Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೈದ್ಧಾಂತಿಕ ಕಲಿಕೆಗಿಂತ ಪ್ರಾಯೋಗಿಕ ಕಲಿಕೆ ಹೆಚ್ಚು ಅನುಕೂಲ :ನಂದರಗಿ
(ರಾಜ್ಯ ) ಜಿಲ್ಲೆ

ಸೈದ್ಧಾಂತಿಕ ಕಲಿಕೆಗಿಂತ ಪ್ರಾಯೋಗಿಕ ಕಲಿಕೆ ಹೆಚ್ಚು ಅನುಕೂಲ :ನಂದರಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿ ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿಗಳಿಂದ ಕ್ಷೇತ್ರ ಕಾರ್ಯ ಅಧ್ಯಯನ

ತಿಕೋಟಾ: ತಾಲೂಕಿನ ಟಕ್ಕಳಕಿ ಗ್ರಾಮ ಪಂಚಾಯತಿಗೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಭೇಟಿ ನೀಡಿ, ಕ್ಷೇತ್ರ ಕಾರ್ಯ ಅಧ್ಯಯನ ಕೈಗೊಂಡರು.
ಈ ಸಂದರ್ಭದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಸಿನ ಮನೆ, ಅಮೃತ ಸರೋವರ, ಶಾಲಾ ಅಭಿವೃದ್ಧಿ ಕಾಮಗಾರಿಗಳು, ಘನ ತ್ಯಾಜ್ಯ ವಿಲೇವಾರಿ ಘಟಕ ಸೇರಿ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಕ್ಕಮಹಾದೇವಿ ಪವಾರ ಅವರು ಪ್ರಶಿಕ್ಷಣಾರ್ಥಿಗಳಿಗೆ ಗ್ರಾಮ ಪಂಚಾಯತಿ ವತಿಯಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳ, ಕಾಮಗಾರಿಗಳ, ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ನಂತರ ಮಾತನಾಡಿದ ಅವರು “ಗ್ರಾಮದಲ್ಲಿರುವ ಸಮಸ್ಯೆಗಳನ್ನು ಅಳಿಸಿ, ಸುಸ್ಥಿರ ಗ್ರಾಮ ನಿರ್ಮಾಣ ನಮ್ಮ ಗುರಿಯಾಗಿದೆ. ಎಲ್ಲ ಚುನಾಯಿತ ಸದಸ್ಯರ ಸಹಕಾರದಿಂದ ಗ್ರಾಮದಲ್ಲಿ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮುಖ್ಯವಾಗಿ ಕುಡಿಯುವ ನೀರು, ನೈರ್ಮಲ್ಯ ಹಾಗೂ ಉದ್ಯೋಗ ಖಾತರಿಯಲ್ಲಿ ಯಾವದೇ ರೀತಿಯ ತೊಂದರೆಯಾಗದಂತೆ ನಾವು ಕಾರ್ಯ ನಿರ್ವಹಿಸುತ್ತಿದ್ದೇವೆ. ಯಾವದೇ ರೀತಿಯ ಸಮಸ್ಯೆ ಹೊಂದಿದ ವ್ಯಕ್ತಿ ಬಂದರೂ ಸಹಿತ ನಮ್ಮ ಗ್ರಾಮ ಪಂಚಾಯತಿಯಲ್ಲಿ ಅದಕ್ಕೆ ಸೂಕ್ತ ಪರಿಹಾರ ನೀಡಲಾಗುತ್ತದೆ. ಬೇರೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಇದ್ದರೂ ಅದಕ್ಕೆ ಸೂಕ್ತ ಮಾಹಿತಿ ನೀಡುವ ವ್ಯವಸ್ಥೆಯನ್ನು ನಾವು ಕೈಗೊಳ್ಳುತ್ತೇವೆ.
ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ ಮಾತನಾಡಿ, ಎಲ್ಲ ಅಧ್ಯಯನಕ್ಕಿಂತ ನಮ್ಮ ಸಮಾಜ ಕಾರ್ಯ ಅಧ್ಯಯನ ಬಹಳ ವಿಭಿನ್ನವಾದ ಅಧ್ಯಯನವಾಗಿದ್ದು, ಕಲಿಕೆಯ ಅವಧಿಯಲ್ಲಿಯೇ ಕ್ಷೇತ್ರ ಕಾರ್ಯ ನಿರ್ವಹಣೆಯಿಂದ ಸಾಕಷ್ಟು ಅನುಭವ ಪಡೆಯುತ್ತೇವೆ, ಆ ಅನುಭವದಿಂದ ನಮ್ಮಲ್ಲಿ ಹೊಸ ಹೊಸ ಕಲಿಕೆಗಳಾಗುತ್ತವೆ. ಸಮಾಜ ಕಾರ್ಯ ಅಧ್ಯಯನದಲ್ಲಿ ತರಗತಿಯಲ್ಲಿ ಕಲಿಯುವದಕ್ಕೂ, ಕ್ಷೇತ್ರ ಕಾರ್ಯದ ಮೂಲಕ ಕಲಿಯುವದಕ್ಕೂ ತುಂಬಾ ವ್ಯತ್ಯಾಸವಿದೆ. ತರಗತಿ ಕಲಿಕೆಗಿಂತ ನಮಗೆ ಕ್ಷೇತ್ರಕಾರ್ಯದ ಅಧ್ಯಯನ ಬಹಳ ಅವಶ್ಯಕವಾಗಿದೆ. ಹೀಗಾಗಿ ನೀವುಗಳು ಕ್ಷೇತ್ರ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಕೈಗೊಳ್ಳಿ ಎಂದು ಹೇಳಿದರು.
ಈ ವೇಳೆ ಗ್ರಾಮ ಪಂಚಾಯತಿ ಪಿಡಿಓ ಅಕ್ಕಮಹಾದೇವಿ ಪವಾರ, ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕಾರ್ಯದರ್ಶಿ ಎನ್.ಓ.ತಳ್ಳಿ, ತಾಂತ್ರಿಕ ಸಹಾಯಕ ಅಭಿಯಂತರ ರೇಷ್ಮಾ ಬಾಗವಾನ, ಸಮಾಜ ಕಾರ್ಯ ಪ್ರಶಿಕ್ಷಣಾರ್ಥಿಗಳಾದ ಕು.ತೇಜಸ್ವಿನಿ ಕೋಲಾರ, ಕು.ವರ್ಷಾ ಬಬಲೇಶ್ವರ, ಕು. ಸುಶ್ಮಿತಾ ಹರನಾಳ, ಗ್ರಾಮ ಪಂಚಾಯತಿಯ ಚನ್ನಬಸಪ್ಪ ಪೂಜಾರಿ, ಅರುಣ ಆಕಳವಾಡಿ, ಜಲ ಜೀವನ ಮಿಷನ್ ಯೋಜನೆಯ ಶಿವಾನಂದ ಬಡಿಗೇರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.