ಇಂಡಿ: ಶಿಕ್ಷಕರು ಪ್ರತಿ ಶಾಲೆಯಲ್ಲಿ ಸೇವಾದಳದ ಘಟಕವನ್ನು ಸ್ಥಾಪಿಸಿ, ಮಕ್ಕಳಲ್ಲಿ ರಾಷ್ಟ್ರಭಕ್ತಿ, ಶಿಸ್ತು ಹಾಗೂ ಸಾಮಾಜಿಕ ಜೀವನ ನಿರ್ವಹಣೆಯ ಪಾಠ ಅರಿಯಲು ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಾಲೂಕ ಭಾರತ ಸೇವಾದಳದ ಅಧ್ಯಕ್ಷ ಕೆ ಪಿ ಭೈರಜಿ ಹೇಳಿದರು.
ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ತಾಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಡೆದ ಶಿಕ್ಷಕ, ಶಿಕ್ಷಕಿಯರ ಒಂದು ದಿನದ ಮಿಲಾಪ್ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಅಂಬಣ್ಣ ಸುಣಗಾರ ಮಾತನಾಡಿ, ಶಿಕ್ಷಕ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಸಾತ್ ಕೊಟ್ಟ ಏಕೈಕ ಸಂಸ್ಥೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಮುಖ್ಯಸ್ಥ ನಾಗೇಶ ಡೋಣುರ, ಭಾರತ ಸೇವಾದಳಕ್ಕೆ ಶಿಕ್ಷಕರೇ ಅಡಿಗಲ್ಲು. ಅದನ್ನು ಉಳಿಸಿ ಬೆಳೆಸುವುದು ಅವರಿಂದ ಮಾತ್ರ ಸಾಧ್ಯ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸೇವಾದಳದ ಶಾಖೆಗಳನ್ನು ಎಲ್ಲ ಶಾಲೆಗಳಲ್ಲೂ ತೆರೆಯಬೇಕು. ಇಂದಿನ ಪೀಳಿಗೆಯಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಶಿಸ್ತನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.
ಉಪಾಧ್ಯಕ್ಷೆ ರಾಜೇಶ್ವರಿ ಕ್ಷತ್ರಿ ಮಾತನಾಡಿ, ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸೇವಾಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ದೇಶವನ್ನು ಅಭಿವೃದ್ದಿ ಪಡಿಸಬೇಕು ಎಂದು ಹೇಳಿದರು.
ಭಾರತ ಸೇವಾದಳದ ಕೋಶಾಧ್ಯಕ್ಷ ಅನಿಲ ಏಳಗಿ ಉದ್ಘಾಟಿಸಿದರು. ಕಾರ್ಯದರ್ಶಿ ಎಂ ಎಲ್ ಪ್ಯಾಟಿ, ಸಂಪನ್ಮೂಲ ವ್ಯಕ್ತಿ ಜಿ ಜಿ ಬರಡೋಲ ಮಾತನಾಡಿದರು.
ಮುಖ್ಯ ಶಿಕ್ಷಕ ಎಂ ಎಫ್ ತುರ್ಕಿ, ಎಲ್ ಬಿ ತೋಟದ, ಟಿ ಎಸ್ ಹೊಸಮನಿ, ಎಸ್ ಬಿ ಕಲ್ಲೋಳ್ಳಿ, ಆರ್ ಕೆ ಹಳ್ಳಿ, ದುಂಡಪ್ಪ ಹರಿಜನ ಸೇರಿದಂತೆ ತಾಲೂಕಿನ ಸೇವಾದಳದ ಶಿಕ್ಷಕರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಮಿಲಾಪ ಶಿಬಿರ: ಪ್ರತಿ ಶಾಲೆಯಲ್ಲಿ ಭಾರತ ಸೇವಾದಳ ಸಕ್ರಿಯಗೊಳಿಸಿ
Related Posts
Add A Comment

