Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೃಷಿ-ಶಿಕ್ಷಣ-ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಿ
(ರಾಜ್ಯ ) ಜಿಲ್ಲೆ

ಕೃಷಿ-ಶಿಕ್ಷಣ-ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಸಿಇಓ ರಿಷಿ ಆನಂದ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬ್ಯಾಂಕುಗಳಿಂದ ಒಟ್ಟು ೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ.೩.೮೮ ಪ್ರಗತಿ ಸಾಧಿಸಲಾಗಿದೆ. ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು.
ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಎಲ್‌ಸಿ) ಸಭೆ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ರೂ.೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ರೂ.೧೮೬೭೬ ಕೋಟಿ ಠೇವಣಿ ಇದೆ. ಕಳೆದ ವರ್ಷಕ್ಕಿಂತ ೩.೮೮% ಸಾಲದಲ್ಲಿ ಪ್ರಗತಿ ಸಾಧಿಸಿದ್ದು ಠೇವಣಿಯಲ್ಲಿ ೧೨.೦೨% ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಪ್ರಸ್ತುತ ೨೦೨೪-೨೫ ಸಾಲಿನಲ್ಲಿ ೪.೮೧% ಹೆಚ್ಚುವರಿ ಗುರಿ ಹೊಂದಿದ್ದು, ಎಲ್ಲ ಬ್ಯಾಂಕ್‌ಗಳು ತಮಗೆ ಕೊಟ್ಟ ಗುರಿಯನ್ನು ಸಾಧಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಪ್ರಗತಿ ಸಾಧಿಸಬೇಕು. ತೋಟಗಾರಿಕೆ ಇಲಾಖೆಗೆ ಜಿಲ್ಲೆಯ ಬೆಳೆ ವಿಮೆ ಬಗ್ಗೆ ಜಾಹೀರಾತು ನೀಡಲು ಎಲ್ಲಾ ಬೆಳೆ ವಿಮೆ ಪರಿಹಾರ ಅರ್ಜಿಗಳು ಮುಂದಿನ ಹದಿನೈದು ದಿನಗಳೊಳಗೆ ಪರಿಹರಿಸಬೇಕು ಮತ್ತು ಬ್ಯಾಂಕಿನವರಿಗೆ ಎಲ್ಲಾ ಸರಕಾರಿ ಸಾಲದ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಉಪ ಪೊಲೀಸ್ ಅಧೀಕ್ಷಕರಾದ ಶಂಕರ ಮಾರಿಹಾಳ ಅವರು, ಮಾತನಾಡಿ, ಬ್ಯಾಂಕ್‌ಗಳಲ್ಲಿ ಹಾಗೂ ಎ.ಟಿ.ಎಮ್‌ಗಳಲ್ಲಿ ಸೈಬರ್ ಅಪರಾಧಗಳ ಕಡಿವಾಣಕ್ಕೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿಬೇಕು ಹಾಗೂ ಸೈಬರ್ ವಂಚನೆಯಾಗದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಸೂಕ್ತ ತಿಳುವಳಿಕೆ-ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ನೇತಾಜಿ ಗೌಡರ್ ಜಿಲ್ಲೆಯ ತ್ರೈಮಾಸಿಕ ವರದಿ ಮಾರ್ಚ್ ೨೦೨೪ ಪೂರ್ಣ ವಿವರಣೆಯನ್ನು ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ನ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ಅಲೋಕ್ ಸಿನ್ಹಾ, ನಬಾರ್ಡ್ ಜಿಲ್ಲಾ ಅಭಿವೃದ್ದಿ ವ್ಯವಸ್ಥಾಪಕ ವಿಕಾಸ್ ರಾಠೋಡ, ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯದ ರೇಣುಕಾ ಹಾಗೂ ಜಿಲ್ಲೆಯ ಎಲ್ಲ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.