Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಧಿಕಾರಿಗಳ ಎಡವಟ್ಟು ; ಬದುಕಿರುವ ಮಹಿಳೆಗೆ ಮರಣ ಪತ್ರ
(ರಾಜ್ಯ ) ಜಿಲ್ಲೆ

ಅಧಿಕಾರಿಗಳ ಎಡವಟ್ಟು ; ಬದುಕಿರುವ ಮಹಿಳೆಗೆ ಮರಣ ಪತ್ರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ವೃದ್ಧೆಯೊಬ್ಬಳಿಗೆ ಬದುಕಿರುವಾಗಲೇ ಮರಣ ಪತ್ರ ನೀಡಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡ ವಿಚಿತ್ರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ಈ ಪ್ರಕರಣದ ಹಿಂದೆ ಸಂಬಂಧಿಕರು ವೃದ್ಧೆಯ ಆಸ್ತಿ ಲಪಟಾಯಿಸುವ ಕುತಂತ್ರ ಅಡಗಿದೆಯೋ ಅಥವಾ ಇದಕ್ಕೆ ಜನನ ಮತ್ತು ಮರಣ ಪತ್ರ ನೋಂದಣಿ ಕೇಂದ್ರದ ಅಧಿಕಾರಿಗಳ ಎಡವಟ್ಟು ಕಾರಣವೊ ಎನ್ನುವುದು ಬರಲಾಗಬೇಕಿದೆ.
ಸಮೀಪದ ದೇವರ ನಿಂಬರಗಿ ಗ್ರಾಮದ 60 ವರ್ಷದ ಸಾವಿತ್ರಿ ರಾಮಾಗುಂಡ ಮಾಳಿ ಎಂಬವಳಿಗೆ ಚಡಚಣ ಜನನ ಮತ್ತು ಮರಣ ನೋಂದಣಿ ಇಲಾಖೆ ಅಧಿಕಾರಿಗಳು ಅವಳು ಬದುಕಿರುವಾಗಲೇ ಅವಳಿಗೆ ಮರಣ ಪತ್ರ ನೀಡಿ ಅಚ್ಚರಿ ಮತ್ತು ಆತಂಕ ಮೂಡಿಸಿದ್ದಾರೆ.

ವೃದ್ದೆ ಸಾವಿತ್ರಿ ಮಾಳೆ ತಮ್ಮ ತಾಯಿಯ ಮರಣ ಪತ್ರ ಪಡೆಯಲು ಕಚೇರಿಗೆ ಹೋದಾಗ ಅಧಿಕಾರಿಗಳು ನೀವು 12/3/2001ರಲ್ಲಿ ನಿಧನರಾಗಿದ್ದೀರಿ ಎಂದು ಅವಳ ಮರಣ ಪತ್ರವೇ ನೀಡಿದ್ದಾರೆ. ಇದರಿಂದ ಆಘಾತಕ್ಕೆ ಒಳಗಾದ ಸಾವಿತ್ರಿಗೆ ಆಕಾಶವೇ ಕಳಚಿ ಬಿದ್ದಂತಾಗಿದೆ. ಸಾವಿತ್ರಿ ಮೂಲತಃ ಹೊನ್ನಳ್ಳಿ ಗ್ರಾಮದವರು. ಇವರ ತಂದೆಗೆ ಒಬ್ಬಳೇ ಮಗಳು. ತಂದೆ ನಿಧನಾನಂತರ ಅವರ 12 ಎಕರೆ ಹೊಲ ಇವರ ಹೆಸರಿಗೆ ಬಂದಿತ್ತು. ಈ ಆಸ್ತಿಯನ್ನು ಲಪಟಾಯಿಸಲು ತಮ್ಮ ಸಂಬಂಧಿಕರೆ ಸಾವಿತ್ರಿ ದತ್ತು ಪುತ್ರಿಯೆಂದು ಬಿಂಬಿಸಿ ತನ್ನ ಆಸ್ತಿ ಕಬಳಿಸಲು ಮರಣ ಪತ್ರ ಸೃಷ್ಟಿ ಮಾಡಿದ್ದಾರೆ ಎಂದು ಸಾವಿತ್ರಿ ಮಾಳೆ ಆರೋಪಿಸಿದ್ದಾಳೆ.


