Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸವನಬಾಗೇವಾಡಿ: ಸಂಭ್ರಮದ ಮಣ್ಣೆತ್ತಿನ ಅಮವಾಸ್ಯೆ ಆಚರಣೆ
(ರಾಜ್ಯ ) ಜಿಲ್ಲೆ

ಬಸವನಬಾಗೇವಾಡಿ: ಸಂಭ್ರಮದ ಮಣ್ಣೆತ್ತಿನ ಅಮವಾಸ್ಯೆ ಆಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಮಣ್ಣೆತ್ತಿನ ಅಮವಾಸ್ಯೆಯನ್ನು ರೈತ ಬಾಂಧವರು, ಜನರು ಮಣ್ಣೆತ್ತುಗಳಿಗೆ ಪೂಜೆ ಸಲ್ಲಿಸುವ ಮೂಲಕ ಸಡಗರ, ಸಂಭ್ರಮದಿಂದ ಆಚರಿಸಿದರು. ಅಮವಾಸ್ಯೆ ಹಿನ್ನೆಲೆಯಲ್ಲಿ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನಕ್ಕೆ ವಿವಿಧೆಡೆಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು.
ಮಕ್ಕಳೊಂದಿಗೆ ಮಾರುಕಟ್ಟೆಗೆ ತೆರಳಿದ ಜನರು ವಿವಿಧೆಡೆ ಮಣ್ಣೆತ್ತುಗಳ ದರ ಚೌಕಾಸಿ ಮಾಡಿ ಮಕ್ಕಳಿಗೆ ಇಷ್ಟವಾದ ಬಣ್ಣ ಹಚ್ಚಿದ ಅಲಂಕಾರಿಕ ಮಣ್ಣೆತ್ತುಗಳನ್ನು ಖರೀದಿಸಿದರೆ ಇನ್ನೂ ಕೆಲವರು ಬಣ್ಣ ಹಚ್ಚದೇ ಇರುವ ಮಣ್ಣೆತ್ತುಗಳೊಂದಿಗೆ ಪೂಜಾ ಸಾಮಗ್ರಿಗಳನ್ನು ಖರೀದಿಸಿದರು. ಮಾರುಕಟ್ಟೆಯಲ್ಲಿ ಮಣ್ಣಿನಿಂದ ತಯಾರಿಸಿದ ಹಾಗೂ ಬಣ್ಣದಿಂದ ಸಿಂಗರಿಸಿದ ವಿವಿಧ ಬಗೆಯ ಪಿಓಪಿ ಮಣ್ಣೆತ್ತುಗಳು ಆಕಾರಕ್ಕೆ ತಕ್ಕಂತೆ ರೂ. ೫೦ ರಿಂದ ರೂ. ೨೦೦೦ ವರೆಗೆ ಮಾರಾಟವಾದವು.
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗಲ್ಲಿಗಳಲ್ಲಿ ಅಲಂಕಾರಿಕ ಮಂಟಪ ಹಾಕಿ ಮಧ್ಯಾನ್ಹ, ಸಂಜೆ ಮಣ್ಣೆತ್ತುಗಳನ್ನು ಪ್ರತಿಷ್ಠಾಪಿಸುತ್ತಿರುವುದು ಕಂಡು ಬಂದಿತು.ಮನೆಯಲ್ಲಿ ದೇವರ ಜಗುಲಿಯ ಮೇಲೆ, ಕೆಲವರು ಮನೆಯಲ್ಲಿ ಮಂಟಪದಲ್ಲಿ ಮಣ್ಣೆತ್ತುಗಳನ್ನು ಪ್ರತಿಷ್ಠಾಪಿಸಿದ ನಂತರ ಕುಟುಂಬ ಸದಸ್ಯರೆಲ್ಲರೂ ಪೂಜೆ ಸಲ್ಲಿಸಿ ಕಾಯಿ, ಕರ್ಪೂರದೊಂದಿಗೆ ನೈವೇದ್ಯ ಅರ್ಪಿಸಿ ಮಳೆ, ಬೆಳೆ ಸಮೃದ್ಧಿಯಾಗಲೆಂದು ಪ್ರಾರ್ಥಿಸಿದರು. ಮಣ್ಣೆತ್ತಿನ ಪೂಜೆಯ ನಂತರ ಹಬ್ಬದ ಅಂಗವಾಗಿ ತಯಾರಿಸಲಾಗಿದ್ದ ವಿಶೇಷ ಖಾದ್ಯಗಳಾದ ಹೋಳಿಗೆ, ಕರ್ಚಿಕಾಯಿ, ಕರಿಗಡುಬು, ಪಾಯಸವನ್ನು ಕುಟುಂಬ ಸದಸ್ಯರು ಸವಿದರು.
