Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಕಾಪಾಡುತ್ತಿರುವುದು ಸಂವಿಧಾನ
(ರಾಜ್ಯ ) ಜಿಲ್ಲೆ

ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಕಾಪಾಡುತ್ತಿರುವುದು ಸಂವಿಧಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯ ಚಲವಾದಿ ಸರಕಾರಿ ನೌಕರರ ಸಂಘದ ಉದ್ಘಾಟನೆ ನೆರವೇರಿಸಿದ ಎಸ್ಪಿ ರವೀಂದ್ರ ಗಡಾದೆ ಅಭಿಮತ

ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ರವರು ಬದುಕಿದ್ದಾಗಲೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಡೆಗೆ ಇದ್ದರು. ಅವರ ಸಾವಿನ ನಂತರವೂ ಬಡವರನ್ನು ನಿಕೃಷ್ಟರನ್ನು ಕಟ್ಟ ಕಡೆಯ ವ್ಯಕ್ತಿಯನ್ನು ಕಾಪಾಡುತ್ತಿರುವುದು ಬಾಬಾ ಸಾಹೇಬರು ಬರೆದ ಸಂವಿಧಾನವೇ ವಿನಃ ಯಾವ ವ್ಯಕ್ತಿಯೂ ಅಲ್ಲ, ಸರಕಾರವೂ ಅಲ್ಲ ಎಂದು ಬೆಳಗಾವಿಯ ಎಸ್ಪಿ ರವೀಂದ್ರ ಕೆ. ಗಡಾದೆ ಹೇಳಿದರು.
ಅವರು ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಚಲವಾದಿ ಸರಕಾರಿ ನೌಕರರ ಸಂಘದ ಉದ್ಘಾಟನೆ ನೆರವೇರಿಸಿ ಕರ್ನಾಟಕ ರಾಜ್ಯ ಚಲವಾದಿ ಸರಕಾರಿ ನೌಕರರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ನಮ್ಮೆಲ್ಲರ ಬದುಕಿಗೆ ಆಧಾರ ಸ್ತಂಭ ಆಗಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಕಾಪಾಡಿಕೊಳ್ಳುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಆ ನಿಟ್ಟಿನಲ್ಲಿ ನಾವು ನಮ್ಮ ಜವಾಬ್ದಾರಿಯನ್ನು ನಿರ್ವಹಿಸಿಕೊಂಡು ಹೋಗೋಣ ಎಂದು ಹೇಳಿದರು.
ಬೆಳಗಾವಿ ಹೆಸ್ಕಾಂ ಲೆಕ್ಕ ನಿಯಂತ್ರಣಾಧಿಕಾರಿ ಸುರೇಶ ಎ.ಸಿಂಧೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಇಂದಿನ ಯುಗದಲ್ಲಿ ಪೂರ್ವಾಗ್ರಹ ಪೀಡಿತ ಸಾಹಿತ್ಯವನ್ನು ಓದದೆ. ಅತೀ ಹೆಚ್ಚು ಮೊಬೈಲ್ ಬಳಸದೆ ಧನಾತ್ಮಕ ಸಾಹಿತ್ಯವನ್ನು ಓದುವುದರ ಮೂಲಕ ಬದುಕು ಮತ್ತು ಸಮಾಜವನ್ನು ಸರಿದಾರಿಗೆ ತರಬಹುದಾಗಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಕಲಬುರಗಿಯ ನಾಗರತ್ನ ಬಂತೆ ಜೀ ವಹಿಸಿದ್ದರು. ಬುದ್ದ,ಬಸವ, ಅಂಬೇಡ್ಕರ್ ಭಾವಚಿತ್ರಕ್ಕೆ ಶಹಬಾದ ತಹಶೀಲ್ದಾರ ಜಗದೀಶ ಔರ ಪೂಜೆ ನೆರವೇರಿಸಿದರು. ಶ್ರೀಮತಿ ಅನುರಾಧಾ ಎಲ್. ಚಂಚಲಕರ ಉಪನಿರ್ದೇಶಕರು, ಆಯುಷ ನಿರ್ದೇಶನಾಲಯ, ಬೆಂಗಳೂರು ಹಾಗೂ ಸುನೀಲ ಕಾಂಬಳೆ ಡಿವೈಎಸ್ಪಿ ಜಾರಿ ನಿರ್ದೇಶನಾಲಯ, ವಿಜಯಪುರ ಇವರು ಜ್ಯೋತಿ ಬೆಳಗಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಡಾ.ಅಪ್ಪಗೆರೆ ಸೋಮಶೇಖರ, ಅಂಚೆ ಅಧೀಕ್ಷಕ ಚಂದ್ರಕಾಂತ ಜಿ. ಕಾಂಬಳೆ, ಶಿವಲಿಂಗ ಕುರೆನ್ನವರ ಪೊಲೀಸ್ ಇನ್ಸಪೆಕ್ಟರ್, ಆಲಮಟ್ಟಿ ಜಲಾಶಯ, ಡಾ.ರಮೇಶ ಕಾಂಬಳೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ, ವಕೀಲ ಬಹು ಸಾಹೇಬ ಕಾಂಬಳೆ, ಮುದ್ದಣ್ಣ ಭೀಮನಗರ, ರಾವಸಾಹೇಬ ಗವಾರಿ, ಬಸವರಜ ಚಲವಾದಿ, ಪ್ರೊ. ಶ್ರೀಮತಿ ಸುಜಾತಾ ಚಲವಾದಿ, ಚಿದಾನಂದ ಎಂ. ಕಾಂಬಳೆ, ಕರ್ನಾಟಕ ರಾಜ್ಯ ಚಲವಾದಿ ಸರಕಾರಿ ನೌಕರರ ಸಂಘಟನೆಯ ರಾಜ್ಯಾದ್ಯಕ್ಷ ಚಿದಾನಂದ ಎಮ್. ಕಾಂಬಳೆ, ರಾಜ್ಯ ಹಿರಿಯ ಉಪಾಧ್ಯಕ್ಷ ಅರವಿಂದ ವಾಯ್. ಲಂಬು, ರಾಜ್ಯ ಉಪಾಧ್ಯಕ್ಷ ರವಿಕಾಂತ ಸಿ. ಎಮ್., ರಾಜ್ಯ ಪ್ರಧಾನ ಕಾರ್ಯದರ್ಶಿ ರಾಕೇಶ ಅರ್. ಇಂಗಳಗಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಬಿ. ಸಿಂಗ್ಯಾಗೋಳ, ರಾಜ್ಯ ಸಹ ಕಾರ್ಯದರ್ಶಿಗಳಾದ ರವೀಂದ್ರ ಶಿವಯಗೋಳ, ದುರ್ಗಪ್ಪ ಚಲವಾದಿ, ರಾಜ್ಯ ಸಂಚಾಲಕ ಮೋಹನ ಬಿ. ಗುನ್ನಾಪುರ, ರಾಜ್ಯ ಸಂಚಾಲಕಿ ಶ್ರೀಮತಿ ಚಂಚಲಕರ ಖಜಾಂಚಿ ಸುರೇಶ ದಲ್ಲಾರಿ, ರಾಜ್ಯ ನಿರ್ದೇಶಕರಾದ ಶಿವಾನಂದ ಕಟ್ಟಿಮನಿ, ಪುನೀತಕುಮಾರ, ಕುಮಾರ ಬಾಗೇವಾಡಿ, ರಮೇಶ ಅರ್. ಪಿರಗಾ, ಆಂಜನೇಯಸ್ವಾಮಿ ಹೊಸಮನಿ, ಪಿ.ಎಸ್. ಧರಣಾಕರ, ರವೀಂದ್ರ ಇರಸೂರ, ಯುವರಾಜ ನಾಟೀಕಾರ, ಸಿ.ಕೆ. ಕಾಂಬಳೆ ಇನ್ನಿತರರು ಉಪಸ್ಥಿತರಿದ್ದರು.
ರಾಕೇಶ ಆರ್. ಇಂಗಳಗಿ ಸ್ವಾಗತಿಸಿದರು. ಶಶಿಕಾಂತ ಹಾದಿಮನಿ ನಿರೂಪಿಸಿದರು. ಹಿರಗಪ್ಪ ಬ. ಸಿಂಗ್ಯಾಗೋಳ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಅರವಿಂದ ಲಂಬು ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.