Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಂಜಾರಾ ವೃದ್ಧೆಯಿಂದ ನಾಮಪತ್ರ ಸಲ್ಲಿಸಲು ರೂ.50ಸಾವಿರ ದೇಣಿಗೆ
(ರಾಜ್ಯ ) ಜಿಲ್ಲೆ

ಬಂಜಾರಾ ವೃದ್ಧೆಯಿಂದ ನಾಮಪತ್ರ ಸಲ್ಲಿಸಲು ರೂ.50ಸಾವಿರ ದೇಣಿಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನೀರಾವರಿ ಕಲ್ಪಿಸಿ ತಮ್ಮ ಜನ ಗುಳೆ ಹೋಗುವುದನ್ನು ತಪ್ಪಿಸಿದ ಶಾಸಕ ಎಂ.ಬಿ.ಪಾಟೀಲರಿಗೆ ಕೃತಜ್ಞತೆ ಸಲ್ಲಿಕೆ

ವಿಜಯಪುರ: ನೀರಾವರಿ ಸೌಲಭ್ಯ ಒದಗಿಸಿ ಜನ ಗುಳೆ ಹೋಗುವುದನ್ನು ತಪ್ಪಿಸಲು ಕಾರಣರಾದ ಆಧುನಿಕ ಭಗೀರಥ ಎಂ. ಬಿ. ಪಾಟೀಲ ಅವರಿಗೆ ಈ ಬಾರಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮತ್ತು ಖರ್ಚಿಗಾಗಿ ಬಂಜಾರಾ ವೃದ್ಧೆಯೊಬ್ಬರು ರೂ. 50 ಸಾವಿರ ಹಣ ನೀಡಲು ನಿರ್ಧರಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಎಲ್. ಟಿ. 2ರ ವೃದ್ದೆ ಪುತಲಿಬಾಯಿ ರಾಮು ರಾಠೋಡ(65) ಎಂ. ಬಿ. ಪಾಟೀಲರ ಮೇಲಿನ ಅಭಿಮಾನದಿಂದ ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪುತಲಿಬಾಯಿ ರಾಮು ರಾಠೋಡ, ನಾನು ಮದುವೆಯಾಗಿ ಗಂಡನ ಮನೆಗೆ ಬಂದಾಗಿನಿಂದಲೂ ಸ್ವಂತ ಹೊಲವಿದ್ದರೂ ನೀರು ಇರದ ಕಾರಣ ದೇಶಾಂತರ(ಗುಳೆ) ಹೋಗುತ್ತಿದ್ದೇವು. ನಾಲ್ಕು ಎಕರೆ ಜಮೀನಿದ್ದರೂ, ಕೇವಲ ಒಣ ಬೇಸಾಯದಿಂದಾಗಿ ಬೆಳೆ ಬಾರದೇ ಸಂಕಷ್ಟ ಎದುರಿಸುತ್ತಿದ್ದೇವು. ಇದರಿಂದಾಗಿ ಹೊಟ್ಟೆ ತುಂಬಿಸಿಕೊಳ್ಳಲು ಕೂಲಿ ಹುಡುಕಿಕೊಂಡು ಕುಟುಂಬಸ್ಥರೆಲ್ಲರೂ ಸೇರಿಕೊಂಡು ಮಹಾರಾಷ್ಟ್ರ ಮತ್ತೀತರ ಕಡೆ ದುಡಿಯಲು ಹೋಗುತ್ತಿದ್ದೇವು. ಆದರೆ, ಎಂ. ಬಿ. ಪಾಟೀಲ ಸಾಹೇಬರು ನಮಗ ನೀರಾವರಿ ಮಾಡಿದ್ದರಿಂದ ಈಗ ಹೊಲಗಳಿಗೆ ನೀರಾವರಿಯಾಗಿದೆ. ನಮ್ಮ ಪಾಲಿಗೆ ಈಗ ಉಳಿದಿರುವ ಒಂದು ಎಕರೆ ಜಮೀನಿನಲ್ಲಿ ಕಾಯಿಪಲ್ಲೆ, ಜೋಳ ಬೆಳೆಯುತ್ತಿದ್ದೇವೆ. ಈಗ ನಾವೆಲ್ಲ ಕುಟುಂಬ ಸದಸ್ಯರು ತಾಂಡಾದಲ್ಲಿಯೇ ಬಂಧುಗಳೊಂದಿಗೆ ಇದ್ದುಕೊಂಡು ಜೀವನ ಸಾಗಿಸುತ್ತಿದ್ದೇವೆ. ನಮ್ಮ ಸಂಸಾರ ಸುಧಾರಿಸಲು ಎಂ. ಬಿ. ಪಾಟೀಲರೇ ಕಾರಣ ಎಂದು ತಿಳಿಸಿದರು.

