ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜುಲೈ ೮ ರಂದು ಮುದ್ದೇಬಿಹಾಳ ಹಾಗೂ ಜುಲೈ ೯ ರಂದು ಸಿಂದಗಿಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸೂಕ್ಷ್ಮ ನೀರಾವರಿ ಘಟಕದ ಅಳವಡಿಕೆ ಹಾಗೂ ನಿರ್ವಹಣೆ’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ಭಾಗವಹಿಸಿ ತರಬೇತಿಯ ಸಂಪೂರ್ಣ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿಗಳಾದ ಗೀತಾ ಭಜಂತ್ರಿ (ಮೋ: ೮೨೭೭೯೩೦೬೧೯) ಅವರನ್ನು ಸಂಪರ್ಕಿಸಬೇಕು ಎಂದು ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
