Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೆಸ್ಸೆಸ್ ಸರಸಂಚಾಲಕ ಮೋಹನ್‌ ಭಾಗವತ್‌ ನಿಂಬಾಳದಲ್ಲಿ ವಾಸ್ತವ್ಯ
(ರಾಜ್ಯ ) ಜಿಲ್ಲೆ

ಆರೆಸ್ಸೆಸ್ ಸರಸಂಚಾಲಕ ಮೋಹನ್‌ ಭಾಗವತ್‌ ನಿಂಬಾಳದಲ್ಲಿ ವಾಸ್ತವ್ಯ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕ ಮೋಹನ್‌ ಭಾಗವತ್‌ ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಚಡಚಣ ತಾಲೂಕಿನ ನಿಂಬಾಳದಲ್ಲಿರುವ ಇಂಚಗೇರಿ ಸಾಂಪ್ರದಾಯದ ಗುರುದೇವ ರಾಣಡೆ ಆಶ್ರಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಪ್ರತಿ ವರ್ಷ ಜೂನ್-ಜುಲೈ ತಿಂಗಳಲ್ಲಿ ಇಂಚಗೇರಿ ಸಾಂಪ್ರದಾಯದ ಆಧ್ಯಾತ್ಮ ಆಚರಣೆಗಳಲ್ಲಿ ತೊಡಗುವುದು ವಾಡಿಕೆ ಇದ್ದು, ಕಳೆದ ಮೂರು ದಿನಗಳಿಂದ ಆಧ್ಯಾತ್ಮ ಸಾಧನೆಯಲ್ಲಿ ತೊಡಗಿದ್ದಾರೆ.
ಗುರುದೇವ ರಾಣಡೆ ಆಶ್ರಮದಲ್ಲಿ ವಾಸ್ತವ್ಯ: ವಿಜಯಪುರ ಜಿಲ್ಲೆಯ ಆಧ್ಯಾತ್ಮ ತವರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಜಿಲ್ಲೆಯಲ್ಲಿ ಆಗಿ ಹೋದ ಸಂತಮಹಂತರು ವಿಶ್ವವ್ಯಾಪಿ ಆವರಿಸಿಕೊಂಡಿದ್ದಾರೆ. ಅದೇ ರೀತಿ ವಿಜಯಪುರ ಜಿಲ್ಲೆಯಲ್ಲಿ ಇಂಚಗೇರಿ ಸಾಂಪ್ರದಾಯದ ಮಠಗಳಿಗೇನು ಕಮ್ಮಿ ಇಲ್ಲ. ಇಂಚಗೇರಿ ಮಠದ ಆದರ್ಶ, ಗುರುಪರಂಪರೆಯನ್ನ ಮೆಚ್ಚಿ ದೇಶ ವಿದೇಶಗಳಿಂದ ಭಕ್ತರು ಬರ್ತಾರೆ. ಅದೇ ರೀತಿ ನಿಂಬಾಳದಲ್ಲಿರುವ ಗುರುದೇವ ರಾಣಡೆ ಅವರ ಆಶ್ರಮಕ್ಕು ದೇಶ-ವಿದೇಶಗಳಿಂದ ಭಕ್ತರು ಬಂದು ಸಾಧನೆ ಮಾಡ್ತಾರೆ. ಇಂಥಹ ಭಕ್ತರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಕರಾದ ಮೋಹನ್‌ ಭಾಗವತ್‌ ಅವರು ಸಹ ಒಬ್ಬರು. ಪ್ರತಿ ವರ್ಷದ ೪ ದಿನಗಳ ಕಾಲ ವಿಜಯಪುರ ಜಿಲ್ಲೆಯ ನಿಂಬಾಳದ ಗುರುದೇವ ರಾಣಡೆ ಅವರ ಆಶ್ರಮದಲ್ಲಿ ಉಳಿದುಕೊಂಡು ಆಧ್ಯಾತ್ಮ ಸಾಧನೆ ಮಾಡ್ತಾರೆ.
