ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಾ ವೈದ್ಯರ ದಿನಾಚರಣೆ ಅಂಗವಾಗಿ ನಗರದ ಬಿ ಎಲ್ ಡಿ ಈ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ರಕ್ತ ನಿಧಿ ಕೇಂದ್ರದಲ್ಲಿ ಸೋಮವಾರ ವೈದ್ಯರಿಂದ ರಕ್ತದಾನ ಶಿಬಿರ ನಡೆಯಿತು.
ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ್ರ ಚಿಕಿತ್ಸಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಈ ರಕ್ತದಾನ ಶಿಬಿರದಲ್ಲಿ ಸುಮಾರು 15 ಜನ ವೈದ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ. ಎಂ. ಬಿ. ಪಾಟೀಲ, ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ, ಪ್ರಾಧ್ಯಾಪಕರಾದ ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ಶ್ರುತಿ ಶಿಳ್ಳೀನ, ಡಾ. ವೀಣಾ ಕೋರಿಶೆಟ್ಟಿ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ. ವೈಷ್ಣವಿ, ಡಾ. ಶ್ರೀಹರಿ ಮತ್ತು ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ. ಪ್ರಕಾಶ ಪಾಟೀಲ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

