ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಬಾಬು ಜಗಜೀವನರಾಮ ಅವರ ಪುಣ್ಯತಿಥಿ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಾ. ಬಾಬು ಜಗಜೀವನರಾಮರವರ ವ್ಯಕ್ತಿತ್ವದ ಕುರಿತು ಕಾಂಗ್ರೆಸ್ ಮುಖಂಡರು ಮಾತನಾಡಿ, ಬಾಬು ಜಗಜೀವನರಾಮರವರ ಜೀವನವು ಹಲವಾರು ಆಯಾಮಗಳ ವ್ಯಕ್ತಿತ್ವವನ್ನು ಹೊಂದಿದೆ. ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಸಂಪನ್ನ ರಾಜಕಾರಣಿ ಅವರಾಗಿದ್ದರು. ಸುಮಾರು ೪೦ ವರ್ಷಗಳ ಕಾಲ ಸಂಸತ್ತಿನಲ್ಲಿ ಹಲವಾರು ಇಲಾಖೆಗಳ ನಿರ್ವಹಣೆಯನ್ನು ಮಾಡಿದ ಏಕೈಕ ರಾಜಕಾರಣಿಯಾಗಿದ್ದ ಅವರ ವಿಚಾರಗಳ ಕುರಿತು ಸಂಶೋಧನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಇವರ ತತ್ವಗಳನ್ನು ಪ್ರಸಾರ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಸ ಕಾಲೆಬಾಗ, ಡಾ. ಗಂಗಾಧರ ಸಂಭಣ್ಣಿ, ಮಹಾದೇವ ಜಾಧವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಹೇಬಗೌಡ ಬಿರಾದಾರ, ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಲಾಲಸಾಬ ಕೊರಬು, ಜಮೀರಹ್ಮದ ಬಕ್ಷಿ, ರಿಯಾಜ ನದಾಫ, ತಾಜುದ್ದೀನ ಖಲೀಫಾ, ಫಿರೋಜ ಶೇಖ, ಬಾಬು ಯಾಳವಾರ, ಗಿರೀಶ ಇಟ್ಟಂಗಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

