ಸಿಂದಗಿ: ಈಗಾಗಲೇ ರಾಜ್ಯದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ನಮ್ಮ ಬೇಡಿಕೆಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಹಲವು ದಿನಗಳ ಹಿಂದೆ ತುಮಕೂರದಿಂದ ಬೆಂಗಳೂರದವರೆಗೆ ಪಾದಯಾತ್ರೆ ಮಾಡಿ ೧೪೩ ದಿನಗಳ ಕಾಲ ನಿರಂತರವಾಗಿ ಅನಿರ್ಧಿಷ್ಟಾವಧಿ ಧರಣಿ ಮಾಡಿದ್ದರೂ ಸಹ ಸರ್ಕಾರ ನಮ್ಮ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿಲ್ಲ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಕಿರನಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಓ.ಪಿ.ಎಸ್ ಜಾರಿಗೊಳಿಸುವ ಮತ್ತು ಜ್ಯೋತಿ ಸಂಜೀವಿನಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತಾಲೂಕಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಚುನಾವಣೆಗೂ ಪೂರ್ವ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಮ್ಮ ಧರಣಿ ಸ್ಥಳಕ್ಕೆ ಆಗಮಿಸಿ ನಮ್ಮ ಸರ್ಕಾರ ಬಂದ ಮೇಲೆ ಕೂಡಲೇ ತಮ್ಮ ಸಮಸ್ಯೆಯನ್ನು ಪರಿಹರಿಸುವದಾಗಿ ಮತ್ತು ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಸರ್ಕಾರ ರಚನೆಯಾಗಿ ಒಂದು ವರ್ಷವಾದರು ಇಲ್ಲಿಯವರೆಗೆ ಸರ್ಕಾರ ನಮ್ಮ ಸಮಸ್ಯೆಗೆ ಯಾವುದೇ ಸಕಾರಾತ್ಮಕ ಹೇಳಿಕೆ ನೀಡಿಲ್ಲ. ನಾವು ಸರ್ಕಾರಿ ನೌಕರರಂತೆ ಸರ್ಕಾರದ ಎಲ್ಲ ಕಾರ್ಯದಲ್ಲಿಯೂ ಸಕ್ರಿಯವಾಗಿ ಕಾರ್ಯ ಮಾಡುತ್ತೇವೆ. ಹಾಗಾದರೆ ಈ ತಾರತಮ್ಯ ನೀತಿ ಏಕೆ ಎಂದ ಅವರು ಓ.ಪಿ.ಎಸ್ ಜಾರಿ ವಿಳಂಬವಾದಲ್ಲಿ ರಾಜ್ಯ ಸರಕಾರಿ ನೌಕರರಿಗೆ ನೀಡುತ್ತಿರುವಂತೆ ಎನ್.ಪಿ.ಎಸ್ನ್ನು ಯಥಾವತ್ತಾಗಿ ಜಾರಿ ಮಾಡುವುದು, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ದಶಕಗಳಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವುದಾಗಬೇಕು, ಅನುದಾನಿತ ನೌಕರರಿಗೂ ಕೂಡ ಸರಕಾರಿ ನೌಕರರಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಅನೇಕ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟಕ್ಕೂ ನಾವು ಸಿದ್ದರಾಗಿದ್ದೇವೆ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಅರುಣ ನಾಯ್ಕೋಡಿ, ಉಪಾಧ್ಯಕ್ಷ ಬಿ.ಬಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಶಿವಶಂಕರ ಉಮ್ಮರಗಿ, ಶಿಕ್ಷಕರಾದ ಆರ್.ಎಸ್.ಗಂಗನಳ್ಳಿ, ಸುರೇಶ ಗಂಗನಳ್ಳಿ, ಡಿ.ಬುಳಪ್ಪ, ಸಿದ್ದಲಿಂಗ ಕಿಣಗಿ, ಅರವಿಂದ ತೇಲಿ, ರಾಮಕೃಷ್ಣ ನಾಯಕ, ಮೇಘು ನಾಯಕ, ಅಶೋಕ ರಾಠೋಡ, ಸುಭಾಸ ಪಾಟೀಲ ರಾಜು ಭೈರಿ, ಡಾ.ಶಾಂತುಲಾಲ ಚವ್ಹಾಣ, ಬಂಗಾರಿ ಕೊಡಿಯಾ, ಆರ್.ಬಿ.ಬಿರಾದಾರ, ಎಸ್.ಸಿ.ಚಟ್ಟರಕಿ, ಎಸ್.ಎಮ್.ಜಂಗಿನಮಠ, ಎ.ಸಿ.ಬಿದರಿ, ಎಂ.ಎಸ್.ರೂಗಿ, ಬಿ.ಬಿ.ಪಾಟೀಲ, ಎಸ್.ಎಮ್.ಜಮಾದಾರ, ಬಿ.ಎಮ್.ರಾಠೋಡ, ಎಸ್.ಎಮ್.ಕುಂಬಾರ, ಬಿ.ಎನ್.ಪವಾರ, ಎಮ್.ಎ.ಲೋಣಿ, ಡಿ.ಎಮ್.ಕೊಟ್ಟಲಗಿ ಸೇರಿದಂತೆ ಅನೇಕರಿದ್ದರು.
Subscribe to Updates
Get the latest creative news from FooBar about art, design and business.
ಬೇಡಿಕೆ ಈಡೇರಿಕೆಗೆ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮನವಿ
Related Posts
Add A Comment

