Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹುತಾತ್ಮ ವೀರ ಯೋಧನಿಗೆ ಕಂಬನಿ ಮಿಡಿದ ಗ್ರಾಮಸ್ಥರು
(ರಾಜ್ಯ ) ಜಿಲ್ಲೆ

ಹುತಾತ್ಮ ವೀರ ಯೋಧನಿಗೆ ಕಂಬನಿ ಮಿಡಿದ ಗ್ರಾಮಸ್ಥರು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೊಳಗಿದ ರಾಜು ಅಮರ ರಹೇ ಹೈ ಘೋಷಣೆ | ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ತಿಕೋಟಾ: ಭಾರತೀಯ ಸೇನೆಯ ರಾಷ್ಟ್ರೀಯ ರೈಪಲ್ಸನ 51 ಯುನಿಟ್ ಮಹರ ರೆಜಿಮೆಂಟ್ 13 ಜಮ್ಮು ಕಾಶ್ಮಿರದಲ್ಲಿ ನಿಧನ ಹೊಂದಿದ ವೀರಯೋಧ ರಾಜು ಗಿರಮಲ್ಲ ಕರಜಗಿ ಅವರ ಪಾರ್ಥಿವ ಶರೀರ ಹುಟ್ಟೂರು ತಿಕೋಟಾಕ್ಕೆ ಬುಧವಾರ ಬೆಳಗ್ಗೆ ಆಗಮಿಸುತ್ತಿದ್ದಂತೆ ರಾಜು ಅಮರ ರಹೇ ಹೈ, ಬೊಲೊ‌ ಭಾರತ ಮಾತಾಕಿ ಜೈ ಘೋಷಣೆಗಳು ಮೊಳಗಿದವು.
ಪಾರ್ಥಿವ ಶರೀರ ವಾಡೆ ಮೈದಾನಕ್ಕೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತು ಸಹೋದರ, ಮಾವ ಹಾಗೂ ಸಂಬಂಧಿಕರು ವೀರಯೋಧನ ಒಡನಾಡ ನೆನಪಿಸಿಕೊಂಡು ಕಣ್ಣಿರು ಹಾಕಿದರು.
ಪಟ್ಟಣದ ವಾಡೆ ಮೈದಾನದಲ್ಲಿ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು, ಶಾಲಾ ಮಕ್ಕಳು, ಸುತ್ತಲಿನ ಹಳ್ಳಿಯ ಜನರು ಅಂತಿಮ ದರ್ಶನ ಪಡೆದರು. ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಕೆ.ಪಾಟೀಲ, ಬಿಜೆಪಿ ಮುಖಂಡ ವಿಜುಗೌಡ ಪಾಟೀಲ, ಚನ್ನಮಲ್ಲಿಕಾರ್ಜುನ ಶಿವಾಚಾರ್ಯ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಹುಲಜಂತಿ ಮಾಳಿಂಗರಾಯ ಮಹಾರಾಜ, ಬಾಬುರಾವ ಮಹಾರಾಜ, ಮಾಜಿ ಸೈನಿಕರು, ಶಾಲಾ ಕಾಲೇಜಿನ ಮಕ್ಕಳು, ಹಲವು ಗಣ್ಯರು ಅಂತಿಮ ದರ್ಶನ ಪಡೆದರು.
ಮೆರವಣಿಗೆ: ಹೂವುಗಳಿಂದ ಸಿಂಗಾರಗೊಂಡ ತೆರೆದ ವಾಹನದಲ್ಲಿ ಮದ್ಯಾಹ್ನ 1 ಗಂಟೆಗೆ ಯೋಧನ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಯಿತು. ದಾರಿಯುದ್ದಕ್ಕೂ ದೇಶ ಭಕ್ತಿಗೀತೆಗಳು, ಮತ್ತೆ ಹುಟ್ಟಿ ಬಾ ರಾಜು, ಅಮರ ರಹೇ ಹೈ ರಾಜು ಮುಂತಾದ ಘೋಷಣೆಗಳು ಮೊಳಗಿದವು. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತದ ಮೂಲಕ ಸಾಗಿ ಪ್ರಾಥಮಿಕ‌ ಆರೋಗ್ಯ ಕೇಂದ್ರದ ಆವರಣ ತಲುಪಿತು.
ಗೌರವ ವಂದನೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಶಸ್ತ್ರ ಮೀಸಲು ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರ ನೆರವೇರಿತು.
