ವಿಜಯಪುರ: ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಎನ್. ಜಯದೇವನಾಯ್ಕ ಅವರು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಜುಲೈ ೫ ರಂದು ತಿಕೋಟಾ ತಾಲೂಕಿನ ಸೋಮದೇವರ ಹಟ್ಟಿ ಎಲ್ಟಿ-೧ ತಾಂಡಾದಲ್ಲಿ ನಡೆಯುವ ಮಾತಾ ದುರ್ಗಾದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.
ಜುಲೈ ೬ ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಸಂಬಂಧ ಪ್ರಗತಿಯ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮತ್ತು ತಾಂಡ ಮುಖಂಡರೊಂದಿಗೆ ಸಭೆ ನಡೆಸಿ, ನಂತರ ಕೊಪ್ಪಳಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
