Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸುರಕ್ಷಿತ, ಶುದ್ಧ ನೀರನ್ನು ಬಳಕೆ ಮಾಡಲು ವ್ಹಿ.ಬಿ.ಗೊಂಗಡಿ ಸಲಹೆ
(ರಾಜ್ಯ ) ಜಿಲ್ಲೆ

ಸುರಕ್ಷಿತ, ಶುದ್ಧ ನೀರನ್ನು ಬಳಕೆ ಮಾಡಲು ವ್ಹಿ.ಬಿ.ಗೊಂಗಡಿ ಸಲಹೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಅಳವಡಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನೀರಿನ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ವ್ಹಿ.ಬಿ.ಗೊಂಗಡಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿಯ ರಾಜೀವಗಾಂಧಿ ಸೇವಾ ಕೇಂದ್ರದಲ್ಲಿರುವ ಸಭಾ ಭವನದಲ್ಲಿ ಪ್ರತಿ ಮನೆಗೆ ನಲ್ಲಿ ಸಂಪರ್ಕ ಮೂಲಕ ಮತ್ತು ಶುದ್ಧ ಹಾಗೂ ಸುರಕ್ಷಿತ ನೀರು ಗ್ರಾಮಗಳಲ್ಲಿ ನೀರನ್ನು ಪೂರೈಕೆ ಮಾಡುವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಲಜೀವನ ಮಿಷನ್ ಯೋಜನೆಯ ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಜನರು ನೀರನ್ನು ಮಿತವಾಗಿ ಬಳಸುವುದರ ಮೂಲಕ ನೀರಿನ ಸಂರಕ್ಷಣೆ ಮಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಜಲಮೂಲವನ್ನು ಸುಸ್ಥಿರವಾಗಿಟ್ಟುಕೊಳ್ಳುವ ಜೊತೆಗೆ ನೀರು ಮಲಿನವಾಗದಂತೆ ನೋಡಿಕೊಳ್ಳಬೇಕು. ನೀರಿನ ಭದ್ರತೆ, ಶುದ್ಧ ಕುಡಿಯುವ ನೀರಿನ ಪೂರೈಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮಾತನಾಡಿ, ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಸಾಕಷ್ಟು ಎದುರಿಸಿದ್ದಾರೆ. ಇದನ್ನು ದೂರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಜಲಜೀವನ ಮಿಷನ್ ಯೋಜನೆ ಕಾರ್ಯಕ್ರಮ ಕೊಟ್ಟಿರುವುದು ಶ್ಲಾಘನೀಯ. ಈ ಯೋಜವೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ ಮನೆಗೂ ನಲ್ಲಿಗಳ ಮೂಲಕ ಶುದ್ಧ ನೀರಿನ ಸೌಲಭ್ಯ ದೊರಕಬೇಕು. ಶುದ್ಧ ನೀರು ಪೂರೈಕೆಯಲ್ಲಿ ಎಲ್ಲರ ಸಹಕಾರ ಅಗತ್ಯವಿದೆ. ನೀರಿನ ಮಹತ್ವದ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.
ಆರೋಗ್ಯ ಇಲಾಖೆಯ ಆರ್.ಎಂ.ಚಿಂಚೋಳಿ ಮತ್ತು ಸಂಜೀವ ಸಜ್ಜನ ಅವರು ಮಳೆಗಾಲದಲ್ಲಿ ಹೊಸ ನೀರು ಬರುವದರಿಂದಾಗಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡು ನೀರು ಬಳಕೆ ಮಾಡಬೇಕು. ವಾಂತಿ-ಬೇಧಿಯಾಗುವ ಸಂಭವವಿರುವದರಿಂದಾಗಿ ಜನರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ನೀರು ಬಳಕೆ ಮಾಡಬೇಕು. ಜನರು ಆದಷ್ಟು ಶುದ್ಧವಾದ ನೀರನ್ನು ಬಳಸಬೇಕು. ನೀರು ಅಮೌಲ್ಯವಾಗಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ವೇದಿಕೆಯಲ್ಲಿ ಕೊಲ್ಹಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ ಮದ್ದಿನ ಇದ್ದರು. ಕಾರ್ಯಾಗಾರದಲ್ಲಿ ಐಆರ್ಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಬಡಿಗೇರ, ಸಿದ್ದಪ್ಪ ಮಾದರ, ಭೀಮಶಿ ಲೋಕಾಪುರ, ಬಸವರಾಜ ನಿಂಬರಗಿ, ಜಿಲ್ಲಾ ಪ್ರಯೋಗಾಲಯ ಸಹಾಯಕರಾದ ಸಂದೀಪ ಹಳ್ಳೂರ, ಮಂಜುನಾಥ ಸೇರಿದಂತೆ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು, ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಜಲಜೀವನ ಮಿಷನ್ದ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.