Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವಮೂರ್ತಿ ಮೆರವಣಿಗೆ
(ರಾಜ್ಯ ) ಜಿಲ್ಲೆ

ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವಮೂರ್ತಿ ಮೆರವಣಿಗೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಆರಾಧ್ಯದೈವ ಜಗದ್ಗುರು ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವ ಮೂರ್ತಿ ಹಾಗೂ ರೇವಣಸಿದ್ದೇಶ್ವರ ಗುಡ್ಡದಲ್ಲಿರುವ ಅಕ್ಕನಾಗಮ್ಮನ ಗುಹೆಯಲ್ಲಿ ಪ್ರತಿಷ್ಠಾಪಿಸುವ ಅಕ್ಕನಾಗಮ್ಮ, ಬಸವಣ್ಣನವರ ಹಾಗೂ ಚನ್ನಬಸವಣ್ಣನವರ ಮೂರ್ತಿಗಳ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳದೊಂದಿಗೆ ಅದ್ದೂರಿಯಾಗಿ ಶುಕ್ರವಾರ ಜರುಗಿತು.
ಗ್ರಾಮದ ಹಾಲಭಾವಿಯಿಂದ ಆರಂಭವಾದ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿ ರೇವಣಸಿದ್ದೇಶ್ವರ ಗುಡ್ಡಕ್ಕೆ ಮೂರ್ತಿಗಳು ತಲುಪಿದವು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಆಯಾ ಪ್ರದೇಶದ ಮಹಿಳೆಯರು ರಂಗೋಲಿ ಚಿತ್ತಾರ ಹಾಕುವ ಮೂಲಕ ಶರಣರ ಮೂರ್ತಿಗಳಿಗೆ ಭವ್ಯ ಸ್ವಾಗತ ಕೋರಿದರು. ಮೆರವಣಿಗೆಯಲ್ಲಿ ಮಹಿಳೆಯರ ಕುಂಭದೊಂದಿಗೆ ವಚನದ ಕಟ್ಟನ್ನು ತಲೆ ಮೇಲೆ ಹೊತ್ತ ಮಕ್ಕಳು, ವಿವಿಧ ಶಾಲಾ ವಿದ್ಯಾರ್ಥಿಗಳು ಬಸವೇಶ್ವರ, ಅಕ್ಕನಾಗಮ್ಮ, ಅಕ್ಕಮಹಾದೇವಿ, ಚನ್ನಬಸವಣ್ಣ, ಅಂಬಿಗರ ಚೌಡಯ್ಯ, ಒನಕೆ ಒಬ್ಬವ್ವ ಸೇರಿದಂತೆ ವಿವಿಧ ಶರಣರ ವೇಷಭೂಷಣ ಧರಿಸಿ ಭಾಗವಹಿಸಿದ್ದು ಮೆರವಣಿಗೆಗೆ ಮೆರಗು ತಂದರು. ಮೆರವಣಿಗೆಯಲ್ಲಿ ಡೊಳ್ಳು, ಕರಡಿಮಜಲು, ಭಜನಾ ತಂಡಗಳು ಕಂಡುಬಂದವು. ಮೆರವಣಿಗೆಯಲ್ಲಿ ಸಿದ್ದೇಶ್ವರ ಟ್ರಸ್ಟ್ ಕಮೀಟಿ ಪದಾಧಿಕಾರಿಗಳು ಹಾಗೂ ರಾಷ್ಟ್ರಧರ್ಮ ವೇದಿಕೆಯ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ಜನರು ಭಾಗವಹಿಸಿದ್ದರು.
ಜು. ೭ ರಂದು ಪ್ರಾತಃಕಾಲದಲ್ಲಿ ಅಕ್ಕನಾಗಮ್ಮ ಗುಹೆಯಲ್ಲಿ ವಿವಿಧ ಶ್ರೀಗಳ ಸಾನಿಧ್ಯದಲ್ಲಿ ಬರಡೋಲದ ವೇದಮೂರ್ತಿ ವಿಶ್ವನಾಥ ಶಾಸ್ತ್ರೀಜಿಯವರಿಂದ ಅಕ್ಕನಾಗಮ್ಮ, ಬಸವಣ್ಣನವರ, ಚನ್ನಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ, ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ರೇವಣಸಿದ್ದೇಶ್ವರ ದೇವರ ಬೆಳ್ಳಿಯ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರುವುದು ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.