ಕಲಕೇರಿ: ಸಮೀಪದ ಕೆರುಟಗಿ ತಾಂಡಾ ಮೂಲಕ ತಿಳಗೂಳ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲೆಯ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸಿಂದಗಿ ಘಟಕದ ವ್ಯವಸ್ಥಾಪಕರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಕೆರುಟಗಿ ತಾಂಡಾದಿಂದ ತಿಳಗೂಳ ಶಾಲೆಗೆ ಪ್ರತಿನಿತ್ಯ ಸುಮಾರು ೪೦ ರಿಂದ ೪೫ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೋಗುತ್ತಿದ್ದು, ಸುಮಾರು ೫ ಕಿಲೋಮೀಟರ್ ವರೆಗೆ ನಡೆದುಕೊಂಡು ಹೋಗುತ್ತಿರುವುದರಿಂದ ಮಳೆಗಾಲದಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಮಾಡಿಕೊಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಆಗ್ರಹ ಮಾಡಿದರು
ಈ ಸಂಧರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಹರ್ಷವರ್ಧನ್ ಪೂಜಾರಿ, ವಿದ್ಯಾರ್ಥಿ ಪರಿಷತ್ ತಾಲೂಕ ಅಧ್ಯಕ್ಷ ಕಾಶಿನಾಥ್, ಮುತ್ತು ಕಲಕೇರಿ ಭಾಗಪ್ಪ ಮತ್ತು ಸಂಘಟನೆಯ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

