ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ ೨೦೨೨ (ದಿನಾಂಕ೧-೧-೨೦೨೨ ರಿಂದ ೩೧-೧೨-೨೦೨೨ರವರೆಗೆ) ಹಾಗೂ ೨೦೨೩ನೇ (೧-೧-೨೦೨೩ರಿಂದ ೩೧-೧೨-೨೦೨೩ರವರಗೆ) ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ(ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ ೧೫೦ ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀಣ ಈ ನಾಲ್ಕು ಪ್ರಕಾರಗಳ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು ೪ ಕೃತಿಗಳನ್ನು ದ್ವಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ ಜೆ.ಸಿ. ರಸ್ತೆ ಬೆಂಗಳುರು-೫೬೦೦೦೨ ಇವರಿಗೆ ಜುಲೈ ೨ರ ಒಳಗೆ ತಲುಪುವಂತೆ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕಳಿಹಿಸಬೇಕು ಎಂದು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