ಸಾವಿತ್ರಿ ಮಾಳೆಯ ಪತಿ ನಿಂಗಪ್ಪ ಮಾಳೆ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿದ್ದಾನೆ. ಇವಳಿಗೆ ಇಬ್ಬರು ಗಂಡು ಮಕ್ಕಳಿದ್ದರೂ ಅವಿದ್ಯಾವಂತರು. ಅವರಿಗೆ ಪ್ರಪಂಚದ ಜ್ಞಾನ ಸಹ ಗೊತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ಅವರ ಸಂಬಂಧಿಕರೊಬ್ಬರು ಸಾವಿತ್ರಿ ಹೆಸರಿನಲ್ಲಿರುವ 12 ಎಕರೆ ಜಮೀನು ಕಬಳಿಸಲು 2001ರಲ್ಲಿ ಸಾವಿತ್ರಿ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ 11-03-2001ರಂದು ನಿಧನಳಾಗಿದ್ದಾಳೆಂದು ಚಡಚಣದ ಗ್ರಾಮಲೆಕ್ಕಾಧಿಕಾರಿ ಮೂಲಕ ಜನನ ಮತ್ತು ಮರಣಗಳ ನೊಂದಣಿ ಕಚೇರಿಯಲ್ಲಿ ಮರಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದು ನೊಂದಣಿಯಾಗಿದ್ದು ಮಾತ್ರ 2-01-2013 ರಂದು. ನಂತರ 5-01-2023ರಂದು ಮರಣ ಪ್ರಮಾಣ ಪತ್ರಕ್ಕೆ ಅನುಮೋದನೆ ದೊರೆತಿದೆ. ಇದು ಗೊತ್ತಿಲ್ಲದ ವೃದ್ದೆ ಸಾವಿತ್ರಿ ತಮ್ಮ ತಾಯಿಯ ಮರಣ ಪತ್ರ ಪಡೆಯಲು ಹೋದಾಗ ತನ್ನ ಮರಣ ಪತ್ರ ನೀಡಿದ ಮೇಲೆ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ನ್ಯಾಯಾಲಯದ ಮೆಟ್ಟಿಲೇರಿರುವ ವೃದ್ದೆ ಸಾವಿತ್ರಿ ಮಾಳೆ ತನ್ನ ಜೀವಿತಾವಧಿಯಲ್ಲಿ ಮರಣ ಪತ್ರ ನೀಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.‌ ಜತೆಗೆ ಮಾನಸಿಕವಾಗಿ ನೊಂದಿರುವ ತಮಗೆ ಕಾನೂನಿನ‌ ನೆರವು ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳಿಗೆ ಅರ್ಜಿ ಬರೆದಿದ್ದಾಳೆ ಎಂದು ತಿಳಿದು ಬಂದಿದೆ.

ನಾನು ಚುನಾವಣೆ ಕಾರ್ಯದಲ್ಲಿ ಇದ್ದೇನೆ. ವಿಷಯ ನನ್ನ ಗಮನಕ್ಕೂ ಬಂದಿದೆ. ಬೈ ಮಿಸ್ಟೇಕ್ ಆಗಿ ತಾಯಿ ಹೆಸರು ಬರೆಯುವ ಬದಲು ಮಗಳ ಹೆಸರು ಆಗಿರಬಹುದು. ನಾನು ಕೆಲಸ ಮುಗಿಸಿ ನಿಮಗೆ ಸಮಗ್ರ ವಿಷಯ ಹೇಳುತ್ತೇನೆ.

ಹನುಮಂತ ಶಿರಹಟ್ಟಿ, ತಹಶೀಲ್ದಾರ ಚಡಚಣ.
BIJAPUR NEWS CHADACHAN public public news tahasildar udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.