Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ
(ರಾಜ್ಯ ) ಜಿಲ್ಲೆ

ರೈತರಿಗೆ ಕಷ್ಟ ಕಾಲದಲ್ಲಿ ಕೈ ಹಿಡಿದ ಕೃಷಿಹೊಂಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ತಾಲೂಕಿನ ನಂದರಗಿ ಗ್ರಾಮದ ರೈತ ಕನ್ನಪ್ಪ ಕುಪಿಂದ್ರಾಯ ಪೂಜಾರಿ ಇವರು 4.00 ಎಕರೆ ಕೃಷಿ ಭೂಮಿಯನ್ನು ಹೊಂದಿರುತ್ತಾರೆ. ಒಣಬೇಸಾಯದಲ್ಲಿ ತೊಗರಿ, ಸಜ್ಜೆ, ಹೆಸರು ಇತ್ಯಾದಿ ಬೆಳೆಗಳನ್ನು ಬೆಳೆದು ತೇವಾಂಶದ ಕೊರತೆಯಿಂದಾಗಿ ಬೆಳೆಗಳು ಒಣಗಿ ಕಡಿಮೆ ಇಳುವರಿ ಬರುತ್ತಿತ್ತು. ಇದರಿಂದ ಕೃಷಿಯಲ್ಲಿ ಎಷ್ಟೆ ಕಷ್ಟಪಟ್ಟರೂ ನಿಗದಿತ ಲಾಭ ಆಗುತ್ತಿರಲಿಲ್ಲ. ಆದ್ದರಿಂದ ಸದರಿ ರೈತರು ಬೇಸತ್ತು ಕೃಷಿ ಇಲಾಖೆಗೆ ಭೇಟಿ ನೀಡಿ ತಮ್ಮ ನೋವನ್ನು ಹೇಳಿಕೊಂಡರು. ಈ ಸಮಯದಲ್ಲಿ ಕೃಷಿ ಇಲಾಖೆಗೆ ಕರ್ನಾಟಕ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ ಬಂದಿತ್ತು. ಇದರ ಸವಲತ್ತನ್ನು ಪಡೆದು ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡವನ್ನು ನಿರ್ಮಿಸಿಕೊಂಡರು. ಕಳೆದ ವರ್ಷ ಬರಗಾಲದಿಂದಾಗಿ ಬಸವಳಿದಿದ್ದ ರೈತರಿಗೆ ಈ ವರ್ಷ ಮುಂಗಾರು ಮಳೆ ಉತಮ್ಮವಾಗಿ ಆಗಿದ್ದರಿಂದ ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳಲು ಅನುಕೂಲವಾಯಿತು. ಇದರಿಂದ ರೈತರು ಹರ್ಷಗೊಂಡು ಬೆಳೆಗಳ ಬದಲಾವಣೆ ಮಾಡಿಕೊಂಡು ಹತ್ತಿ, ಮೆಕ್ಕೆಜೋಳ ಬಿತ್ತನೆ ಮಾಡಿರುತ್ತಾನೆ. ಕೃಷಿ ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಹತ್ತಿ ಬೆಳೆಗೆ ಬಳಸಿಕೊಂಡಿರುತ್ತಾನೆ.
ಮಳೆಯಾಧಾರಿತ ಕೃಷಿ ಮಾಡುತ್ತಿರುವವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿ ಹೊಂಡ ನಿರ್ಮಾಣ ಇಂಡಿ ತಾಲ್ಲೂಕಿನಲ್ಲಿ ವರದಾನವಾಗುತ್ತಿದೆ. ತಮ್ಮ ಜಮೀನಿನಲ್ಲಿ ಅನುಕೂಲಕ್ಕೆ ತಕ್ಕಂತೆ ಇಲಾಖೆ ನಿಗದಿ ಪಡಿಸಿದ ರೂಪದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ಸಮೇತ ಅನುದಾನ ಈ ಕೃಷಿ ಭಾಗ್ಯ ಯೋಜನೆಯಡಿ ಲಭ್ಯವಾಗುತ್ತಿದೆ.
ಕೃಷಿ ಭಾಗ್ಯ ಯೋಜನೆ :  ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವ ಮಳೆಯ ಪ್ರಮಾಣದಿಂದ ಮಳೆಯಾಧಾರಿತ ಕೃಷಿಯನ್ನು ನಂಬಿಕೊಂಡಿರುವ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಕೃಷಿಕರು ಮಳೆ ನೀರನ್ನು ವ್ಯರ್ಥವಾಗಲು ಬಿಡದೆ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ, ಅದನ್ನು ತಮ್ಮ ಬೆಳೆಗಳಿಗೆ ನೀರಾವರಿ ಒದಗಿಸಲು ಈ ಯೋಜನೆಯ ಉದ್ದೇಶವಾಗಿದೆ. ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥೀನ್‌ ಹೊದಿಕೆ ಅಳವಡಿಕೆ, ಹೊಂಡದಿಂದ ನೀರು ಎತ್ತಲು ಡೀಸೆಲ್‌ ಪಂಪ್‌ಸೆಟ್‌, ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗೆ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಶೇ.90ರಷ್ಟು ಸಹಾಯಧನ (ಸಬ್ಸಿಡಿ) ನೀಡಲಾಗುತ್ತದೆ.
ಕೃಷಿ ಹೊಂಡ ನಿರ್ಮಾಣದ ಬಗ್ಗೆ ಇದೀಗ ಜಿಲ್ಲೆಯಲ್ಲಿ ರೈತರಲ್ಲಿ ಜಾಗೃತಿ ಮೂಡಿದೆ. ಇತ್ತೀಚಿಗೆ ಜಿಲ್ಲೆಯಲ್ಲಿಯೂ ಮಳೆ ಕೈಕೊಡುತ್ತಿರುವ ಕಾರಣ, ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಸಂಗ್ರಹಿಸಿದರೆ, ರೈತರ ಬೆಳೆಗಳಿಗೆ ಅನುಕೂಲ. ಜೊತೆಗೆ ಅಂತರ್ಜಲ ಮರುಪೂರಣವಾಗುವುದರಿಂದ ಆ ಪ್ರದೇಶದಲ್ಲಿ ನೀರಿನ ಮಟ್ಟ ಸುಧಾರಿಸುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ಏವೂರ ರವರು ತಿಳಿಸಿರುತ್ತಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ
    In ವಿಶೇಷ ಲೇಖನ
  • ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ
    In ವಿಶೇಷ ಲೇಖನ
  • ನಾನು ಸಹ ಮುಖವಾಡ ಧರಿಸಲೇಬೇಕಾಯಿತು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.