Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಸಿ ತಾಣವಾಗಲಿರುವ ರೇವಣಸಿದ್ದೇಶ್ವರ ಗುಡ್ಡ :ಶಿವಪ್ರಕಾಶ ಶ್ರೀ
(ರಾಜ್ಯ ) ಜಿಲ್ಲೆ

ಪ್ರವಾಸಿ ತಾಣವಾಗಲಿರುವ ರೇವಣಸಿದ್ದೇಶ್ವರ ಗುಡ್ಡ :ಶಿವಪ್ರಕಾಶ ಶ್ರೀ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಇಂಗಳೇಶ್ವರ ಗ್ರಾಮದ ರೇವಣಸಿದ್ದೇಶ್ವರ ಗುಡ್ಡವು ಪವಿತ್ರ ಸ್ಥಳವಾಗುವ ಜೊತೆಗೆ ಇತಿಹಾಸ ಪ್ರಸಿದ್ಧವಾಗಿದೆ. ಈ ಗುಡ್ಡದಲ್ಲಿ ಹೆಚ್ಚು ಗಿಡ-ಮರಗಳನ್ನು ನೆಟ್ಟಿರುವದರಿಂದಾಗಿ ಮುಂಬರುವ ದಿನಗಳಲ್ಲಿ ಇದೊಂದು ಭಕ್ತಿ ತಾಣವಾಗುವ ಜೊತೆಗೆ ಪ್ರವಾಸಿ ತಾಣವಾಗುವದರಲ್ಲಿ ಸಂದೇಹವಿಲ್ಲ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ರೇವಣಸಿದ್ದೇಶ್ವರ ಸಮುದಾಯ ಭವನದಲ್ಲಿ ಗ್ರಾಮದ ಆರಾಧ್ಯ ದೈವ ಜಗದ್ಗುರು ರೇವಣಸಿದ್ದೇಶ್ವರ ಬೆಳ್ಳಿಯ ಉತ್ಸವ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ರೇವಣಸಿದ್ದೇಶ್ವರ ಗುಡ್ಡದಲ್ಲಿರುವ ಅಕ್ಕನಾಗಮ್ಮ ಗುಹೆಯಲ್ಲಿ ಅಕ್ಕನಾಗಮ್ಮ, ಚನ್ನಬಸವಣ್ಣ ಮತ್ತು ಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನೈಸರ್ಗಿಕ ತಾಣಗಳು ಇಂದಿನ ಒತ್ತಡದ ಬದುಕಿಗೆ ಶಾಂತಿ,ನೆಮ್ಮದಿ ನೀಡುತ್ತವೆ. ಅರಣ್ಯ ಇಲಾಖೆಯ ನೆರವಿನೊಂದಿಗೆ ಇಲ್ಲಿನ ಜನರು ಈ ಗುಡ್ಡದಲ್ಲಿ ಸಸಿಗಳನ್ನು ನೆಟ್ಟಿರುವುದು ಸಂತಸದಾಯಕ ಸಂಗತಿ. ಮುಂಬರುವ ದಿನಗಳಲ್ಲಿ ಜನರು ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ನೈಸರ್ಗಿಕ ಸೌಂದರ್ಯ ಸವಿಯುವ ಜೊತೆಗೆ ಆಹ್ಲಾದಕರ ಭಾವ ಮೂಡಿಸಿಕೊಳ್ಳುವದರಲ್ಲಿ ಸಂದೇಹವಿಲ್ಲ. ಈ ಗುಡ್ಡದಲ್ಲಿ ರೇವಣಸಿದ್ದೇಶ್ವರರ ಭವ್ಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಕಡೆಗೆ ಗಮನ ಹರಿಸಬೇಕು. ತಮ್ಮ ಕಾರ್ಯಕ್ಕೆ ಸದಾ ನಮ್ಮ ಬೆಂಬಲವಿದೆ ಎಂದರು.
ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಅರಣ್ಯ ಇಲಾಖೆಯೊಂದಿಗೆ ಸಂಪರ್ಕಿಸಿ ಈ ಗುಡ್ಡದಲ್ಲಿ ಸಸಿಗಳನ್ನು ನೆಡುವಲ್ಲಿ ಸಹಕಾರ ನೀಡಲಾಗಿದೆ. ಇದೊಂದು ಪ್ರವಾಸಿ ತಾಣ ಮಾಡಲು ಕ್ಷೇತ್ರ ಶಾಸಕ,ಸಚಿವ ಶಿವಾನಂದ ಪಾಟೀಲರು ಮುತುವರ್ಜಿ ವಹಿಸಿದ್ದಾರೆ ಎಂದರು.
ನಂದಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸತ್ಯಜೀತ ಪಾಟೀಲ ಮಾತನಾಡಿ, ಬಸವೇಶ್ವರರ ಕೃಪಾಶೀರ್ವಾದದಿಂದ ನಮ್ಮ ತಂದೆಯವರು ಈ ಭಾಗದಿಂದ ಶಾಸಕರಾಗಿ ಆಯ್ಕೆಯಾಗುವ ಜೊತೆಗೆ ಸಚಿವರಾಗಿ ರಾಜ್ಯದ, ಮತಕ್ಷೇತ್ರದ ಜನರ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ತಂದೆಯವರು ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಮತಕ್ಷೇತ್ರದ ಜನರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿಯೂ ಮತಕ್ಷೇತ್ರದ ಅಭಿವೃದ್ಧಿ ಸದಾ ಅವರು ಶ್ರಮಿಸುತ್ತಾರೆ. ಇಂಗಳೇಶ್ವರ ಗುಡ್ಡವನ್ನು ಒಂದು ಪ್ರವಾಸಿ ತಾಣ ಮಾಡುವ ಕಡೆಗೆ ನಮ್ಮ ತಂದೆ ಗಮನ ಹರಿಸಿದ್ದಾರೆ ಎಂದರು.
ಶಿಕ್ಷಕ ಅಶೋಕ ಹಂಚಲಿ ಅವರು ಉಪನ್ಯಾಸ ನೀಡಿ ಮಾತನಾಡಿ, ಬಸವಣ್ಣನವರ ಆದರ್ಶದ ಬದುಕು-ಚಿಂತನೆ ಇಂದು ನಮ್ಮ ಆಳುವ ನಾಯಕರಲ್ಲಿ ಬರುವದಾದರೆ ಬಸವಣ್ಣನವರ ಕಲ್ಯಾಣ ರಾಜ್ಯ ಖಂಡಿತ ನಿರ್ಮಾಣವಾಗುವದರಲ್ಲಿ ಸಂದೇಹವಿಲ್ಲ. ಬಸವಾದಿ ಶರಣರ ತತ್ವ-ಸಂದೇಶಗಳನ್ನು ಅರಿತು ಸುಂದರವಾದ ಜೀವನ ಸಾಗಿಸುವಂತಾಗಬೇಕಿದೆ. ಈ ಭಾಗವನ್ನು ಶರಣರ ತಾಣವಾಗಿಸುವ ಜೊತೆಗೆ ನೈಸರ್ಗಿಕವಾಗಿ ಸುಂದರವಾದ ಪರಿಸರವನ್ನು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಸಾನಿಧ್ಯ ವಹಿಸಿದ್ದ ಇಂಗಳೇಶ್ವರ ವಚನ ಶಿಲಾ ಮಂಟಪದ ಚನ್ನಬಸವ ಸ್ವಾಮೀಜಿ, ಹಿರೇಮಠದ ಬೃಂಗೀಶ್ವರಲಿಂಗ ಶಿವಾಚಾರ್ಯ ಸ್ವಾಮೀಜಿ, ವಲಯ ಅರಣಾಧಿಕಾರಿ ಮಹೇಶ ಪಾಟೀಲ, ಮುಖಂಡ ಸಂಗಮೇಶ ಓಲೇಕಾರ ಮಾತನಾಡಿದರು.
ಅಧ್ಯಕ್ಷತೆಯನ್ನು ಇಂಗಳೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬನ್ನೆಪ್ಪ ಡೋಣೂರ ವಹಿಸಿದ್ದರು. ವೇದಿಕೆಯಲ್ಲಿ ರೇವಣಸಿದ್ದೇಶ್ವರ ಟ್ರಸ್ಟ್ ಕಮೀಟಿ ಅಧ್ಯಕ್ಷ ಭೋಜನಗೌಡ ಪಾಟೀಲ, ಉಪವಲಯ ಅರಣ್ಯಾಧಿಕಾರಿ ಮಹೇಶ ಕೊಟ್ಲಗಿ, ವಿಂಡ ಪವರ್ದ ವಿಶ್ವನಾಥ ಪಾಪಶೆಟ್ಟಿ, ಬೀಟ್ ಪಾರೆಸ್ಟ್ ಮಹ್ಮದಶಫೀಕ ನಾಗೂರ,ಸಾಮಾಜಿಕ ಅರಣ್ಯ ಇಲಾಖೆಯ ಶರಣು ಹಚ್ಯಾಳ, ರೇವಣಸಿದ್ದೇಶ್ವರ ಟ್ರಸ್ಟ್ ಕಮೀಟಿ ಸದಸ್ಯರು ಇತರರು ಇದ್ದರು.ಉಮೇಶ ಹಡಪದ ಪ್ರಾಸ್ತವಿಕವಾಗಿ ಮಾತನಾಡಿದರು. ಪಿ.ಎಸ್.ಬಾಗೇವಾಡಿ ಸ್ವಾಗತಿಸಿದರು.ಬಿ.ಬಿ.ಬಾಗೇವಾಡಿ ನಿರೂಪಿಸಿದರು. ಕೆ.ಎಸ್.ಬಾಗೇವಾಡಿ ವಂದಿಸಿದರು. ಧಾರವಾಡದ ಹೆಜ್ಜೆ ಗೆಜ್ಜೆ ಕಲಾತಂಡದಿಂದ ವಚನ ಗಾಯನ ಜರುಗಿತು. ಬೆಳಗ್ಗೆ ಬರಡೋಲದ ವಿಶ್ವನಾಥ ಶಾಸೀಯವರಿಂದ ಅಕ್ಕನಾಗಮ್ಮ ಗುಹೆಯಲ್ಲಿ ಶಾಸೋಕ್ತವಾಗಿ ಅಕ್ಕನಾಗಮ್ಮ, ಚನ್ನಬಸವಣ್ಣ ಮತ್ತು ಬಸವಣ್ಣನವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.