ವಿಜಯಪುರ: ನಗರದ ಬಬಲೇಶ್ವರ ನಾಕಾ ಬಳಿ ನಿರ್ಮಿಸಲಾದ ಸರ್ದಾರ ವಲ್ಲಭಬಾಯಿ ಪಟೇಲ್ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿ ಸಮುದಾಯವರಿಗೆ ಮಾತ್ರ ಹಂಚಿಕೆ ಮಾಡಬೇಕೆಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಮಳಿಗೆಗಳನ್ನು ಲೋಕೋಪಯೋಗಿ ಇಲಾಖೆಯ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯ ರೂ.೩.೫೬ ಕೋಟಿ ಅನುದಾನದಲ್ಲಿ ನಿರ್ಮಿಸಲಾಗಿದೆ. ಇಲಾಖಾ ಸರ್ಕಾರದ ಮಾರ್ಗಸೂಚಿಯಲ್ಲಿಯೂ ಸದರಿ ಮಳಿಗೆಗಳನ್ನು ಕೇವಲ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನರಿಗೆ ಮಾತ್ರ ಹಂಚಿಕೆ ಮಾಡಬೇಕೆಂಬ ಷರತ್ತಿದೆ. ಹೀಗಾಗಿ ಬೇರೆಯವರಿಗೆ ಹಂಚಿಕೆ ಮಾಡಲು ಬರುವುದಿಲ್ಲ. ಹೀಗಾಗಿ ಈ ಎಲ್ಲಾ ಮಳಿಗೆಗಳ ಮೇಲಿನ ಸಂಪೂರ್ಣ ಹಕ್ಕನ್ನು ಎಸ್.ಸಿ, ಎಸ್.ಟಿ ಸಮುದಾಯದವರೇ ಹೊಂದಿದ್ದಾರೆ.
ಆದರೆ, ಮಹಾನಗರ ಪಾಲಿಕೆ ಮೇಯರ್ ಅವರು, ಎಸ್.ಸಿ, ಎಸ್.ಟಿ ಜೊತೆಗೆ ಇತರರಿಗೂ ಹಂಚಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗೆ ಮಾಡಿದರೆ, ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಅನ್ಯಾಯವ್ಯಸಗಿದಂತಾಗುತ್ತದೆ. ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ಅನ್ಯಾಯವಾಗಲು ಬಿಡುವುದಿಲ್ಲ.
ಫೆ.೨೯ ರಂದು ನಡೆದ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯ ಅಜಂಡಾದಲ್ಲಿ ಈ ಮಳಿಗೆಗಳ ಹಂಚಿಕೆ ಕುರಿತಂತೆ ಚರ್ಚಿಸಲು ವಿಷಯ ಹಾಕಿಕೊಂಡಿದ್ದರೂ, ಚರ್ಚೆ ನಡೆಸದೆ ಮುಂದೂಡಲಾಗಿದೆ. ಕೂಡಲೇ ನ್ಯಾಯಯುತವಾಗಿ ದೊರೆಯಬೇಕಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸ್ವ-ಉದ್ಯೋಗ ಕೈಗೊಳ್ಳಲು ಮಳಿಗೆಗಳನ್ನು ಹಂಚಿಕೆ ಮಾಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಆಯುಕ್ತರಿಗೆ ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸರ್ದಾರ ಪಟೇಲ್ ವಾಣಿಜ್ಯ ಮಳಿಗೆ ಎಸ್.ಸಿ, ಎಸ್.ಟಿ ಸಮುದಾಯಕ್ಕೆ ಮಾತ್ರ ಹಂಚಿಕೆ
Related Posts
Add A Comment

