ಸಿಂದಗಿ: ೧೧೦/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರ ಸಿಂದಗಿಯಿಂದ ಸರಬರಾಜಾಗುವ ೧೧ಕೆವ್ಹಿ ಸಿಂದಗಿ-೧ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಮಾರ್ಗಗಳ ಮೇಲೆ ಬರುವ ಎಪಿಎಂಸಿ, ವಿವೇಕಾನಂದ ವೃತ್ತ, ಕನಕದಾಸ ವೃತ್ತ, ಮೋರಟಗಿ ನಾಕಾ, ಬಂದಾಳ ರೋಡ್, ಬಸವ ನಗರ, ಬಸ್ಸ್ಟ್ಯಾಂಡ್, ಟಿಪ್ಪು ಸುಲ್ತಾನ್ ವೃತ್ತ, ಬಸ್ ಡಿಪೋ, ಸಿಂದಗಿ ತಾಂಡಾ ಹಾಗೂ ಕೈಗಾರಿಕಾ ನಗರ ಪ್ರದೇಶಗಳಿಗೆ ಜು.೧೨ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ರವರೆಗೆ ವಿದ್ಯುತ್ ವಿತರಣೆ ಇರುವುದಿಲ್ಲ. ಆದ್ದರಿಂದ ಸದರಿ ಪ್ರದೇಶದ ಗ್ರಾಹಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
