Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ? ತಪ್ಪೇ?..
ವಿಶೇಷ ಲೇಖನ

ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ? ತಪ್ಪೇ?..

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು

ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ ಪುನರ್ ಸ್ಥಾಪನೆಯ ಪ್ರಯತ್ನ..
ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ? ತಪ್ಪೇ?..
ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ..
ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ ಅನೇಕ ರೀತಿಯ ಖಾಸಗಿ ಸಂಭಾಷಣೆ ನಡೆಸುತ್ತೇವೆ. ನಮ್ಮ ಅತ್ಯಂತ ಖಾಸಗಿ ಆರೋಗ್ಯದಿಂದ – ವಿಶ್ವದ ಎಲ್ಲಾ ಆಸಕ್ತಿದಾಯಕ ವಿಷಯಗಳನ್ನೂ ಚರ್ಚಿಸುತ್ತೇವೆ. ನಮ್ಮ ಆರ್ಥಿಕ ಸಂಕಷ್ಟ, ನೈತಿಕ/ಅನೈತಿಕ ಸಂಬಂಧಗಳು, ಇತರರ ಬಗ್ಗೆ ನಮಗಿರುವ ಪ್ರೀತಿ/ದ್ವೇಷ/ಅಸೂಯೆ ಎಲ್ಲವನ್ನೂ ಮಾತನಾಡುತ್ತೇವೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಎಲ್ಲವೂ ನಮ್ಮ ನಮ್ಮ ಆಸಕ್ತಿಗೆ ಅನುಗುಣವಾಗಿ ಸಂಭಾಷಣೆ ಇರುತ್ತದೆ. ಕೆಲವೊಮ್ಮೆ ಗಾಢ ಸ್ನೇಹ ಇರಬಹುದು ಅಥವಾ ಕೆಲವೊಮ್ಮೆ ದೂರದ ಸ್ನೇಹ/ಪರಿಚಯ ಇರಬಹುದು..
ಆದರೆ, ಈ ಗೆಳೆತನದ ಸಮಯದಲ್ಲಿ ನಾವು ಆಡಿದ ಸಹಜ ಲೋಕಾಭಿರಾಮದ ಮಾತುಗಳನ್ನು ನಮಗೆ ತಿಳಿಯದಂತೆ ಜೊತೆಗಾರರಲ್ಲಿ ಒಬ್ಬರು ಧ್ವನಿಮುದ್ರಿಸಿಕೊಂಡಿದ್ದು , ಮತ್ತೆಂದೋ ನಮ್ಮ ಬಗ್ಗೆ ಕೋಪ/ಬೇಸರ ಉಂಟಾದಾಗ ಅದನ್ನು ತಮಗೆ ಅನುಕೂಲಕರವಾಗಿ ಬಹಿರಂಗ ಪಡಿಸಿದರೆ ನಮ್ಮ ಸ್ಥಿತಿ ಹೇಗಾಗಬಹುದು. ಇದು ಅತ್ಯಂತ ಹಿಂಸಾತ್ಮಕ ಅನುಭವ ನೀಡುತ್ತದೆ. ಮಹಿಳೆಯರ ವಿಷಯದಲ್ಲಿ ಇನ್ನೂ ಕಠೋರವಾಗಿ ಇದು Blackmail ಆಗಿ ಅವರ ಬದುಕಿಗೇ ಬೆಂಕಿ ಹಚ್ಚುವ ಸಾಧ್ಯತೆಯೇ ಹೆಚ್ಚು..
ಇದು ಸರಿಯೇ ? ತಪ್ಪೇ ?..


