗಾವಿ ಮಹಾರಾಷ್ಟ್ರ ಭಾಗಗಳಲ್ಲಿ ಮಳೆ ಕೊರತೆಯ ಪರಿಣಾಮ ಹಿಡಕಲ್ ಜಲಾಶಯದಲ್ಲಿ ನೀರು ಸಂಗ್ರಹಣಾ ಪ್ರಮಾಣವೂ ಕ್ಷೀಣಿಸಿದ್ದು ಇದರಿಂದಾಗಿ ಗ್ರಾಮದ ಮೂಲಕ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಹರಿಸುವ ಪ್ರಮಾಣ ಕೂಡ ಕಡಿಮೆಯಾಗಿದೆ. ಇದರಿಂದ ವಾಣಿಜ್ಯ ಬೆಳೆಗಳಾದ ಕಬ್ಬು, ಅರಿಷಿಣ, ಬೆಳೆಗಾರರಲ್ಲಿ ಆತಂಕ ಮೂಡಿದ್ದರೂ, ಗೋವಿನಜೋಳ ಸೇರಿದಂತೆ ಹಲವು ಮಿಶ್ರ ಬೆಳೆಗಳು ರೈತರ ಕೈಹಿಡಿಯುವ ಆಶಾಭಾವಣೆ ಮೂಡಿಸಿದೆ.


ಕಳೆದ ಎರಡು ವರ್ಷಗಳಿಂದ ಭೀಕರ ಬರಗಾಲ ಆವರಿಸಿದ್ದರಿಂದ ಬೆಳೆದ ಬೆಳೆಯ ಲಾಭ ಕೈಗೆಟುಕದೆ ನಷ್ಟ ಅನುಭವಿಸಿದ ಪರಿಣಾಮ ಸಾಲದ ಶೂಲ ಕಾಡುತಿದ್ದರೂ ವರುಣನನ್ನೇ ನಂಬಿ ರೈತರು ಬಿತ್ತನೆ ಮಾಡಿದ್ದಾರೆ, ಈ ಬಾರಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಉತ್ತಮ ವಾತಾವರಣ ನಿರ್ಮಾಣಗೊಡಿದ್ದು ಬಾವಿ, ಬರ‍್ವೆಲ್‌ಗಳ ಅನುಕೂಲ ಹೊಂದಿದವರು ವಾಣಿಜ್ಯ ಬೆಳೆಗಳಾದ ಕಬು, ಅರಿಷಿನ ಬೆಳೆ ಬಿತ್ತನೆ ಮಾಡಿದ್ದು ಕಾಲುವೆನೀರು, ಮಳೆ ಆಶ್ರಯಿಸಿದ ರೈತರು ಗೋವಿನಜೋಳ, ಶೇಂಗಾ, ಹೆಸರು, ಸೂರ್ಯಕಾಂತಿ, ಉದ್ದು, ತೊಗರಿ ಸೇರಿದಂತೆ ತರಕಾರಿ ಬೆಳೆಯನ್ನೂ ಹಲವು ರೈತರು ಬಿತ್ತನೆ ಮಾಡಿದ್ದು ಬಂಪರ್ ಬೆಳೆ ಪಡೆಯುವ ನಿರಿಕ್ಷೆಯಲ್ಲಿದ್ದಾರೆ.


“ಸರಕಾರ ಕೃಷಿ ಇಲಾಖೆಯ ಮೂಲಕ ಸೋಯಾಬಿನ್, ಹೆಸರು, ಉದ್ದು ಗೋವಿನಜೋಳದ ಬಿತ್ತನೆ ಬೀಜಗಳನ್ನು ಈ ಬಾರಿ ಸಕಾಲಕ್ಕೆ ರಿಯಾಯಿತಿ ದರದಲ್ಲಿ ಪೋರೈಸಲಾಗಿದ್ದು, ಶೇ ೭೫ರಷ್ಟು ರೈತರು ಈಗಾಗಲೆ ಪಡೆದುಕೊಂಡಿದ್ದಾರೆ, ಪರಿಶಿಷ್ಠ ಜಾತಿ, ಪಂಗಡದವರಿಗೆ ವಿಶೇಷ ರಿಯಾಯಿತಿ ದರದಲ್ಲಿ ಪೋರೈಸಲಾಗಿದೆ. ಅಲ್ಲದೇ ಸಾವಯವ ಕೃಷಿಗೆ ಬಳಸಲಾಗುವ ಲಘೂ ಪೋಷಕಾಂಶಗಳನ್ನು ಕೂಡ ರಿಯಾಯಿತಿ ದರದಲ್ಲಿ ಲಭ್ಯವಿದ್ದು ಅವಶ್ಯವಿರುವ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪಡೆದುಕೊಳ್ಳಬಹುದು.”
– ಎಸ್.ಎಂ. ಬಿರಾದಾರ
ತಾಲೂಕು ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ, ತೇರದಾಳ.

” ಕಳೆದ ಹಲವು ವರ್ಷಗಳಿಂದ ನಮ್ಮ ಭಾಗದಲ್ಲಿ ಮಿರ್ಗಾ ಸೇರಿದಂತೆ ಮುಂಗಾರು ಮಳೆ ಆಗಿರಲಿಲ್ಲ. ಈ ಬಾರಿ ಎಲ್ಲ ಮಳೆಗಳು ಉತ್ತಮ ಪ್ರಮಾಣದಲ್ಲಿ ಸುರಿಯುತಿದ್ದು ಬಿತ್ತಿದ ಬೆಳೆ ಕೈಗೆಟುಕುವ ಭರವಸೆ ಮೂಡಿಸಿದೆ. ನಮ್ಮ ಬಾಗದ ರೈತರು ಹೆಚ್ಚಾಗಿ ಘಟಪ್ರಭಾ ಕಾಲುವೆಯ ನೀರನ್ನೇ ಅವಲಂಭಿಸಿದ್ದು ಎಡದಂಡೆ ಕಾಲುವೆಗೆ ಈಗಾಗಲೆ ನೀರು ಹರಿಸಿರುವುದರಿಂದ ರೈತರಿಗೆ ಸಧ್ಯಕ್ಕೆ ಬೆಳೆಗೆ ನೀರುಣಿಸುವ ಸಮಸ್ಯೆ ಕಾಡದು.”
– ನಿಂಗಣ್ಣ ಪೂಜಾರಿ
ಪ್ರಗತಿಪರ ರೈತರು, ಚಿಮ್ಮಡ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.