ಶುಕ್ರವಾರ ಮಧ್ಯಾನ್ಹ ೫ ನಿಮಿಷ ಜೋರಾದ ಮಳೆ ಸುರಿಯಿತು. ನಂತರ ಕೆಲ ಹೊತ್ತು ಬಿಸಿಲು ಬಿದ್ದಿತಾದರೂ ಸಂಜೆ ೫ ಗಂಟೆ ಸುಮಾರಿಗೆ ಜಿಟಿ ಜಿಟಿ ಮಳೆ ಆರಂಭವಾಗಿರುವದು ಬಿತ್ತನೆ ಮಾಡಿರುವ ರೈತ ಬಾಂಧವರ ಮುಖದಲ್ಲಿ ಮಂದಹಾಸ ಮೂಡಿದೆ. ಮೋಡ ಕವಿದ ವಾತಾವರಣ ಮುಂದುವರಿದಿತ್ತು.
ತಾಲೂಕಿನ ಮನಗೂಳಿ ಪಟ್ಟಣದ ಭೀಮರಾವ ಕುಂಬಾರ ಅವರು ಈ ಸಲ ಬಣ್ಣ ಹಚ್ಚಿದ್ದ ಮಣ್ಣೆತ್ತುಗಳನ್ನು ಗುರುವಾರ ಮಾರಾಟಕ್ಕೆ ತಂದಿದ್ದರು. ಅವರು ರಾತ್ರಿ ಒಂಭತ್ತು ಗಂಟೆಯೊಳಗೆ ಬಣ್ಣ ಹಚ್ಚಿದ್ದ ತಾವು ತಂದಿದ್ದ ಎಲ್ಲ ಮಣ್ಣೆತ್ತುಗಳನ್ನು ರೂ ೫೦ ರಿಂದ ೧೦೦ ರವರೆಗೆ ಮಾರಾಟ ಮಾಡಿ ನಮ್ಮ ಊರಿಗೆ ಹೋದೆ ಎಂದು ಶುಕ್ರವಾರ ಪತ್ರಿಕೆಗೆ ತಿಳಿಸಿದರು.
ಪಟ್ಟಣದ ಗದಿಗೆಪ್ಪ ಕುಂಬಾರ ಅವರು, ಈ ಸಲ ಮೂರುವರೆ ಸಾವಿರ ಜೋಡಿ ಅಲಂಕಾರಿಕ ಪಿಓಪಿ ಎತ್ತುಗಳು ಮಾರಾಟ ಆಗಿವೆ. ಲಾಭ ಬಹಳ ನೋಡದೇ ಮಾರಾಟ ಮಾಡಲಾಗಿದೆ. ನಿನ್ನೆ, ಇಂದು ತರಿಸಲಾದ ಎತ್ತುಗಳಲ್ಲಿ ಸ್ವಲ್ಪ ಮಾತ್ರ ಮಾರಾಟವಾಗಿ ಒಂದೂವರೆ ಸಾವಿರ ಜೋಡಿ ಉಳಿದುಕೊಂಡಿವೆ. ನಮಗೆ ಮಣ್ಣೆತ್ತಿನ ಮಾರಾಟದಿಂದಾಗಿ ಅಷ್ಟಾಗಿ ಲಾಭವಾಗದೇ ಹೋದರೂ ಸಂಪ್ರದಾಯದಂತೆ ಮಣ್ಣೆತ್ತು ಮಾರಾಟ ಮಾಡಲಾಗುವುದು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.