ದೇವರಹಿಪ್ಪರಗಿ: ಪ್ರಪಂಚದಲ್ಲಿ ಶಿಕ್ಷಕರ ಸ್ಥಾನ ದೊಡ್ಡದು, ಶಿಕ್ಷಕ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿರುವ ಶಿಕ್ಷಕ, ಶಿಕ್ಷಕಿಯರ ಬದುಕು ಬೆಳಕಾಗಲಿ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ಬೇವನೂರ ಹೇಳಿದರು.
ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶನಿವಾರ ಜರುಗಿದ ನಿವೃತ್ತ ಶಿಕ್ಷಕ, ಶಿಕ್ಷಕಿಯರ ಸನ್ಮಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳಿಗೆ ಜ್ಞಾನ ಧಾರೆಯರೆದು ಶೈಕ್ಷಣಿಕ ಸೇವೆ ಸಲ್ಲಿಸಿದ ಶಿಕ್ಷಕ, ಶಿಕ್ಷಕಿಯರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಹಾಗೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕ ಶಿಕ್ಷಕಿಯರು ಶ್ರಮಿಸಿದ್ದಾರೆ. ಅವರ ನಿವೃತ್ತಿಜೀವನ ಉತ್ತಮವಾಗಿರಲಿ ಎಂದು ಶುಭಕೋರಿದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಫಿರೋಜ್ ಕಾಚೂರ, ನಿವೃತ್ತ ಪ್ರೌಢಶಾಲಾ ಶಿಕ್ಷಕ ಪಂಚಾಕ್ಷರಿ ಮಿಂಚನಾಳ ಹಾಗೂ ಸಿಂದಗಿ ತಾಲ್ಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಬಸವರಾಜ ಸೋಮಾಪುರ ಮಾತನಾಡಿದರು.
ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಶಿಕ್ಷಕರ ಸಂಘದ ಪ್ರಧಾನಕಾರ್ಯದರ್ಶಿ ಸಿ.ಬಿ.ಗಡಗಿ, ಉಪಾಧ್ಯಕ್ಷ ಎಸ್.ಡಿ.ಮುಳಸಾವಳಗಿ, ಕಾವೇರಮ್ಮ ಚವ್ಹಾಣ, ನಿವೃತ್ತ ಶಿಕ್ಷಕರಾದ ಎಮ್.ಎಚ್.ಪಟೇಲ, ಎಸ್.ಜಿ.ತಾವರಖೇಡ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಪಿ.ಸಿ.ತಳಕೇರಿ, ಶಿವಾನಂದ ಕೋಟಿನ, ರೇಣುಕಾ ಇಂಡಿ, ಪಾರ್ವತಿ ಪೂಜಾರಿ, ಜಯಶ್ರೀ ನಾಯಕ, ಗಂಗಾಬಾಯಿ ಗುಡಿಮನಿ, ನಾಗೇಶ ನಾಗೂರ, ಮಲ್ಲಿಕಾರ್ಜುನ ತಳಕೇರಿ ಇದ್ದರು.
Subscribe to Updates
Get the latest creative news from FooBar about art, design and business.
ದೇವರಹಿಪ್ಪರಗಿ ತಾಲ್ಲೂಕು ಪ್ರಾ.ಶಾ ಶಿಕ್ಷಕರ ಸಂಘದಿಂದ ಸೇವಾನಿವೃತ್ತರಿಗೆ ಸನ್ಮಾನ
Related Posts
Add A Comment

