ವಿಜಯಪುರ: ಜಿಲ್ಲೆಯ ಪ್ರಾಥಮಿಕ ಶಾಲಾ ವಿಜ್ಞಾನ ಶಿಕ್ಷಕರಿಗೆ ವರ್ಗಾವಣೆಯಲ್ಲಾಗುವ ಅನ್ಯಾಯವನ್ನು ಸರಿಪಡಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎನ್.ಎಚ್.ನಾಗೂರ ಅವರಿಗೆ ಪ್ರಾಥಮಿಕ ಶಾಲಾ ವಿಜ್ಞಾನ ಶಿಕ್ಷಕರಿಂದ ಮನವಿಯನ್ನು ಸಲ್ಲಿಸಲಾಯಿತು.
ವಿಜ್ಞಾನ ಶಿಕ್ಷಕರಾದ ಬಸವರಾಜ ಗಿರಿನಿವಾಸ ಮಾತನಾಡಿ, ಪ್ರತಿ ವರ್ಷ ವರ್ಗಾವಣೆಯಲ್ಲಿ ವಿಜ್ಞಾನ ಶಿಕ್ಷಕರಿಗಾಗಿ ಮೀಸಲಿರುವಂತಹ ಹುದ್ದೆಗಳನ್ನ ಪ್ರಾಥಮಿಕ ಶಾಲೆಯ ಕನ್ನಡ ಹಾಗೂ ಇತರೆ ಶಿಕ್ಷಕರಿಗೂ ಕೊಡುತ್ತಿದ್ದು ವಿಜ್ಞಾನ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಸಾಮಾನ್ಯ ಶಿಕ್ಷಕರಿಗೆ ಕೊಡುವುದನ್ನು ನಿಲ್ಲಿಸಬೇಕು, ಇಲ್ಲವೆ ಕನ್ನಡ ಹುದ್ದೆಗಳನ್ನೂ ವಿಜ್ಞಾನ ಶಿಕ್ಷಕರಿಗೆ ವರ್ಗಾವಣೆಯಲ್ಲಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಬೇಕು.
ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎರಡನೇ ಹುದ್ದೆ ವಿಜ್ಞಾನವಾದ್ದರಿಂದ ಪ್ರತಿ ಶಾಲೆಗೆ ವಿಜ್ಞಾನ ಶಿಕ್ಷಕರ ಹುದ್ದೆಗಳನ್ನು ಸೃಜಿಸಿ ವಿಜ್ಞಾನ ಶಿಕ್ಷಕರಿಗಾಗಿಯೇ ಮೀಸಲಿಡುವಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ವರ್ಗಾವಣೆಯಲ್ಲಿ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉಮೇಶ ಕೌಲಗಿ, ಸಂತೋಷ ಬೂದಿಹಾಳ, ರಾಜಕುಮಾರ ಪಾಲಾಯಿ, ಸಂಜೀವ ಕುರಗೊಟಗಿ, ಎಸ್ ಜಿ ಗೌರಗೊಂಡ, ಎ. ಆರ್. ಕನ್ನೂರ, ಆರ್. ಎಸ್. ಜತ್ತಿ, ಸಿ.ಆರ್ .ಕೋರಿ, ಐ. ಸಿ. ಪಾಟೀಲ್ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

