Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಶಾಸಕ ಮನಗೂಳಿ ಸೂಚನೆ
(ರಾಜ್ಯ ) ಜಿಲ್ಲೆ

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳಿಗೆ ಶಾಸಕ ಮನಗೂಳಿ ಸೂಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಶಾಸಕರ ಅನುದಾನವನ್ನು ಸರಿಯಾಗಿ ಸಾರ್ವಜನಿಕರಿಗೆ ತಲುಪಿಸುವ ಕಾರ್ಯ ಎಲ್ಲ ಅಧಿಕಾರಿಗಳು ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕು. ಒಂದು ವೇಳೆ ನಿಮಗಾಗದೇ ಹೋದ ಪಕ್ಷದಲ್ಲಿ ನನ್ನ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸರ್ಕಾರದ ಪ್ರತಿ ಯೋಜನೆಗಳನ್ನು ಕ್ಷೇತ್ರದಲ್ಲಿ ಅನುಷ್ಠಾನ ಮಾಡುವ ಮೂಲಕ ಕ್ಷೇತ್ರ ಅಭಿವೃದ್ಧಿಪಡಿಸುತ್ತೇನೆ. ಸಂಬಂಧಿಸಿದ ಅಧಿಕಾರಿಗಳು ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಬೇಕು. ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಶಾಸಕ ಅಶೋಕ ಮನಗೂಳಿ ಸೂಚಿಸಿದರು.
ಆರ್‌ಡಬ್ಲೂಎಸ್ ಇಲಾಖೆ: ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯ ಜೆಜೆಎಮ್ ಕಾಮಗಾರಿ ಒಟ್ಟು೮೬ ಇದ್ದು, ಇದರಲ್ಲಿ ಎಡಿಎಂಯಿಂದ ಅನುಮೋದನೆಯಾಗಿದೆ. ೩೮ ಪ್ರಗತಿ ಹಂತದಲ್ಲಿ ಇದ್ದು, ೧೦ ಪೂರ್ಣಗೊಂಡಿವೆ, ೧೦ ಟೆಂಡರ್ ಕರೆಯಲಾಗಿದೆ. ೫ ವರ್ಕ್ಆರ್ಡರ್ ಸಮಸ್ಯೆಯಾಗಿರುತ್ತವೆ ಎಂದು ಆರ್‌ಡಬ್ಲೂಎಸ್ ಎಇಇ ತಾರಾನಾಥ್ ರಾಠೋಡ ತಮ್ಮ ಇಲಾಖೆಯ ಪ್ರಗತಿ ಮಂದಿಸಿದರು. ಇದಕ್ಕೆ ಶಾಸಕರು ಬೇಗ ಕಾಮಗಾರಿ ಪೂರ್ಣಗೊಳಿಸಿ ಮನೆ ಮನೆಗೆ ಸಮರ್ಪಕವಾಗಿ ನೀರು ನಲ್ಲಿಯಲ್ಲಿ ಬುವಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ಶಿಕ್ಷಣ ಇಲಾಖೆ: ಶಿಕ್ಷಣ ಇಲಾಖೆಯ ವರದಿ ನೀಡಿದ ಕ್ಷೇತ್ರ ಶೀಕ್ಷಣಾಧಿಕಾರಿ, ಸಿಬ್ಬಂದಿಗಳ ಕೊರತೆ ಇದೆ ಅದನ್ನು ಪೂರೈಸಲು ಪ್ರಸ್ತಾವನೆ ಕಳುಹಿಸಿದ್ದೇನೆ. ಇನ್ನು ಕೆಲವು ಶಾಲೆಗಳಲ್ಲಿ ಶೌಚಾಲಯ, ತರಬೇತಿ ಕೋಣೆಯ ಅವಶ್ಯಕವಿದ್ದು, ಅದನ್ನು ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ನೀಡುತ್ತೇನೆ. ಹಲವು ಕೊಠಡಿಯ ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ ಎಂದು ವಿವರಿಸಿದರು. ಇದಕ್ಕೆ ಶಾಸಕರು ಈಗಾಗಲೇ ಶಾಲೆಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದ ಹಾಗೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ವಿದ್ಯುತ್ ಸರಬರಾಜು: ಹಿಂದುಳಿದ ವರ್ಗಗಳ ಅಡಿಯಲ್ಲಿ ೧೯ಗಂಗಾ ಕಲ್ಯಾಣ ಕಾಮಗಾರಿ ಪ್ರಗತಿ ನೋಂದಣಿಯಾಗಿದ್ದು, ಇದರಲ್ಲಿ ಈಗಾಗಲೇ ೧೦ ಪೂರ್ಣಗೊಂಡಿವೆ. ೯ಕಾಮಗಾರಿ ಬಾಕಿಯಿದ್ದು, ಈ ತಿಂಗಳಲ್ಲಿ ಪೂರ್ಣಗೊಳಿಸುತ್ತೇವೆ ಎಂದು ಹೆಸ್ಕಾಂ ಎಇಇ ಚಂದ್ರಕಾಂತ್ ನಾಯಕ್ ತಿಳಿಸಿದರು.