ಆಶ್ರಮದಲ್ಲಿ ಭಾಗವತ್‌ ಏನೇನು ಮಾಡ್ತಾರೆ?: ಇಂಚಗೇರಿ ಸಾಂಪ್ರದಾಯ ಸ್ಥಾಪನೆ ಮಾಡಿದ ಸದ್ಗುರು ಭಾಹುಸಾಹೇಬ ಮಹಾರಾಜರ ಶಿಷ್ಯರು ಗುರುದೇವರ ರಾಣಡೆ ಅವರು. ಗುರುದೇವ ರಾಣಡೆ ಗುರುಪರಂಪರೆಗೆ ಮೋಹನ್‌ ಭಾಗವತ್‌ ಶಿಷ್ಯರಾಗಿದ್ದಾರೆ. ಪ್ರತಿ ವರ್ಷ ಜೂನ್-ಜುಲೈ ತಿಂಗಳಲ್ಲಿ ೪ ದಿನಗಳ ಕಾಲ ನಿಂಬಾಳ ಆಶ್ರಮದಲ್ಲಿ ಉಳಿದುಕೊಳ್ಳುವ ಮೋಹನ್‌ ಭಾಗವತ್‌ ಅವರು ಆಧ್ಯಾತ್ಮ ಸಾಧನೆಯಲ್ಲಿ ತೊಡಗುತ್ತಾರೆ. ಇಂಚಗೇರಿ ಸಾಂಪ್ರದಾಯದ ನಿತ್ಯನೇಮಾವಳಿಗಳನ್ನ ಆಚರಿಸುತ್ತಾರೆ. ಶ್ರೀರಾಮದಾಸ ಮಹಾರಾಜರು ಬರೆದ ದಾಸಭೋದ ಗ್ರಂಥ ಪಠಣೆ ಮಾಡುತ್ತಾರೆ. ನಸುಕಿನ ಜಾವ ಕಾಕಡಾರತಿ ನಂತರ ಧ್ಯಾನ, ಮುಂಜಾನೆ ಭಜನೆ, ಮಧ್ಯಾಹ್ನ ಭಜನೆ, ರಾತ್ರಿ ತುಕಾರಾಮ್‌ ಮಹಾರಾಜರ ಬಾರಾಹ ಅಭಂಗ ಮಾಡಲಾಗುತ್ತದೆ. ಈ ನಡುವೆ ಮಠದಲ್ಲಿರುವ ಗುರುಗಳ ಜೊತೆಗೆ ಆಧ್ಯಾತ್ಮ ಚರ್ಚೆಯನ್ನು ಮೋಹನ್‌ ಭಾಗವತ್‌ ಮಾಡುತ್ತಿದ್ದಾರೆ. ನಾಲ್ಕು ದಿನಗಳ ಕಾಲ ನಿರಂತರ ಧ್ಯಾನ, ಉಪಾಸನೆಗಳನ್ನ ಮಾಡುತ್ತಾರೆ.
ಇಂಚಗೇರಿ ಮಠಕ್ಕೆ ಭೇಟಿ, ಗದ್ದುಗೆ ದರ್ಶನ: ಇನ್ನು ಇಂಚಗೇರಿ ಮಠಕ್ಕೆ ಭೇಟಿ ನೀಡಿ ಅಲ್ಲಿ ಭಾಹುಸಾಹೇಬ ಮಹಾರಾಜರ ಗದ್ದುಗೆ ದರ್ಶನ ಮಾಡಲಿದ್ದಾರೆ. ಬಳಿಕ ದೇವರ ನಿಂಬರಗಿಯ ಗುರುಲಿಂಗ ಜಂಗಮ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿ ದೆಹಲಿಗೆ ಮರಳಲಿದ್ದಾರೆ. ಮೋಹನ್‌ ಭಾಗವತ್‌ ಅವರ ಆಗಮನ ಹಿನ್ನೆಲೆ ನಿಂಬಾಳ ಆಶ್ರಮದ ಸುತ್ತ ಟೈಟ್‌ ಸೆಕ್ಯೂರಿಟಿ ನೇಮಿಸಲಾಗಿದೆ. ಮಾಧ್ಯಮ ಸೇರಿ ಯಾರೊಬ್ಬರ ಭೇಟಿ ಅವಕಾಶ ಇಲ್ಲ ಎನ್ನಲಾಗಿದೆ.ಆಶ್ರಮದ ಸುತ್ತ ಬಿಗಿ ಭದ್ರತೆ: ಝಡ್ ಪ್ಲಸ್ ಭದ್ರತೆಯಲ್ಲಿ ಆಶ್ರಮದ ಕೆಲವೇ ಜನರ ಜೊತೆಗಿರುವ ಮೋಹನ್ ಭಾಗವತ್ ಅವರ ಭೇಟಿಗೆ ಯಾರಿಗೂ ಅವಕಾಶವಿಲ್ಲ. ರಾನಡೆ ಆಶ್ರಮದ ಹೊರಗಡೆ ಜಿಲ್ಲಾ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ಗುರುವಾರ ಬೆಳಿಗ್ಗೆ ರಾನಡೆ ಆಶ್ರಮದಿಂದ ಹೊರಟು ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ದೇವರನಿಂಬರಗಿ ಗ್ರಾಮದ ಮಠಕ್ಕೆ ಭೇಟಿ ನೀಡಿ ಅಲ್ಲಿಂದ ಮಹಾರಾಷ್ಟ್ರದ ಉಮದಿಗೆ ತೆರಳುತ್ತಾರೆ ಎಂದು ಮೂಲಗಳು ತಿಳಿಸಿವೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.