ವಿಜಯಪುರ: ವಿಧಾನ ಸಭೆ ಚುನಾವಣೆ ಹಿನ್ನೆಲೆ
ದಾಖಲೆ ಇಲ್ಲದೆ ಸಾರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ ರೂ.9.95 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಯಲಗೂರು ಕ್ರಾಸ್ ಚೆಕ್ಪೋಸ್ಟ್ ಬಳಿ ಮಂಗಳವಾರ ನಡೆದಿದೆ.
ಹೊಸಪೇಟೆಯಿಂದ ವಿಜಯಪುರಕ್ಕೆ ಹೊರಟಿದ್ದ KSRTC ಬಸ್ನಲ್ಲಿ ಈ ಹಣವನ್ನು ಜಪ್ತಿಗೈದಿದ್ದಾರೆ. ನೂರ್ಖಾನ್ ಧಪೇದಾರ್ ಎಂಬಾತನ ಬಳಿ ಈ ಹಣ ಪತ್ತೆಯಾಗಿದೆ. ಈರುಳ್ಳಿ ಮಾರಾಟ ಮಾಡಿ ಬಂದ ಹಣವಿದು ಎಂದು ನೂರ್ಖಾನ್ ಹೇಳಿಕೊಂಡಿದ್ದಾನೆ. ಅದಕ್ಕೆ ಸಂಬಂಧಿಸಿದ ದಾಖಲೆ ನೀಡಿ ಹಣ ಪಡೆದುಕೊಳ್ಳುವಂತೆ ತಹಶಿಲ್ದಾರ ಸೂಚಿಸಿದ್ದಾರೆ.
ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment