ವಿಜಯಪುರ: ಕರುನಾಡ ಕನ್ನಡ ಕಲಾ ಸಿರಿ ಬಳಗ ಬೆಂಗಳೂರು ಕೊಡಮಾಡುವ 2024-25ನೇ ಸಾಲಿನ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಗೆ ರಾಜಶೇಖರ ಕಂಬಾರವರು ಆಯ್ಕೆಯಾದ್ದಾರೆ.
ಸಿಂದಗಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರಹಿಪ್ಪರಗಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭಾಷಾ ಶಿಕ್ಷಕ ರಾಜಶೇಖರ ಕಂಬಾರ ಅವರು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು 125ಕ್ಕೆ 125 ಅಂಕವನ್ನು ಪಡೆಯುವಲ್ಲಿ ಕಾಯಾ, ವಾಚಾ, ಮನಸ್ಸಿನಿಂದ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಸಾಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಕ್ಕಾಗಿ ಬೆಂಗಳೂರಿನ ಕರುನಾಡ ಕನ್ನಡ ಕಲಾ ಸಿರಿ ಬಳಗವು ಪ್ರಸಕ್ತ ಸಾಲಿನ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಾಧನೆಗೆ ಶಾಲೆಯ ಪ್ರಾಂಶುಪಾಲೆ ರೇಷ್ಮಾ ಜಾಧವ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

