ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜೂ. ೨೬ ರಂದು ಬೆಳಗ್ಗೆ ೧೧ ಗಂಟೆಗೆ ಜೂ.೨೭ ರಂದು ಆಚರಿಸಲ್ಪಡುವ ನಾಡಪ್ರಭು ಕೆಂಪೇಗೌಡ ಅವರ ೫೧೫ ನೇ ಜಯಂತಿಯಂಗವಾಗಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಗೆ ತಾಲೂಕು ಮಟ್ಟದ ಎಲ್ಲ ವಿವಿಧ ಇಲಾಖೆಯ ಅಧಿಕಾರಿಗಳು, ಪಟ್ಟಣದ ಎಲ್ಲ ವಿವಿಧ ಸಂಘಟನೆಗಳ ಪ್ರಮುಖರು, ಮುಖಂಡರು, ಪದಾಽಕಾರಿಗಳು,ಎಲ್ಲ ವಿವಿಧ ಸಮಾಜದ ಮುಖಂಡರು ಆಗಮಿಸಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಸಲಹೆ-ಸೂಚನೆಗಳನ್ನು ನೀಡಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
