ರೂ.೨.೪೩ ಕೋಟಿ ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ
ಸಿಂದಗಿ: ೨.೪೩ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಬಾಲಕಿಯರ ವಸತಿ ನಿಲಯದಲ್ಲಿ ಸ್ವಚ್ಚತೆ, ಗುಣಮಟ್ಟದ ಆಹಾರ ಹಾಗೂ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಹಳೆ ಚಾಂದಕವಟೆ ರಸ್ತೆಯಲ್ಲಿರುವ ವಿಜಯಪುರ ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಸಿಂದಗಿ ಟೌನ್ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ೨೦೨೦ರಲ್ಲಿ ನಮ್ಮ ತಂದೆಯವರಾದ ದಿ.ಎಂ.ಸಿ.ಮನಗೂಳಿ ಅವರ ಹಸ್ತದಿಂದ ಅಡಿಗಲ್ಲು ಸಮಾರಂಭ ಜರುಗಿದ್ದು, ಇಂದು ನಾನು ಕಟ್ಟಡ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಸಿಂದಗಿ ಶಿಕ್ಷಣ ಕಾಶಿಯಾಗಿ ಹೊರಹೊಮ್ಮುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಗಳನ್ನು ಶಿಕ್ಷಕರು ಗುರುತಿಸಬೇಕು. ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಶಿಕ್ಷಣ ಒಂದಿದ್ದರೆ ಜೀವನದಲ್ಲಿ ಏನೆಲ್ಲವನ್ನು ಪಡೆದುಕೊಳ್ಳಬಹುದು. ಹಾಗಾಗಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಕರ್ನಾಟಕ ಬಾಲವಿಕಾಸ ಅಕಾಡೆಮಿ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು.
ಈ ವೇಳೆ ವಿಜಯಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಪ್ಪ ಆಶಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈರಮ್ಮ ಪಾಟೀಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಸಿಂದಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ರವೀಂದ್ರ ಬಂಥನಾಳ ಸ್ವಾಗತಿಸಿದರು. ಎಸ್.ಎ.ರಾಠೋಡ ನಿರೂಪಿಸಿದರು. ನಂದಪ್ಪ ಆನಗೊಂಡ ವಂದಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ನಿರ್ಮಿತಿ ಕೇಂದ್ರದ ಅಭಿಯಂತರ ಸರ್ಫ್ರಾಜ್ ಜಹಗೀರದಾರ್, ವಿಸ್ತೀರ್ಣಾಧಿಕಾರಿ ಗೀರಿಶ ಕಂಠಿಗೊಂಡ, ನಿಲಯ ಪಾಲಕ ಸೈಪನ್ ಮುಲ್ಲಾ, ಸಂಗನಗೌಡ ಪಾಟೀಲ, ದಶರಥ ರಾಠೋಡ, ನಾನಾಗೌಡ ಸಿದ್ದರೆಡ್ಡಿ, ಮಹಿಬೂಬ ನಾಯ್ಕೋಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಎ.ಎ.ಮಾಗಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ, ಶ್ರೀಹರಿ ಕುಲಕರ್ಣಿ, ಪರಸಭೆ ಸದಸ್ಯ ರಾಜಣ್ಣ ನಾರಾಯಣಕರ, ಶರಣಪ್ಪ ಸುಲ್ಪಿ, ಶಿವಣ್ಣ ಕೋಟರಗಸ್ತಿ, ಸಾಯಬಣ್ಣ ಪುರದಾಳ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಯ ಸಿಬ್ಬಂದಿ, ವಸತಿ ನಿಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ವಸತಿ ನಿಲಯದ ಪರಿಸರದ ಶುಚಿತ್ವ ಕಾಪಾಡಿಕೊಳ್ಳಬೇಕು. ಇಲ್ಲಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಅಧ್ಯಯನಶೀಲರಾಗಿ, ಸತತ ಪರಿಶ್ರಮದಿಂದ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿ ಸಿಂದಗಿ ತಾಲೂಕಿನ ಕೀರ್ತಿಯನ್ನು ಬಾನೆತ್ತರಕ್ಕೆ ತೆಗೆದುಕೊಂಡು ಹೋಗಬೇಕು.”
– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ

