ಸಿಂದಗಿ: ರೈತರಿಗೆ ಅನುಕೂಲ ಮತ್ತು ಅವಶ್ಯಕತೆಗಳ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ರಾಂಪೂರ ಪಿಎ ಗ್ರಾಮದಲ್ಲಿರುವ ಕೃಷ್ಣಭಾಗ್ಯ ಜಲನಿಗಮ ನಿಯಮಿತ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೪-೨೫ನೆಯ ಸಾಲಿಗೆ ಮಂಜೂರಾದ ಕ್ಲೋಜರ್ ಅವಧಿ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳ ಬಗ್ಗೆ ಕೂಲಂಕುಶವಾಗಿ ಚರ್ಚೆಸಲಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಅವಶ್ಯವಿರುವ ರಸ್ತೆಗಳ ನಿರ್ಮಾಣ ಕಾಮಗಾರಿಗಳ ಪಟ್ಟಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವೆ. ಇಂಡಿ ಏತ ನೀರಾವರಿ ಕಾಲುವೆಗೆ ಸ್ಕಾಡಾ ಗೇಟುಗಳನ್ನು ಕೂಡಲೇ ಅಳವಡಿಸುವಂತೆ ವ್ಯವಸ್ಥಾಪಕ ನಿರ್ದೇಶರಿಗೆ ನಿರ್ದೇಶನದಂತೆ ದರಗಳನ್ನು ಪರಿಶೀಲಿಸಿ ಅನುಮೋದನೆ ಪಡೆದುಕೊಳ್ಳುವುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅಭಿಯಂತರ ರವಿಕೃಷ್ಣ ಎಚ್, ಅಧೀಕ್ಷಕ ಅಭಿಯಂತರ ಮನೋಜಕುಮಾರ ಸೇರಿದಂತೆ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಿಮ್ಮಲಗಿ ನೀರಾವರಿ ಯೋಜನೆಯ ಆಡಿಯಲ್ಲಿ ಬರುವ ಕೋರವಾರ ಶಾಖಾ ಕಾಲುವೆ ಕಾಮಗಾರಿಯು ನಿರ್ಮಾಣವಾಗಿ ಹಲವು ವರ್ಷಗಳಾದವು. ಅದರಲ್ಲಿ ಹೂಳು ಹಾಗೂ ಚಂಗಲ್ ಬೆಳದಿರುತ್ತವೆ. ಸದರಿ ಕಾಲುವೆಯನ್ನು ಸ್ವಚ್ಛಗೊಳಿಸಿ ಅದರಡಿಯಲ್ಲಿ ಬರುವ ಕೆರೆಗಳನ್ನು ತುಂಬಿಸಿ ಎಂದು ಬಾಕ್ಸ್: ಚಿಮ್ಮಲಗಿ ನೀರಾವರಿ ಯೋಜನೆಯ ಆಡಿಯಲ್ಲಿ ಬರುವ ಕೋರವಾರ ಶಾಖಾ ಕಾಲುವೆ ಕಾಮಗಾರಿಯು ನಿರ್ಮಾಣವಾಗಿ ಹಲವು ವರ್ಷಗಳಾದವು. ಅದರಲ್ಲಿ ಹೂಳು ಹಾಗೂ ಚಂಗಲ್ ಬೆಳದಿರುತ್ತವೆ. ಸದರಿ ಕಾಲುವೆಯನ್ನು ಸ್ವಚ್ಛಗೊಳಿಸಿ ಅದರಡಿಯಲ್ಲಿ ಬರುವ ಕೆರೆಗಳನ್ನು ತುಂಬಿಸಿ ಎಂದು ಶಾಸಕ ಅಶೋಕ ಮನಗೂಳಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

