Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲಮಂದಿರಕ್ಕೆ ಭೇಟಿ ನೀಡಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಧಿಕಾರಿಗಳಿಗೆ ಎಚ್ಚರಿಕೆ

ವಿಜಯಪುರ: ಮಕ್ಕಳು ದೇವರ ಸಮಾನರು ಅವರ ಸೇವೆ ಮಾಡುವ ಸೌಭಾಗ್ಯ ದೊರೆತಿರುವ ಇಲ್ಲಿಯ ಸಿಬ್ಬಂದಿ ನಿಜಕ್ಕೂ ಭಾಗ್ಯವಂತರು. ಮಕ್ಕಳ ಸೇವಾ ಭಾಗ್ಯ ಒಂದು ಸೌಭಾಗ್ಯವೆಂದು ತಿಳಿಯಿರಿ. ಮಕ್ಕಳ ಸೇವೆಯೇ ಭಗವಂತನ ಸೇವೆ, ಬಾಲಮಂದಿರದಲ್ಲಿರುವ ಮಕ್ಕಳಿಗೆ ನೀವೇ ತಂದೆ-ತಾಯಿಯ ಪ್ರೀತಿಯನ್ನು ನೀಡಿ, ಪೋಷಿಸಿ, ಬೆಳೆಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಅಣಿಗೊಳಿಸಿ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಅವರು ಗುರುವಾರ ನಗರದ ಜಿಲ್ಲಾ ಪಂಚಾಯತ ಹತ್ತಿರವಿರುವ ಬಾಲಕರ ಬಾಲಮಂದಿರಕ್ಕೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯನ್ನ ಪರಿಶೀಲಿಸಿ ಮಾತನಾಡಿದರು.
ಬಾಲಮಂದಿರದಲ್ಲಿರುವ ಹಲವಾರು ನ್ಯೂನ್ಯತೆಗಳನ್ನು ಪಟ್ಟಿ ಮಾಡಿ ಒಂದು ವಾರದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು, ಸ್ವಚ್ಛತೆ, ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಬಾಲ ಮಂದಿರದಲ್ಲಿ ಸಸಿ ನೆಟ್ಟ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ ಬಿ ಪಾಟೀಲರು ಕೋಟಿ ವೃಕ್ಷ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಲಕ್ಷಾಂತರ ಸಸಿಗಳನ್ನು ನೆಟ್ಟು ನಮ್ಮೆಲ್ಲರಿಗೂ ಪ್ರೇರಕ ಶಕ್ತಿಯಾಗಿದ್ದಾರೆ. ಬಾಲಕರ ಬಾಲಮಂದಿರದ ಆವರಣದಲ್ಲಿ ಸಾಕಷ್ಟು ಜಾಗ ಇರುವುದರಿಂದ ಕೋಟಿ ವೃಕ್ಷ ಅಭಿಯಾನ ಹಾಗೂ ಅರಣ್ಯ ಇಲಾಖೆಯ ಸಹಯೋಗದಿಂದ ಆವರಣದ ತುಂಬಾ ಸಸಿಗಳನ್ನು ನೆಟ್ಟು ಪೋಷಿಸಿ, ಪರಿಸರ ಉಳಿಸುವ ಪುಣ್ಯದ ಕಾರ್ಯದಲ್ಲಿ ಪಾಲ್ಗೊಳ್ಳಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಬಾಲಮಂದಿರದ ಮಕ್ಕಳೊಂದಿಗೆ ಸಮಯ ಕಳೆದ ಅವರು, ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಲು ಹಾಗೂ ಮಹಾಪುರುಷರ ಆದರ್ಶಗಳನ್ನು ಅಳವಡಿಸಿಕೊಂಡು ಶ್ರೇಷ್ಠ ನಾಗರಿಕರಾಗಿ ಭಾರತದ ಬೆಳಕಾಗಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷನಾದ ನಂತರ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ ನನ್ನ ಭೇಟಿಯ ವೇಳೆ ಮೊದಲ ಆದ್ಯತೆ ಬಾಲಮಂದಿರಗಳಿಗೆ ಇರುತ್ತದೆ, ಯಾಕೆಂದರೆ ಅಲ್ಲಿ ಇರುವ ಮಕ್ಕಳು ತಂದೆ ತಾಯಿ ಇಲ್ಲದವರು, ಸಿಂಗಲ್ ಪೇರೆಂಟ್ ಇರುವವರು ಹೀಗೆ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳ ಬಾಲ ಮಂದಿರಗಳಲ್ಲಿ ಇರುವುದರಿಂದ ಅಂಥ ಮಕ್ಕಳ ಬದುಕು ಹಸನಾಗಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ. ಸರಕಾರ ಎಲ್ಲ ಸೌಲಭ್ಯಗಳನ್ನು ನೀಡಿದ್ದರೂ ಅದನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಕೆಲವು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಅಂಥವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಕ್ಕಳನ್ನು ಪ್ರೀತಿಪೂರ್ವಕವಾದ ಪರಿಸರದಲ್ಲಿ ಆರೋಗ್ಯ ಪೂರ್ಣವಾಗಿ ಸದೃಢ ನಾಗರಿಕರನ್ನಾಗಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರದು ಎಂದು ಬಬಲೇಶ್ವರ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೇರಿದಂತೆ ಬಾಲ ಮಂದಿರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.