೨೦೨೩-೨೪ ನೆಯ ಸಾಲಿನಲ್ಲಿ ೧೭೮೨ ಅಕ್ರಮ ಸಕ್ರಮ ಯೋಜನೆಗಳು ನೋಂದಣಿಯಾಗಿದ್ದು, ೭೨೦ ಪಲಾನುಭವಿಗಳ ಸಂಖ್ಯೆ ಅನುಮೋದನೆಯಾಗಿದ್ದು, ೫೪೦ ಕಾಮಗಾರಿ ಪೂರ್ಣಗೊಂಡಿವೆ. ೧೮೦ಕಾಮಗಾರಿ ಪ್ರಗತಿ ಹಂತದಲ್ಲಿವೆ. ೧೦೬೨ ಕಾಮಗಾರಿ ಬಾಕಿ ಇವೆ ಅವುಗಳು ಅನುಮತಿ ತೆಗೆದುಕೊಂಡು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.
ಪಿಆರ್‌ಇಡಿ ಇಲಾಖೆ: ೨೦೨೨-೨೩ನೆಯ ಸಾಲಿನ ವಿವೇಕ ಶಾಲಾ ಕೊಠಡಿಗಳ ಒಟ್ಟು ಕಾಮಗಾರಿ ಸಂಖ್ಯೆ ೩೧, ಪ್ರಾರಂಭಿಕ ಹಂತದಲ್ಲಿ ೨, ಪ್ರಗತಿ ಹಂತದಲ್ಲಿ ೧೩, ಪೂರ್ಣಗೊಂಡಿರುವ ಕಾಮಗಾರಿ ೧೬, ಮತ್ತು ಸ್ಥಳ ಸಮಸ್ಯೆ ೨ ಇರುತ್ತವೆ ಎಂದು ತಿಳಿಸಿದರು.೨೦೨೩-೨೪ರ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳು ಅರೋಗ್ಯ ಇಲಾಖೆ ಕಟ್ಟಡ ನಿರ್ವಹಣೆ ಪೂರ್ಣಗೊಂಡಿರುತ್ತದೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ವಹಣೆ ಸಿಂದಗಿ ೨, ಆಲಮೇಲ ೧, ಅಂಗನವಾಡಿ ಕಟ್ಟಡ ನಿರ್ವಹಣೆ ಸಿಂದಗಿ ೪, ಆಲಮೇಲ ೧, ಕೃಷಿ ಇಲಾಖೆ ಕಟ್ಟಡ ನಿರ್ವಹಣೆ ಸಿಂದಗಿ ೨, ತೋಟಗಾರಿಕೆ ಕಟ್ಟಡ ನಿರ್ವಹಣೆ ಸಿಂದಗಿ ೧ ಮತ್ತು ಪಶು ಸಂಗೋಪನೆ ಕಟ್ಟಡ ನಿರ್ವಹಣೆ ಸಿಂದಗಿ ೨ ಪೂರ್ಣಗೊಂಡಿವೆ ಎಂದು ಪಿಆರ್‌ಇಡಿ ಎಇಇ ಜಿ.ವಾಯ್.ಮುರಾಳ ತಮ್ಮ ಇಲಾಖೆ ಪ್ರಗತಿ ಮಂಡಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ, ಉಪ ಕಾರ್ಯದರ್ಶಿ ವಿಜಯ್ ಅಜೂರ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಆಲಮೇಲ ತಾಪಂ ಇಒ ಪರಿದಾ ಪಠಾಣ, ನಬಿಲಾಲ್ ಗಬಸವಳಗಿ, ಸಹಾಯಕ ಯೋಜನಾಧಿಕಾರಿ ಅರುಣ ಕುಮಾರ ದಳವಾಯಿ, ನರೇಗಾ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಎ.ಎ.ದುರ್ಗದ, ಸಿದ್ದು ಅಂಕಲಗಿ, ಜಿ.ವಾಯ್.ಮುರಾಳ, ರಾಜಶೇಖರ್ ಜೊತಗೊಂಡ ಸೇರಿದಂತೆ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.