ಇಂಡಿ: ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಾಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆದರ್ಶ ಶಾಲೆಯಲ್ಲಿ, ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ನಾಡುಪ್ರಭು ಕೆಂಪೇಗೌಡ ಜಯಂತಿ ನಿಮತ್ಯವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.
ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯಾಗಿರುವ ಕೆಂಪೇಗೌಡ ಜಾತ್ಯಾತೀತ ಸಮಾಜದ ನೆಮ್ಮದಿ ಬದುಕಿಗೆ ಅದ್ವಿತೀಯ ಕೊಡುಗೆ ನೀಡಿದ ಮಹಾನ ನಾಯಕರು.ಕೆಂಪೇಗೌಡರು ಬೆಂಗಳೂರು ನಗರವನ್ನು ನಿರ್ಮಿಸುವಾಗಲೇ ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ಹಾಗೂ ವೃತ್ತಿ ಆಧಾರಿತವಾದ 54 ಪೇಟೆಗಳನ್ನು ನಿರ್ಮಿಸಿದರು. ಇದರಿಂದ ಎಲ್ಲಾ ಸಮುದಾಯದ ಬಡಕುಟಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಾಧ್ಯವಾಯಿತು. ಅಕ್ಕಿಪೇಟೆ, ಅರಳೇಪೇಟೆ, ತಿಗಳರಪೇಟೆ, ರಾಗಿಪೇಟೆ, ಗೊಲ್ಲರಪೇಟೆ ಹೀಗೆ ಮುಂತಾದ ಪೇಟೆಗಳನ್ನು ನಿರ್ಮಿಸಿರುವುದು ಅವರ ಸರ್ವ ಜನಾಂಗದ ಅಭ್ಯುದಯದ ಬಗ್ಗೆ ಹೊಂದಿದ್ದ ಕಳಕಳಿಗೆ ಸಾಕ್ಷಿಯಾಗಿದೆ. ಅದಲ್ಲದೇ ನಗರ ಸಹಕಾರವಾಗುವಂತೆ ಸುಮಾರು 100 ಕೆರೆಗಳು ನಿರ್ಮಾಣ ಮಾಡಿದ್ದಾರೆ. ಕೆಂಪೇಗೌಡರ ವಿಚಾರ ಆದರ್ಶ ಮೈಗೂಡಿಸಿಕೊಳ್ಳಬೇಕು ಎಂದರು.
ಇದೆ ಸಮಯದಲ್ಲಿ ಶಿಕ್ಷಣ ಇಲಾಖೆ ಬಸವರಾಜ ಗೊರನಾಳ ಮಾತನಾಡಿದರು.
ವೇದಿಕೆ ಮೇಲೆ ಪ್ರಾಚಾರ್ಯ ಎಸ್ ಜಿ ಬನಸೋಡೆ, ಉಪ ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಬಸವರಾಜ ರಾವೂರ, ಮಹೇಶ ಗಾಣಗೇರ, ಎಸ್ ಎಮ್ ಕಾರ್ಕಳ, ಟಿ ಎಸ್ ಹೂಗಾರ, ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

