Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋರಕ್ಷಣೆಯಿಂದ ದೇಶಕ್ಕೆ ಮಂಗಲ :ಸತ್ಯಾರ್ಥತೀರ್ಥ ಶ್ರೀ
(ರಾಜ್ಯ ) ಜಿಲ್ಲೆ

ಗೋರಕ್ಷಣೆಯಿಂದ ದೇಶಕ್ಕೆ ಮಂಗಲ :ಸತ್ಯಾರ್ಥತೀರ್ಥ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಗೋವುಗಳನ್ನು ಕಸಾಯಿಕಾನೆಗೆ ಕಳುಹಿಸಲು ಪ್ರೋತ್ಸಾಹ ನೀಡುವ ರಾಷ್ಟ್ರಕ್ಕೆ ಹಾನಿ ಸಂಭವಿಸುತ್ತದೆ, ಗೋ ರಕ್ಷಣೆಯಿಂದ ದೇಶ ಮಂಗಲವಾಗುತ್ತದೆ ಎಂದು ಉತ್ತರಾದಿಮಠದ ಶ್ರೀ ಸತ್ಯಾರ್ಥತೀರ್ಥ ಶ್ರೀಪಾದಂಗಳವರು ಹೇಳಿದರು.
ಯಲಗೂರದ ಪ್ರಮೋದಾತ್ಮ ಗೋಶಾಲೆಯಲ್ಲಿ ಮೂರ್ತಿ ಫೌಂಡೇಶನ್ ನೀಡಿದ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿದ ಗೋಶಾಲೆಯ ನೂತನ ಕಟ್ಟಡ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗೋವಿನ ಪ್ರತಿ ಅಂಗಗಳಲ್ಲಿಯೂ ದೇವತೆಗಳು ನೆಲೆಸಿದ್ದಾರೆ ಎಂದರು.
ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸುಧಾಮೂರ್ತಿ ಅವರು ಈ ಗೋಶಾಲೆಯನ್ನು, ಹೆಚ್ಚುವರಿ ಕೊಠಡಿಯನ್ನು ಕಟ್ಟಿಸಿಕೊಟ್ಟಿದ್ದಾರೆ. ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಡುವ ಜತೆಗೆ, ಅಂಗವಿಕಲರಿಗೆ, ಎಲ್ಲಾ ವರ್ಗದ ಜನರಿಗೆ ಶೈಕ್ಷಣಿಕವಾಗಿ, ವೈದ್ಯಕೀಯವಾಗಿ, ಸಾಮಾಜಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತುವ ಕಾರ್ಯ ಮಾಡಿದ್ದಾರೆ ಎಂದರು.
ಪಾವಗಡ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಜಪಾನಂದಜೀ ಮಹಾರಾಜರು ಮಾತನಾಡಿ, ರಾಜ್ಯದ ಮೂರು ಕಡೆ ಗೋಶಾಲೆ ತೆರೆದು ಸುಮಾರು 10000 ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಿ ಸಾಕಲಾಗುತ್ತಿದೆ. ಇದಕ್ಕೆಲ್ಲಾ ಹಿಂದಿನ ಪ್ರೇರಕ ಶಕ್ತಿ ಸುಧಾಮೂರ್ತಿಯವರು ಎಂದರು.
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ, ಪ್ರತಿಯೊಬ್ಬರು ಗೋಗ್ರಾಸಕ್ಕಾಗಿ ನಿತ್ಯ 10 ರೂ ತೆಗೆದಿಡಬೇಕು,ನಾನು ಕೂಡಾ ಪ್ರತಿ ವರ್ಷ ಮೇವಿಗಾಗಿ 2 ಲಕ್ಷ ರೂ ನೀಡುವುದಾಗಿ ಘೋಷಿಸಿದರು.
ರಘೋತ್ತಮಾಚಾರ್ಯ ಅರ್ಜುಣಗಿ ಪ್ರಾಸ್ತವಿಕವಾಗಿ ಮಾತನಾಡಿ, 2004 ರಲ್ಲಿ ಕೇವಲ 10 ಹಸುಗಳಿಂದ ಆರಂಭಗೊಂಡ ಈ ಪ್ರಮೋದಾತ್ಮ ಗೋಶಾಲೆಯಲ್ಲೀಗ 700 ಕ್ಕೂ ಅಧಿಕ ಗೋವುಗಳಿವೆ. ಪ್ರತಿ ವರ್ಷ 18 ಲಕ್ಷ ರೂ ಮೌಲ್ಯದ ಒಣಮೇವು ಖರೀದಿಸಲಾಗುತ್ತದೆ ಎಂದರು. ಗೋವಿನ ಹೆಂಡಿಯಿಂದ ಗೊಬ್ಬರ ತಯಾರಿಸಿ ಅದನ್ನು ಮಾರಲಾಗುತ್ತದೆ. ಹಾಲು ಆಕಳಿನಿಂದ ಹಿಂಡಲು ಪ್ರಾಶಸ್ತ್ಯ ನೀಡದೇ, ಕರುಗಳಿಗೆ ಕುಡಿಯಲು ಬಿಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಪಂಡಿತ ಮಧ್ವಾಚಾರ್ಯ ಮೊಕಾಶಿ ರಮೇಶ್, ಸುನಂದಾ ಕುಲಕರ್ಣಿ, ಸತ್ಯಧ್ಯಾನಾಚಾರ್ಯ ಕಟ್ಟಿ, ವಿದ್ಯಾಧೀಶಾಚಾರ್ಯ ಗುತ್ತಲ, ರಘೋತ್ತಾಮಾಚಾರ್ಯ ನಾಗಸಂಪಿಗೆ, ಸುಧೀಂದ್ರಾಚಾರ್ಯ ಗದ್ದನಕೇರಿ, ಅನಂತ ಓಂಕಾರ, ಪ್ರಸನ್ನಾಚಾರ್ಯ ಕಟ್ಟಿ, ಡಾ ಕೃಷ್ಣ ಕಟ್ಟಿ ಇತರರು ಇದ್ದರು.
ಗೋಶಾಲೆಗೆ ನೆರವಾದ ಹಲವು ಮಹನೀಯರನ್ನು ಶ್ರೀಗಳು ಸನ್ಮಾನಿಸಿದರು.

