Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಸೌಲಭ್ಯ ತಲುಪಿಸಿ ತಾಂಡಾಗಳ ಅಭಿವೃದ್ದಿಗೆ ಒತ್ತು ನೀಡಿ
(ರಾಜ್ಯ ) ಜಿಲ್ಲೆ

ಸರ್ಕಾರದ ಸೌಲಭ್ಯ ತಲುಪಿಸಿ ತಾಂಡಾಗಳ ಅಭಿವೃದ್ದಿಗೆ ಒತ್ತು ನೀಡಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಅತಿ ಹೆಚ್ಚು ತಾಂಡಾಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿನ ತಾಂಡಾಗಳಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ, ಶೈಕ್ಷಣಿಕ ಸುಧಾರಣೆಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಲಾಭ ದೊರಕಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷ ಎನ್.ಜಯದೇವನಾಯ್ಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಾಂಡಾಗಳಲ್ಲಿರುವ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ತಾಂಡಾಗಳಲ್ಲಿನ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಲಕಾಲಕ್ಕೆ ಆರೋಗ್ಯ- ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿ ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಕಾಲಕಾಲಕ್ಕೆ ತಾಂಡಾಗಳಿಗೆ ಭೇಟಿ ನೀಡಿ, ಗಂಭೀರವಾದಂತಹ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಥಮಿಕ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಇಲಾಖೆ ಪಾತ್ರ ಅತಿ ಮುಖ್ಯವಾಗಿರುವುದರಿಂದ ತಾಂಡಾಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಂಡು ಶಿಕ್ಷಕರ ನಿಯೋಜನೆಗೆ ಕ್ರಮ ವಹಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಕ್ರಮ ವಹಿಸಬೇಕು. ಕನ್ನಡ, ಇಂಗ್ಲಿಷ್ ಭಾಷೆಗಳ ವ್ಯಾಕರಣ ಕಲಿಯುವಿಕೆ ತರಬೇತಿಗಳನ್ನು ಹಮ್ಮಿಕೊಳ್ಳಬೇಕು ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಮುಖ್ಯ ವಿಷಯಗಳಲ್ಲಿ ಮಕ್ಕಳಿಗೆ ಕರಗತಗೊಳಿಸುವ ಮೂಲಕ ಅವರನ್ನು ಉತ್ತೇಜಿಸಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಅಶೋಕ ಲಿಮಕರ ಅವರು ಸಭೆಗೆ ಮಾಹಿತಿ ನೀಡಿ, ಈಗಾಗಲೇ ಜಿಲ್ಲೆಯಲ್ಲಿ ಮಿಷನ್ ವಿದ್ಯಾಪುರ ಯೋಜನೆ ಅನುಷ್ಠಾನಗೊಳಿಸಿ, ಆನ್‌ಲೈನ್ ಮೂಲಕ ಸಂಜೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಮುಖ ವಿಷಯಗಳ ಕುರಿತು ಪಾಠ ಬೋಧನೆ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಥಮಾದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಗುಣಮಟ್ಟದ ಆಹಾರ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿರುವ ಕುರಿತು ಖಚಿತಪಡಿಸಿಕೊಳ್ಳಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ಸಮಯಕ್ಕನುಗುಣವಾಗಿ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ತಾಂಡಾಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಪರಿವರ್ತಿಸಲು ಅಧಿಕಾರಿ, ಸಿಬ್ಬಂದಿಗಳು  ಇ-ಸ್ವತ್ತು ನೋಂದಣಿ ಮಾಡಲು ತಾಂಡಗಳಿಗೆ ತೆರಳಬೇಕು. ಸರ್ಕಾರ ನಿಗಧಿಪಡಿಸಿದ ಶುಲ್ಕದಲ್ಲಿ ಇ-ಸ್ವತ್ತು ನೊಂದಣಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಗಂಗಾ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಸಮರ್ಪಕವಾಗಿ ವಿದ್ಯುತ್ ಸಂಪರ್ಕ, ನಿರಂತರ ಜ್ಯೋತಿ ವಿದ್ಯುತ್ ಪೂರೈಸುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಸ್ಕಾಂ ಅಧಿಕಾರಿ ಈಗಾಗಲೇ ಅರ್ಹ ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ ಫಲಾನುಭವಿಗಳಿಗೆ ಯೋಜನೆ ಒದಗಿಸಲು ಪ್ರಕ್ರಿಯೆ ನಡೆದಿದೆ ಎಂದು ಮಾಹಿತಿ ನೀಡಿದರು.
ತಾಂಡಾಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಘಟಕ, ರಸ್ತೆ, ಬಸ್ ಸೌಕರ್ಯ, ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ದೊರಕಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸರಕಾರ ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಯಾವುದೇ ಕಾರಣಕ್ಕೂ ಸರಕಾರದ ಯೋಜನೆಗಳ ಸೌಲಭ್ಯಗಳಿಂದ ಅರ್ಹರು ವಂಚಿತರಾಗದಂತೆ ನೋಡಿಕೊಂಡು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಸರ್ಕಾರದ ಸೌಲತ್ತುಗಳನ್ನು ಜನರಿಗೆ ದೊರಕಿಸಿ ಅನುಕೂಲ ಕಲ್ಪಿಸಬೇಕು. ಜಿಲ್ಲೆಯಲ್ಲಿನ ತಾಂಡಾಗಳಿಗೆ ಲಿಂಕ್ ರಸ್ತೆ, ಶುದ್ಧ ಕುಡಿಯುವ ನೀರಿನ ಘಟಕ, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ, ಸಾರಿಗೆ ಸೌಕರ್ಯ, ಶಿಕ್ಷಕರ ಕೊರತೆ, ಶಿಕ್ಷಣ ಗುಣಮಟ್ಟಕ್ಕೆ ಒತ್ತು, ಬೀದಿ ದೀಪ ನಿರ್ವಹಣೆ, ವಿದ್ಯುತ್ ಸಂಪರ್ಕ, ಅಂಗನವಾಡಿಗಳ ಕಾರ್ಯನಿರ್ವಹಣೆ, ನಿರಂತರ ಜ್ಯೋತಿ ಸಂಪರ್ಕ, ಗಂಗಾ ಕಲ್ಯಾಣ ಬೊರವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿಶೇಷ ಗಮನ ಹರಿಸಿ ತಾಂಡಾಗಳ ಅಭಿವೃದ್ದಿಗಾಗಿ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲ ತಾಂಡಾಗಳಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿರುವ ತಾಂಡಾಗಳ ಮಾಹಿತಿ, ಹಾಗೂ ತಾಂಡಾ ಅಭಿವೃದ್ದಿಗಾಗಿ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಯನ್ನು ಒಂದು ವಾರದೊಳಗೆ ಸಿದ್ಧಪಡಿಸಿಕೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸಭೆಗೆ ಕಂದಾಯ ಗ್ರಾಮಗಳಿಗೆ ಸೇರಿದ ತಾಂಡಾಗಳ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ಹೆಸ್ಕಾಂನ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ದೇವಾನಂದ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.