ನನ್ನ ದೃಷ್ಟಿಯಲ್ಲಿ ಇದು ಅತ್ಯಂತ ಅಮಾನವೀಯ/ಹೇಸಿಗೆ/ಅನಾಗರಿಕ ಮತ್ತು ಮಾನವೀಯ ನಂಬುಗೆಗೆ ಮಾಡಬಹುದಾದ ಬಹುದೊಡ್ಡ ಮೋಸ..
ನಾವು ಯಾವುದೋ ಪಕ್ಷ, ಸಂಘಟನೆ, ಸಂಸ್ಥೆಯ ಅಧಿಕೃತ ವಕ್ತಾರರೋ, ಸರ್ಕಾರಿ ಅಧಿಕಾರಿಯೋ ಆಗಿದ್ದು, ತುಂಬಾ ಜವಾಬ್ದಾರಿ ಸ್ಥಾನದಲ್ಲಿದ್ದು, ದೇಶ ಅಥವಾ ಸಮಾಜ ದ್ರೋಹದ ಅಥವಾ ಕಾನೂನಿಗೆ ವಿರುದ್ದವಾದ ಚಟುವಟಿಕೆಗಳ ಸಂದರ್ಭದಲ್ಲಿ ಇದು ಒಂದಷ್ಟು ಸಹನೀಯ.
ಅದನ್ನು ಹೊರತುಪಡಿಸಿ ನಮ್ಮ ಲೋಕಾಭಿರಾಮದ/ಬೇಸರ ಕಳೆಯುವ/ ಆಸಕ್ತಿಯ ವಿಷಯಗಳನ್ನು ಮಾತನಾಡುವಾಗ ನಾವು ವ್ಯಕ್ತಪಡಿಸುವ ಕೋಪ/ ಆಕ್ರೋಶ/ದುಃಖ/ಅಸೂಯೆ/ತಮಾಷೆ/ಪ್ರೀತಿ/ಪ್ರೇಮ ಮತ್ತು ಇನ್ನೊಬ್ಬರ ಬಗ್ಗೆ ಸಹಜವಾದ ಉದ್ದೇಶಪೂರ್ವಕವಲ್ಲದ ಕೊಂಕುನುಡಿಗಳನ್ನು ಮುದ್ರಿಸಿ ಬಹಿರಂಗಪಡಿಸಿದರೆ ಆಗುವ ಮರ್ಮಾಘಾತ ಯಾವ ಶತ್ರುವಿಗೂ ಬೇಡ ಎನಿಸುತ್ತದೆ..
ಹಾಗಾದರೆ ಇದನ್ನು ತಡೆಯುವುದು ಹೇಗೆ ?
ಇದು ಖಂಡಿತ ಈಗಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ. ಹಾಗಂತ ಕೇವಲ ಅಧಿಕೃತ/ಕೃತಕ/ಮೇಲ್ಮಟ್ಟದ ತೋರಿಕೆಯ ಮಾತುಗಳನ್ನು ಮಾತ್ರ ಆಡುತ್ತಾ ಇರಲು ಸಾಧ್ಯವೇ ? ಮುಕ್ತ ಮಾತುಕತೆ ಬೇಡವೇ ? ಮುಕ್ತ ಮಾತುಕತೆಯಿಂದಲೆ ಅಲ್ಲವೇ ವ್ಯಕ್ತಿಗಳು ಸ್ಪಷ್ಟವಾಗುವುದು. ಸ್ನೇಹ ಸಂಬಂಧಗಳು ಬಲವಾಗುವುದು.
ಇಲ್ಲದಿದ್ದರೆ ಪ್ರಿತಿಯ ಮಾತನ್ನು ಸಹ ತುಂಬಾ ಯೋಚಿಸಿ ಬರೆದುಕೊಂಡು ಮಾತನಾಡಬೇಕಾಗುತ್ತದೆ. ಅದು ಸಾಧ್ಯವೇ ?. ಅದು ಅಸಹಜ ಮತ್ತು ಕೃತಕ ಎನಿಸುವುದಿಲ್ಲವೇ?..
ಅದಕ್ಕಾಗಿ ನಾವು ಮಾಡಬಹುದಾದ ಕೆಲಸವೆಂದರೆ, ಈ ರೀತಿಯ ಖಾಸಗಿ ಮಾತುಕತೆಗಳನ್ನು ನಮ್ಮ ಜೊತೆಗಾರರು ಬಹಿರಂಗ ಪಡಿಸಿದ ಸಂದರ್ಭದಲ್ಲಿ ಅದು ಎಷ್ಟೇ ಗಂಭೀರ ವಿಷಯವಾಗಿದ್ದರೂ ಅದನ್ನು ಇತರರು ನಿರ್ಲಕ್ಷಿಸಬೇಕು.
ಖಾಸಗಿ ಸಂಭಾಷಣೆ ಬಹಿರಂಗ ಪಡಿಸಿದವರೇ ಮೊದಲ ಅಪರಾಧಿ ಮತ್ತು ನಂಬಿಕೆಯ ವಂಚಕ ಎಂದು ಒಕ್ಕೊರಲಿನಿಂದ ಖಂಡಿಸಬೇಕು. ನಮ್ಮ ಗಮನಕ್ಕೆ ಬಾರದೆ ಧ್ವನಿಮುದ್ರಿಸಿಕೊಂಡಿರುವುದೇ ದೊಡ್ಡ ದ್ರೋಹ. ಧ್ವನಿಮುದ್ರಣದಲ್ಲಿ ಇರುವ ವಿಷಯ ಈ ಕಾರಣದಿಂದಲೇ ತನ್ನ ಮಹತ್ವ ಕಳೆದುಕೊಳ್ಳುವಂತೆ ಮಾಡಬೇಕು. ಆಗ ಈ ರೀತಿಯ ನಂಬಿಕೆ ದ್ರೋಹದ ಕೃತ್ಯಗಳಿಗೆ ಕಡಿವಾಣ ಹಾಕಬಹುದು..
ಗೆಳೆತನದಲ್ಲಿ ಇನ್ನಷ್ಟು ಮುಕ್ತ ಮತ್ತು ಆತ್ಮೀಯ ವಾತಾವರಣ ನಿರ್ಮಿಸಿ ಸ್ವತಂತ್ರವಾಗಿ ಜೊತೆಗಾರರೊಂದಿಗೆ ಮಾತನಾಡಬಹುದು. ಇದನ್ನು ಎಲ್ಲರೂ ಒಟ್ಟಾಗಿ ಪಾಲಿಸೋಣ ಎಲ್ಲಾ ಸಂಬಂಧಗಳಲ್ಲಿಯೂ..
( ಕಾನೂನು ಬಾಹಿರ ಕ್ರಿಮಿನಲ್ ಚಟುವಟಿಕೆಗಳಿಗೆ ಅಥವಾ ಅತ್ಯಗತ್ಯ ವ್ಯಾವಹಾರಿಕ ಅನಿವಾರ್ಯತೆಗೆ ಅಥವಾ ಅನಿವಾರ್ಯ ಮುನ್ನೆಚ್ಚರಿಕೆಗೆ ಇದು ಅನ್ವಯಿಸುವುದಿಲ್ಲ. ಕೇವಲ ಸಹಜ ಗೆಳೆತನದ ಸಹಜ ವರ್ತನೆಗಳಿಗೆ ಮಾತ್ರ ಅನ್ವಯ..

– ವಿವೇಕಾನಂದ. ಎಚ್. ಕೆ. ಬೆಂಗಳೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.