ನನ್ನ ಹಿರಿಯ ಮಗ ರಾಜು ರಾಮು ರಾಠೋಡ, ಎರಡನೇ ಮಗ ಪಿಂಟು ರಾಮು ರಾಠೋಡ ಮತ್ತು ನಾಲ್ಕನೆ ಮಗ ಲಿಂಗಪ್ಪ ರಾಮು ರಾಠೋಡ ಹೊಲದಲ್ಲಿ ಕೃಷಿ ಮಾಡುತ್ತಿದ್ದಾರೆ. ಮೂರನೇ ಮಗ ಕಟೀಲ ರಾಠೋಡ ಕುರಿಗಾಯಿಯಾಗಿದ್ದಾನೆ. ತಾಂಡಾ ಬಿಟ್ಟು ದೇಶಾಂತರ ಹೋಗುತ್ತಿದ್ದ ನಮಗೆ ಈಗ ನಮ್ಮ ತಾಂಡಾದಲ್ಲಿಯೇ ಎಲ್ಲರೊಂದಿಗೆ ಕೆಲಸ ಮಾಡಿಕೊಂಡು ಜೀವನ ಸಾಗಿಸಲು ಎಂ. ಬಿ. ಪಾಟೀಲರ ನೀರಾವರಿ ಯೋಜನೆಗಳು ಶಾಶ್ವತ ಪರಿಹಾರ ಒದಗಿಸಿವೆ. ನಮಗೆ ಉಪಕಾರ ಮಾಡಿದ ನಾಯಕನಿಗೆ ಚುನಾವಣೆ ಸಂದರ್ಭದಲ್ಲಿ ನಮ್ಮದೂ ಅಳಿಲು ಸೇವೆ ಇರಲಿ ಎಂದು ನಿರ್ಧರಿಸಿ ನಾಮಪತ್ರ ಸಲ್ಲಿಕೆ ಮತ್ತು ಚುನಾವಣೆ ಖರ್ಚಿಗಾಗಿ ರೂ. 50 ಸಾವಿರ ಹಣ ನೀಡಲು ನಿರ್ಧರಿಸಿದ್ದೇನೆ. ಇದು ನಾನು ದುಡಿದ ಗಳಿಸಿದ ಹಣ. ಮಕ್ಕಳಿಂದಲೂ ಹಣ ಪಡೆದಿಲ್ಲ. ನನ್ನ ತೀರ್ಮಾನಕ್ಕೆ ಮಕ್ಕಳು ಸಹಮತ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿ ಎಂ. ಬಿ. ಪಾಟೀಲ ಅವರನ್ನು ಭೇಟಿ ಮಾಡಿ ಹಣವನ್ನು ನೀಡುತ್ತೇವೆ ಎಂದು ತಿಳಿಸಿದರು.

ತಾಯಿಯ ನಿರ್ಧಾರದ ಕುರಿತು ಸಂತಸ ವ್ಯಕ್ತಪಡಿಸಿರುವ ಪುತ್ರ ಲಿಂಗಪ್ಪ ರಾಮು ರಾಠೋಡ, ಭೂಮಿ ತಾಯಿಗೆ ನೀರು ಸಿಕ್ಕಿದೆ. ಇದರಿಂದ ನನ್ನ ತಾಯಿ ಖುಷಿಯಾಗಿದ್ದಾರೆ. ಭೂಮಿ ತಾಯಿ ಮತ್ತು ನನ್ನ ತಾಯಿ ಸಂಸತದಿಂದ ಇರಲು ಕಾರಣರಾದ ಎಂ. ಬಿ. ಪಾಟೀಲರಿಗೆ ನಾವೆಲ್ಲರೂ ಚಿರಋಣಿಯಾಗಿದ್ದೇವೆ. ಹೀಗಾಗಿ ತಾಯಿಯೊಂದಿಗೆ ಎಂ. ಬಿ. ಪಾಟೀಲರನ್ನು ಶೀಘ್ರದಲ್ಲಿ ಭೇಟಿಯಾಗಿ ಚುನಾವಣೆ ಖರ್ಚಿಗೆ ರೂ. 50 ಸಾವಿರ ನೀಡುವುದಾಗಿ ತಿಳಿಸಿದರು.

BIJAPUR NEWS bldea kpcc m b patil public public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.