ವಿಜಯಪುರ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ವ್ಯಾಪ್ತಿಯ ೨೦೨೪-೨೫ ನೇ ಸಾಲಿನ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದ್ದು ತಾಲೂಕು ಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಜೂನ್ ೨೪ ರಿಂದ ೨೯ ರವರೆಗೆ ಚುನಾವಣೆಗಳು ನಡೆಯಲಿದ್ದು ನಾಮಪತ್ರ ಸಲ್ಲಿಸಬಹುದಾಗಿದೆ. ಜುಲೈ ೧ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದ್ದು, ಜುಲೈ ೭ರಂದು ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶವನ್ನು ಸಹ ಘೋಷಣೆ ಆಗಲಿದೆ.
ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಗೆ ಜುಲೈ ೧೫ ರಿಂದ ೧೭ರವರೆಗೆ ನಾಮಪತ್ರ ಸ್ವೀಕಾರ ನಡೆಯಲಿದ್ದು, ಜುಲೈ ೨೦ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ. ಚುನಾವಣೆ ಜುಲೈ ೨೧ ರಂದು ನಡೆದು ಅಂದೆ ಫಲಿತಾಂಶ ಘೋಷಣೆ ಆಗಲಿದೆ.
ರಾಜ್ಯಮಟ್ಟದ ಪದಾಧಿಕಾರಿಗಳ ಆಯ್ಕೆಗೆ ಜುಲೈ ೨೨ ರಿಂದ ೨೭ರವರೆಗೆ ನಾಮಪತ್ರ ಸ್ವೀಕರಿಸಲಿದ್ದು ಜುಲೈ ೨೯ರಂದು ನಾಮಪತ್ರ ವಾಪಸ್ ಪಡೆಯಲು ಅವಕಾಶ ನೀಡಲಾಗಿದೆ. ಆಗಸ್ಟ್ ೪ರಂದು ಚುನಾವಣೆ ನಡೆದು ಅಂದೇ ಸಂಜೆ ಫಲಿತಾಂಶ ಹೊರಬೀಳಲಿದೆ ಎಂದು ವಿಜಯಪುರ ಜಿಲ್ಲಾ ಅಧ್ಯಕ್ಷ ಶಿವಾನಂದ ಹಿರೇಕುರಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

