ವಿಜಯಪುರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜು.೧೩ ರಂದು ನಗರದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಶನಿವಾರ ನಗರದ ಜಿಪಂ ಕಚೇರಿ ಬಳಿಯ ಪತ್ರಿಕಾ ಭವನದಲ್ಲಿ ಕಾನಿಪ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾನಿಪ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಮಾರಂಭವನ್ನು ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತಲ್ಲದೆ, ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು.
ಕಾರ್ಯಕ್ರಮಕ್ಕೆ ಜಿಲ್ಲೆಯ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ, ಜಿಲ್ಲಾ ಉಸ್ತುವಾರಿ ಪುಂಡಲೀಕ ಬಾಳೋಜಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆ ತೀರ್ಮಾನಿಸಿತು.
ಕಾನಿಪ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಸಭೆಯ ತೀರ್ಮಾನಗಳ ಕುರಿತು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಸ್ವಾಗತಿಸಿದರು.
ಸಭೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮಹೇಶ ಶೆಟಗಾರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಕೆ.ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ಖಜಾಂಚಿ ರಾಹುಲ್ ಆಪ್ಟೆ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ವಿನೋದ ಸಾರವಾಡ, ಸುನೀಲ ಕಾಂಬಳೆ, ಸುನೀಲ ಗೋಡೆನ್ನವರ ಹಾಗೂ ದೇವರಹಿಪ್ಪರಗಿ ತಾಲೂಕು ಘಟಕ ಅಧ್ಯಕ್ಷ ಸಂಗಮೇಶ ಉತ್ನಾಳ ಸಮಾರಂಭದ ಯಶಸ್ಸಿಗೆ ಸಲಹೆ-ಸೂಚನೆ ನೀಡಿದರು.
Subscribe to Updates
Get the latest creative news from FooBar about art, design and business.
Related Posts
Add A Comment