ದ್ವಜ ಹಸ್ತಾಂತರ: ಪಾರ್ಥಿವ ಶರೀರದ ಮೇಲೆ ಹೊದಿಸಿರುವ ರಾಷ್ಟ್ರ ದ್ವಜವನ್ನು ಪತ್ನಿ ಸುಧಾ ಅವರಿಗೆ ಸೇನೆಯ ಹಿರಿಯ ಅಧಿಕಾರಿಗಳು ಹಸ್ತಾಂತರಿಸಿದರು.

ತಿಕೋಟಾ ಪಟ್ಟಣದಲ್ಲಿ ರೈತ ಕುಟುಂಬದ ತಂದೆ ಗಿರಮಲ್ಲ ತಾಯಿ ಅಕ್ಕೂತಾಯಿ ದಂಪತಿಗಳ ಪುತ್ರನಾಗಿ ಜೂನ 1, 1986 ರಲ್ಲಿ ಜನಿಸಿದ ವೀರ ಯೋಧ ರಾಜು ಒಂದರಿಂದ ಐದನೇ ತರಗತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಆರರಿಂದ ಏಳನೇ ತರಗತಿ ಜತ್ತ ತಾಲ್ಲೂಕಿನ ಉಮರಾಣಿ ಶಾಲೆ, ಪ್ರೌಢ ಶಿಕ್ಷಣ, ಪಿಯುಸಿ ಹಾಗೂ ಪದವಿ ಶಿಕ್ಷಣ ಗ್ರಾಮದ ಎ.ಬಿ.ಜತ್ತಿ ಶಾಲೆ ತಿಕೋಟಾದಲ್ಲಿ ಪೂರೈಸಿದನು. ದೇಶ ಸೇವೆ ಮಾಡುವ ಮಹದಾಶೆ ಇಟ್ಟುಕೊಂಡ ಯೋಧ ರಾಜು ಪದವಿ ಶಿಕ್ಷಣ ಪಡೆಯುವಾಗಲೇ ಎನ್.ಸಿ.ಸಿ ಆಯ್ಕೆ ಮಾಡಿಕೊಂಡು ಪ್ರತಿದಿನ ದೈಹಿಕ ಕಸರತ್ತು ನಡೆಸುತ್ತಿದ್ದನು.
ಸತತ ಪರಿಶ್ರಮದಿಂದ ದೇಶ ಸೇವೆ ಮಾಡಲು ಸೈನಿಕ ಹುದ್ದೆಗೆ ಆಯ್ಕೆಯಾಗಿ ಮಾರ್ಚ 21, 2009 ರಂದು ಕರ್ತವ್ಯಕ್ಕೆ ಹಾಜರಾದನು. 2013 ಮೇ 12 ರಂದು ಅಕ್ಕ ಭಾಗ್ಯಶ್ರಿಯ ಮಗಳು ಸುಧಾ ಜೊತೆ ವೈವಾಹಿಕ ಜೀವನ ಆರಂಭಿಸಿದರು. ಮಧ್ಯಪ್ರದೇಶ, ಪಂಜಾಬ, ಆಸ್ಸಾಂ, ಜಮ್ಮು ಕಾಶ್ಮಿರದಲ್ಲಿ ಸೇವೆ ಸಲ್ಲಿಸಿದ್ದು, ಇತ್ತಿಚೆಗಷ್ಟೆ ಹವಾಲ್ದಾರ್ ಆಗಿ ಪದೊನ್ನತಿ ಹೊಂದಿದ್ದರು. ಇನ್ನೇನು ಎರಡ್ಮೂರು ವರ್ಷಗಳಲ್ಲಿ ನಿವೃತ್ತಿ ಹೊಂದುತ್ತಿದ್ದರು. ದಿನಾಲು ವಿಡಿಯೋ ಕರೆ ಮಾಡಿ ಕುಟುಂಬದವರೊಂದಿಗೆ ಮಾತನಾಡುತ್ತಿದ್ದ, ರವಿವಾರ ಬೆಳಗ್ಗೆ ಸೇನಾ ಸಿಬ್ಬಂದಿಯಿಂದ ಹುತಾತ್ಮ ಆಗಿದ್ದಾನೆಂದು ಸುದ್ದಿ ಬಂದಿದೆ ಎಂದು ಸಹೋದರ ಮಹಾದೇವ ದುಃಖ ತೋಡಿಕೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.