Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿ ಮುಗಿದಿದೆ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿ ಮುಗಿದಿದೆ :ಶಾಸಕ ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.5 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ವಿಜಯಪುರ: ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿರುವ ಕಾಂಗ್ರೆಸ್ ಸರ್ಕಾರದ್ದೆ ಗ್ಯಾರಂಟಿಯೇ ಮುಗಿದಿದೆ. ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಹೇಳಿದರು.
ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತೊರವಿ ಗ್ರಾಮದ ಸಿದ್ದಾರ್ಥ ನಗರದ ಗಣಪತಿ ಗುಡಿ ಹತ್ತಿರ ಭಾನುವಾರ 2022-23 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಜೂರಾದ 5 ಕೋಟಿ ರೂ. ಅನುದಾನದಲ್ಲಿ ಅಥಣಿ ಮುಖ್ಯ ರಸ್ತೆಯಿಂದ ಡಯಟ್ ಕಾಲೇಜು ವರೆಗೆ ಹಾಗೂ ಹಂಚನಾಳ ಕಾಲೋನಿ, ಸಿದ್ಧಾರ್ಥ ನಗರ, ಪೊಲೀಸ್ ಕಾಲೋನಿ, ಕಬಾಡೆ ಕಾಲೋನಿ, ಡಾ.ಬಿ.ಆರ್.ಅಂಬೇಡ್ಕರ್ ಕಾಲೋನಿ, ಸೈನಿಕ ಶಾಲೆ ಕಾಲೋನಿ, ಟೀಚರ್ಸ್ ಕಾಲೋನಿಯಲ್ಲಿ
ಆಂತರಿಕ ರಸ್ತೆಗಳ ಸುಧಾರಣೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಇದ್ದಾಗ ದಿನಕ್ಕೆ ಎರಡ್ಮೂರು ಕೋಟಿ ಮೊತ್ತದ ಕಾಮಗಾರಿಗಳ ಭೂಮಿಪೂಜೆ ನಡೆಯುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷದ ಮೇಲೆ ಈಗ ರೂ. 5 ಕೋಟಿ ಭೂಮಿಪೂಜೆ ನಡೆಯುತ್ತಿದೆ. ನನಗೆ ಅನುದಾನ ತರುವುದು ಗೊತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳು ಆಗಿದ್ದು, ಉಳಿದ ಅಲ್ಪ ಸ್ವಲ್ಪ ಕೆಲಸಗಳು ಸಹ‌ ಮುಗಿಸುವೆ ಎಂದು ಭರವಸೆ ನೀಡಿದರು.
ಈ ಹಿಂದೆ ವಿಜಯಪುರ ನಗರದಲ್ಲಿನ ದೂಳಿನಿಂದ ಅಸ್ತಮಾ ಹೇರಳವಾಗಿತ್ತು. ದಿನಕ್ಕೆ ಕನಿಷ್ಟ ಎರಡ್ಮೂರು ಬಾರಿ ಬಟ್ಟೆ ಬದಲಿಸಬೇಕಿತ್ತು. ಈಗ ರಸ್ತೆಗಳ ಅಭಿವೃದ್ಧಿಯಿಂದ ಅಸ್ತಮಾ ಕಣ್ಮರೆ ಆಗಿದ್ದರೆ, ಬಟ್ಟೆಗಳನ್ನು ಎರಡ್ಮೂರು ದಿನ ಬಳಸಿದರೂ ಕೊಳಕಾಗುತ್ತಿಲ್ಲ. ಸದ್ಯ ವಿಜಯಪುರ ನಗರದ ವಾತಾವರಣ ಸಂಪೂರ್ಣ ಬದಲಾಗಿದೆ ಎಂದರು.
ಹಿಂದೂಗಳು ಜಾಗೃತರಾಗಿ ಮತ ಹಾಕಲು ಮುಂದಾಗದಿದ್ದರೇ, ನಿಷ್ಕಾಳಜಿ ಮಾಡಿದರೆ ಕೆಲವೇ ವರ್ಷಗಳಲ್ಲಿ ಭಾರತ ಪಾಕಿಸ್ತಾನ ಆಗುತ್ತೆ, 2047 ಕ್ಕೆ ಇಸ್ಲಾಂ ರಾಷ್ಟ್ರವನ್ನಾಗಿಸುವ ಯತ್ನ ನಡೆಸಿದ್ದಾರೆ. ಅದಕ್ಕೆ ಅವರು ಮಳೆ, ಚಳಿ, ಬಿಸಿಲು ಇರಲಿ, ಎಷ್ಟೇ ದೂರ ಇರಲಿ 100ಕ್ಕೆ 100 ರಷ್ಟು ಮತ ಹಾಕುತ್ತಾರೆ. ಹಾಗೆಯೇ, ಸನಾತನ ಧರ್ಮ ಉಳಿಯಬೇಕು, ನಮ್ಮ ದೇಶದಲ್ಲಿ ನಾವು ಸುರಕ್ಷಿತವಾಗಿ ಇರಬೇಕೆಂದರೆ, ಮುಂದೆ ಬರುವ ಪ್ರತಿಯೊಂದು ಚುನಾವಣೆಗಳಲ್ಲಿಯೂ ಹಿಂದೂಗಳು ಜಾಗೃತರಾಗಿ ಮತ ಚಲಾಯಿಸಬೇಕೆಂದು ಕಿವಿಮಾತು ಹೇಳಿದರು.
ಬಿಜೆಪಿ ನಗರ ಮಂಡಲ ಉಪಾಧ್ಯಕ್ಷ ಸಂತೋಷ ಪಾಟೀಲ, ನಮ್ಮ‌ ಕಾಲೊನಿಗಳಲ್ಲಿ ವಿವಿಧ ಅಭಿವೃದ್ಧಿಗಾಗಿ ಶಾಸಕರು ಸಾಕಷ್ಟು ನೀಡುತ್ತಾರೆ. ಆ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಸ್ಯೆ ಆಗುವವರೆಗೂ ಬಿಟ್ಟು ಪರಿಹಾರಕ್ಕಾಗಿ ಶಾಸಕರ ಬಳಿಗೆ ಹೋಗುವ ಬದಲಾಗಿ, ನಾವುಗಳೇ ಜಾಗೃತರಾಗಿ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಮುಖಂಡರಾದ ದಾದಾಸಾಹೇಬ ಬಾಗಾಯತ, ನಾಗೇಂದ್ರ ಯಾದವ ಬಸವರಾಜ ಕುಂಬಾರ, ಡಿ.ಎಂ.ಘೋರ್ಪಣೆ, ಡಿ.ಕೆ.ಸರಸಂಬಿ, ಪರಸಪ್ಪ ಕಬಾಡೆ, ಶಿವರಾಜ ಓತಿಹಾಳ, ಪಿಡಿಒ ರಾಜೇಶ್ವರಿ ತುಂಗಳ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.