2 ಲಕ್ಷ ರೂ ಮೇವಿಗಾಗಿ ನೀಡಿದ ಸುಧಾಮೂರ್ತಿ

ಬೇಸಿಗೆಯಲ್ಲಿ ಹಸಿ ಮೇವಿನ ಖರೀದಿಗಾಗಿ ಗೋಶಾಲೆಗೆ 2 ಲಕ್ಷ ರೂ ನೀಡಿದ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ, ಇಲ್ಲಿ ಸೇರಿದ ಪ್ರತಿಯೊಬ್ಬ ಹೆಣ್ಣು ಮಕ್ಕಳು ಪ್ರತಿ ಕುಟುಂಬದ ಪರವಾಗಿ ಗೋಗ್ರಾಸಕ್ಕಾಗಿ (ಗೋವಿನ ಆಹಾರಕ್ಕಾಗಿ) 10 ರೂ ತೆಗೆದಿರಿಸಬೇಕು. ವಾರ್ಷಿಕ 3650 ರೂಗಳನ್ನು ಗೋಶಾಲೆಗೆ ನೀಡಬೇಕು. ಎಲ್ಲರೂ ಗೋಶಾಲೆಯ ಅಭಿವೃದ್ಧಿ ಕೈಜೋಡಿಸಬೇಕು, ನಾನು ನನ್ನ ಕೈಲಾದ ಸಹಾಯ ಮಾಡುವುದಾಗಿ ಹೇಳಿದರು.
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿ ದೆಹಲಿಯಿಂದ ನೇರವಾಗಿ ಬೆಂಗಳೂರು, ಹುಬ್ಬಳ್ಳಿ ಮೂಲಕ ಯಲಗೂರಕ್ಕೆ ಬಂದಿರುವ ಸುಧಾಮೂರ್ತಿ ಅವರ ಸೆಲ್ಫಿಗಾಗಿ ನೂರಾರು ಜನರು ಮುಗಿಬಿದ್ದರು. ಯಲಗೂರೇಶ ದೇವಸ್ಥಾನದಲ್ಲಿ ದೇವಸ್ಥಾನ ಟ್ರಸ್ಟ್ ನವರು ಸುಧಾಮೂರ್ತಿ ಅವರನ್ನು ಸನ್ಮಾನಿಸಿದರು. ಇಲ್ಲಿಯ ಅರೆ ಝಳದ ಬಿಸಲಿಗೆ ಬಳಲಿದಂತೆ ಕಂಡ ಸುಧಾಮೂರ್ತಿಯವರು ಪೂಜೆ, ಶೋಭಾ ಮೆರವಣಿಗೆಯಲ್ಲಿ ಮಿಂಚಿದರು.

ALMATTI BIJAPUR NEWS public public news SUDHA MURTI udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.